Homeಕರೋನಾ ತಲ್ಲಣಕೋವಿಡ್‌ ಎದುರಿಸುವಲ್ಲಿ ವಿಫಲತೆ: ಡಬಲ್ ಇಂಜಿನ್ ಸರಕಾರಗಳಿಂದ ಡಬಲ್ ಧೋಖಾ

ಕೋವಿಡ್‌ ಎದುರಿಸುವಲ್ಲಿ ವಿಫಲತೆ: ಡಬಲ್ ಇಂಜಿನ್ ಸರಕಾರಗಳಿಂದ ಡಬಲ್ ಧೋಖಾ

ಬಹುಶಃ ಕರ್ನಾಟಕ  ಹೈಕೋರ್ಟ್ ಇಲ್ಲದೇ ಹೋಗಿದ್ದರೆ ರಾಜ್ಯದ ಕೋವಿಡ್ ರೋಗಿಗಳ ಸ್ಥಿತಿ ಊಹಿಸಲೂ ಅಸಾಧ್ಯವಾಗಿರುತ್ತಿತ್ತು.

- Advertisement -
- Advertisement -

ಕೋವಿಡ್ ಎರಡನೇ ಅಲೆಯು ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಅಪ್ಪಳಿಸಿ ಜಗತ್ತನ್ನೇ  ತಲ್ಲಣಗೊಳಿಸಿತು. ಮಾತ್ರವಲ್ಲ ಜಗತ್ತಿನಾದ್ಯಂತ ಎಲ್ಲಾ ಸರ್ಕಾರಗಳ ಬಂಡವಾಳವನ್ನು ಬಯಲು ಮಾಡಿತು. ಎರಡನೇ ಅಲೆಗೆ ಬಹುಪಾಲು ದೇಶಗಳ, ರಾಜ್ಯಗಳ ಸರ್ಕಾರಗಳು ಸಿದ್ಧವಾಗಿರಲಿಲ್ಲ ಅನ್ನುವುದು ನಿಜವಾದರೂ, ಕಠಿಣ ಪರಿಸ್ಥಿತಿಯಲ್ಲಿ ಎಷ್ಟು ವಿವೇಕಾಯುತವಾಗಿ ಸರ್ಕಾರಗಳು ಮತ್ತು ನಾಯಕರು ನಡೆದುಕೊಂಡರು ಎಂಬುದು ಬಹಳ ಮುಖ್ಯವಾಗುತ್ತದೆ.  ಒಕ್ಕೂಟ ಸರ್ಕಾರವಂತೂ ತನಗೂ ಈ ಸಮಸ್ಯೆಗೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸಿತು.  ರೈತ ನಾಯಕ, ಹೋರಾಟಗಳಿಂದ ಬೆಳೆದುಬಂದವರು ಅನ್ನಿಸಿಕೊಂಡಿರುವ ಯಡಿಯೂರಪ್ಪನವರಾದರೂ ಜನರ ಮನಗೆಲ್ಲುವ ಕೆಲಸ ಮಾಡಬಹುದಿತ್ತು ಆದರೆ ಅವರು ಸಹ ಸಂಪೂರ್ಣವಾಗಿ ವಿಫಲರಾದರು.

ಇಡೀ ಕೋವಿಡ್ ಸಂದರ್ಭದಲ್ಲಿ ಯಾವ ಸಮಯದಲ್ಲೂ ಯಡಿಯೂರಪ್ಪ ಅಥವಾ ಅವರ ಮಂತ್ರಿಗಳು ಯಾರೂ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಲೇ ಇಲ್ಲ. ಜನರಿಗೆ ಸರ್ಕಾರದ ಬಗ್ಗೆ ಭರವಸೆ ಹುಟ್ಟುವಂತಹ ಯಾವ ಕೆಲಸವನ್ನೂ ಮಾಡಲಿಲ್ಲ. ಇವರುಗಳಿಗೆ ದುರಾಸಕ್ತಿ ಇತ್ತೇ ಹೊರತು ದೂರದೃಷ್ಟಿ ಇರಲಿಲ್ಲ.

