Homeಕರೋನಾ ತಲ್ಲಣಪಂಚ ಕ್ರಮಗಳನ್ನು ಜಾರಿಗೆ ತನ್ನಿ: ನಾಳೆ ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ

ಪಂಚ ಕ್ರಮಗಳನ್ನು ಜಾರಿಗೆ ತನ್ನಿ: ನಾಳೆ ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ

- Advertisement -
- Advertisement -

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ಪಂಚಕ್ರಮಗಳ ಅನುಷ್ಠಾನಕ್ಕಾಗಿ ರಾಜ್ಯದ ಮುಖ್ಯಮಂತ್ರಿಗಳಿಗೆ ತುರ್ತು ಪತ್ರ ಬರೆದಿದ್ದ 400 ಜನ ಸಾಮಾಜಿಕ ಕಾರ್ಯಕರ್ತರು, ಸರ್ಕಾರದಿಂದ ಸ್ಪಂದನೆ ಸಿಗದಿದ್ದ ಕಾರಣಕ್ಕೆ ಮೇ 15 ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮೇ 15ರ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಜನತೆ ಎಲ್ಲರೂ ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆ ದಾಖಲಿಸಬೇಕು. ಜನರ ಜೀವ ಮತ್ತು ಜೀವನ ಉಳಿಸುವುದು ಸರ್ಕಾರದ ಹೊಣೆ ಎಂಬ ಫಲಕಗಳನ್ನು ಹಿಡಿದು ಪ್ರತಿಭಟಿಸೋಣ. ಸರ್ಕಾರ ಕಿವಿಗೊಡದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಹೋರಾಟಗಳಿಗೆ ಮುಂದಾಗೋಣ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೋವಿಡ್ ಉಲ್ಬಣಿಸಿರುವ ಸಂದರ್ಭದಲ್ಲಿ ಜನರ ಜೀವ ಮತ್ತು ಜೀವನ ಉಳಿಸುವಂತೆ ವಾರದ ಹಿಂದೆ ಮುಖ್ಯಮಂತ್ರಿಗಳಿಗೆ ತುರ್ತು ಪತ್ರ ಬರೆದಿದ್ದೆವು. ಖುದ್ದು ಸಿಎಂ ಕಛೇರಿಗೂ ತಲುಪಿಸಿದ್ದೆವು. ಅದರಲ್ಲಿ ಪ್ರಸ್ತುತ ಬಿಕ್ಕಟ್ಟಿನಿಂದ ಜನರನ್ನು ರಕ್ಷಿಸಲು ಪಂಚ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಸರ್ಕಾರ ಕಾರ್ಯರೂಪಕ್ಕೆ ತರಬೇಕೆಂದು ವಿನಂತಿಸಿಕೊಂಡಿದ್ದೆವು. ಅಲ್ಲಿಂದೀಚೆಗೆ ರಾಜ್ಯದಲ್ಲಿ ಸಣ್ಣ ಮಟ್ಟಕ್ಕೆ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಮತ್ತ್ಯಾವ ಕ್ರಮಗಳಿಗೂ ಮುಂದಾಗಿಲ್ಲ. ಕನಿಷ್ಟ ಪ್ರತಿಕ್ರಿಯಿಸುವ ಜವಬ್ದಾರಿಯನ್ನೂ ತೋರಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಚ್.ಎಸ್. ದೊರೆಸ್ವಾಮಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ದೇವನೂರ ಮಹಾದೇವ, ಡಾ. ಕೆ. ಮರುಳಸಿದ್ದಪ್ಪ, ಬಿ.ಟಿ. ಲಲಿತಾ ನಾಯ್ಕ್, ಶಶಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಯಾಸಿನ್ ಮಲ್ಪೆ, ಸಿ.ಎಸ್. ದ್ವಾರಕಾನಾಥ್, ಬಡಗಲಪುರ ನಾಗೇಂದ್ರ, ಎಚ್. ಆರ್. ಬಸವರಾಜಪ್ಪ, ಎಸ್. ಬಾಲನ್, ಎನ್. ವೆಂಕಟೇಶ್, ಕೆ.ಎಲ್. ಅಶೋಕ್ ಮುಂತಾದವರು ಹೇಳಿಕೆಗೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ : ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...