Homeಕರೋನಾ ತಲ್ಲಣಪಂಚ ಕ್ರಮಗಳನ್ನು ಜಾರಿಗೆ ತನ್ನಿ: ನಾಳೆ ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ

ಪಂಚ ಕ್ರಮಗಳನ್ನು ಜಾರಿಗೆ ತನ್ನಿ: ನಾಳೆ ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ

- Advertisement -
- Advertisement -

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ಪಂಚಕ್ರಮಗಳ ಅನುಷ್ಠಾನಕ್ಕಾಗಿ ರಾಜ್ಯದ ಮುಖ್ಯಮಂತ್ರಿಗಳಿಗೆ ತುರ್ತು ಪತ್ರ ಬರೆದಿದ್ದ 400 ಜನ ಸಾಮಾಜಿಕ ಕಾರ್ಯಕರ್ತರು, ಸರ್ಕಾರದಿಂದ ಸ್ಪಂದನೆ ಸಿಗದಿದ್ದ ಕಾರಣಕ್ಕೆ ಮೇ 15 ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮೇ 15ರ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಜನತೆ ಎಲ್ಲರೂ ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆ ದಾಖಲಿಸಬೇಕು. ಜನರ ಜೀವ ಮತ್ತು ಜೀವನ ಉಳಿಸುವುದು ಸರ್ಕಾರದ ಹೊಣೆ ಎಂಬ ಫಲಕಗಳನ್ನು ಹಿಡಿದು ಪ್ರತಿಭಟಿಸೋಣ. ಸರ್ಕಾರ ಕಿವಿಗೊಡದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಹೋರಾಟಗಳಿಗೆ ಮುಂದಾಗೋಣ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೋವಿಡ್ ಉಲ್ಬಣಿಸಿರುವ ಸಂದರ್ಭದಲ್ಲಿ ಜನರ ಜೀವ ಮತ್ತು ಜೀವನ ಉಳಿಸುವಂತೆ ವಾರದ ಹಿಂದೆ ಮುಖ್ಯಮಂತ್ರಿಗಳಿಗೆ ತುರ್ತು ಪತ್ರ ಬರೆದಿದ್ದೆವು. ಖುದ್ದು ಸಿಎಂ ಕಛೇರಿಗೂ ತಲುಪಿಸಿದ್ದೆವು. ಅದರಲ್ಲಿ ಪ್ರಸ್ತುತ ಬಿಕ್ಕಟ್ಟಿನಿಂದ ಜನರನ್ನು ರಕ್ಷಿಸಲು ಪಂಚ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಸರ್ಕಾರ ಕಾರ್ಯರೂಪಕ್ಕೆ ತರಬೇಕೆಂದು ವಿನಂತಿಸಿಕೊಂಡಿದ್ದೆವು. ಅಲ್ಲಿಂದೀಚೆಗೆ ರಾಜ್ಯದಲ್ಲಿ ಸಣ್ಣ ಮಟ್ಟಕ್ಕೆ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಮತ್ತ್ಯಾವ ಕ್ರಮಗಳಿಗೂ ಮುಂದಾಗಿಲ್ಲ. ಕನಿಷ್ಟ ಪ್ರತಿಕ್ರಿಯಿಸುವ ಜವಬ್ದಾರಿಯನ್ನೂ ತೋರಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಚ್.ಎಸ್. ದೊರೆಸ್ವಾಮಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ದೇವನೂರ ಮಹಾದೇವ, ಡಾ. ಕೆ. ಮರುಳಸಿದ್ದಪ್ಪ, ಬಿ.ಟಿ. ಲಲಿತಾ ನಾಯ್ಕ್, ಶಶಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಯಾಸಿನ್ ಮಲ್ಪೆ, ಸಿ.ಎಸ್. ದ್ವಾರಕಾನಾಥ್, ಬಡಗಲಪುರ ನಾಗೇಂದ್ರ, ಎಚ್. ಆರ್. ಬಸವರಾಜಪ್ಪ, ಎಸ್. ಬಾಲನ್, ಎನ್. ವೆಂಕಟೇಶ್, ಕೆ.ಎಲ್. ಅಶೋಕ್ ಮುಂತಾದವರು ಹೇಳಿಕೆಗೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ : ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...