ಸರಕಾರಕ್ಕೆ ಕೋವಿಡ್ ಎದುರಿಸಲು ಮುಂದೇನು ಮಾಡಬೇಕು ಎಂಬುದರ ಬಗ್ಗೆ ಕೊಂಚವೂ ಅರಿವೇ ಇರಲಿಲ್ಲ. ಸಾಂಕ್ರಮಿಕ ರೋಗ ತಜ್ಞರು ಅಥವಾ ವೈರಾಲಾಜಿಸ್ಟ್‌ರ ಬದಲಿಗೆ ಇಬ್ಬರು ಹೃದಯರೋಗ ತಜ್ಞರನ್ನು ಕೋವಿಡ್ ಟಾಸ್ಕ್ ಪೋರ್ಸಿಗೆ ಮುಖ್ಯಸ್ಥರನ್ನಾಗಿ ನೇಮಕ ಮಾಡಿಕೊಂಡ ಸರ್ಕಾರ ಮೊದಲ ಹೆಜ್ಜೆಯಲ್ಲೇ ಎಡವಿತು.

ಇನ್ನು ಸರ್ಕಾರದ ಮಂತ್ರಿಗಳಲ್ಲೇ ಕೊಂಚವೂ ಸಾಮರಸ್ಯ ಇರಲಿಲ್ಲ. ಪ್ರತೀ ಬಾರಿ ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳ ಯೋಜನೆ ಮತ್ತು ಯೋಚನೆಗಳಲ್ಲಿ ತಾಳೆಯೇ ಆಗುತ್ತಿರಲಿಲ್ಲ. ಇಡೀ ಕೋವಿಡ್ ಅವಧಿಯಲ್ಲಿ ಒಂದೇ ಒಂದು ಸಣ್ಣ ನಿರ್ಧಾರವನ್ನೂ ಸರ್ಕಾರ ಸಮರ್ಪಕವಾಗಿ ತೆಗೆದುಕೊಳ್ಳಲಿಲ್ಲ. ಕೆಲವು ಖಾಸಗಿ ಆಸ್ಪತ್ರೆಗಳು ಜನರನ್ನು ಫೀಸಿನ ಹೆಸರಲ್ಲಿ ದೋಚುತ್ತಿದ್ದರೂ, ಸರಕಾರ ಕಣ್ಣು – ಮೂಗು – ಬಾಯಿ ಮುಚ್ಚಿಕೊಂಡು ಕುಳಿತಿತ್ತು.

ಆಮ್ಲಜನಕ ಕೊರತೆಯ ಬಗ್ಗೆ ಸರಿಯಾಗಿ ಸಿದ್ಧತೆಯನ್ನೂ ಮಾಡಲಿಲ್ಲ, ತನ್ನ ಸಂಸದರ ಮೂಲಕ ಒಕ್ಕೂಟ ಸರ್ಕಾರಕ್ಕೆ ಒತ್ತಡ ತರುವ ಕೆಲಸವನ್ನೂ ಮಾಡಲಿಲ್ಲ. ಐಸಿಯು ಬೆಡ್‌ಗಳು, ವೆಂಟಿಲೇಟರ್ ಬೆಡ್‌ಗಳ ಕೊರತೆಯ ವಿಚಾರದಲ್ಲೂ ಸರ್ಕಾರ ಪ್ರಾಮಾಣಿಕವಾಗಿ ನಡೆದುಕೊಳ್ಳದೇ ಲೂಟಿಗೆ ಸಿಕ್ಕ ಅವಕಾಶದಂತೆ ವರ್ತಿಸಿತು. ಲಸಿಕೆಯ ವಿಚಾರದಲ್ಲಂತೂ ಖುದ್ದಾಗಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತಿವಿದು ನಿಮ್ಮ ಬಳಿ ಪ್ಲಾನ್ ಎಂಬುದು ಏನಾದರೂ ಇದೆಯೇ ಎಂದು ಕೇಳಿತು.

ಇನ್ನು ಒಕ್ಕೂಟ ಸರ್ಕಾರ ಹಾವನ್ನು ಕಂಡ ಮುಂಗುಸಿಯ ಹಾಗೆ ಸಾಧ್ಯವಾದಷ್ಟೂ ಕಿರುಕುಳವನ್ನು ಕರ್ನಾಟಕಕ್ಕೆ ಕೊಟ್ಟಿತು. ಡಬಲ್ ಇಂಜಿನ್ ಸರಕಾರ ಜನರನ್ನು ಸಾಯಲು  ಬಿಟ್ಟು ಡಬಲ್ ಧೋಖಾ ಮಾಡಿತು. ತನ್ನ ಹಕ್ಕಿನ ಪಾಲನ್ನು ಪಡೆಯಲು ಪ್ರತೀ ಬಾರಿಯೂ ಕೋರ್ಟ್ ಮುಂದೆ ನಿಲ್ಲಬೇಕಾದ ಸ್ಥಿತಿ ರಾಜ್ಯಕ್ಕೆ ಬಂತು. ಅದು ಆಮ್ಲಜನಕದ ವಿಷಯವಾಗಿರಲಿ, ಲಸಿಕೆಯ ಹಂಚಿಕೆಯಾಗಲಿ, ಅನುದಾನ, ಪರಿಹಾರಗಳಾಗಿರಲಿ ಎಲ್ಲದರಲ್ಲೂ ಒಕ್ಕೂಟ ಸರಕಾರ ನಮ್ಮ ನಾಡನ್ನು ಕೀಳಾಗಿ ಕಂಡಿತು.

ಬಹುಶಃ ಕರ್ನಾಟಕ  ಹೈಕೋರ್ಟ್ ಇಲ್ಲದೇ ಹೋಗಿದ್ದರೆ ರಾಜ್ಯದ ಕೋವಿಡ್ ರೋಗಿಗಳ ಸ್ಥಿತಿ ಊಹಿಸಲೂ ಅಸಾಧ್ಯವಾಗಿರುತ್ತಿತ್ತು.

ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಶಾಸಕ ಅಥವಾ ಸಂಸದನನ್ನು ಹೊಂದಿಲ್ಲದ ಆಮ್ ಆದ್ಮಿ ಪಕ್ಷದಂತಹ ಸಣ್ಣ ಪಕ್ಷವೊಂದು ರಾತೋರಾತ್ರಿ 42 ನುರಿತ ವೈದ್ಯರನ್ನು ಒಟ್ಟುಗೂಡಿಸಿ,   ಹಗಲೂ ರಾತ್ರಿ ಕರೆ ಸ್ವೀಕರಿಸಬಲ್ಲ ಕಾರ್ಯಕರ್ತರ ತಂಡ ರಚಿಸಿ,  24*7 ಸಹಾಯವಾಣಿಯನ್ನು ಆರಂಭಿಸಿತು. ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತ ಆಕ್ಸಿಮೀಟರ್ ವಿತರಣೆ,  ಸುಮಾರು 16000 ಜನ ರೋಗಿಗಳಿಗೆ ಹೋಂ ಐಸೋಲೇಶನ್ ನೆರವು, ಸುಮಾರು 1300 ರೋಗಿಗಳಿಗೆ ಮನೋವೈದ್ಯರಿಂದ ಕೌನ್ಸಿಲಿಂಗ್, 3,00,000 ಕ್ಕೂ ಅಧಿಕ ಮಾಸ್ಕ್ ವಿತರಣೆ, ಅಪಾರ್ಟ್ಮೆಂಟ್‌ಗಳು, ವಸತಿ ಸಮುಚ್ಚಯಗಳು, ಮನೆಗಳು ಹಾಗೂ ಅನಾಥಾಶ್ರಮಗಳು, ವೃದ್ಧಾಶ್ರಮಗಳು, ಕಛೇರಿಗಳು, ಪೊಲೀಸ್ ಠಾಣೆಗಳು, ಪೊಲೀಸ್ ಚೌಕಿಗಳು ಸೇರಿದಂತೆ 18,000 ಕ್ಕೂ ಹೆಚ್ಚು ಕಡೆ ಸ್ಯಾನಿಟೈಶೇಷನ್ ಇಷ್ಟನ್ನೂ ಬರೀ ಬೆಂಗಳೂರು ನಗರವೊಂದರಲ್ಲೇ ಮಾಡಿತ್ತು. ಡಬಲ್ ಇಂಜಿನ್ ಸರಕಾರ ಏನೆಲ್ಲಾ ಮಾಡಬಹುದಿತ್ತು ಯೋಚಿಸಿ!

ಬರೀ ಆಮ್ ಆದ್ಮಿ ಪಕ್ಷ ಮಾತ್ರವಲ್ಲ, ವಿದ್ಯಾರ್ಥಿ ಸಂಘಟನೆಗಳು, ನೂರಾರು ಸಂಘ ಸಂಸ್ಥೆಗಳು, ವ್ಯಕ್ತಿಗಳು ರಾಜ್ಯ ಮತ್ತು ಒಕ್ಕೂಟ ಸರಕಾರ ಮಾಡುವುದಕ್ಕಿಂತಲೂ ಹೆಚ್ಚಿನ ಕೆಲಸವನ್ನು ನಾಜೂಕಾಗಿ, ಯೋಜಿತ ರೀತಿಯಲ್ಲಿ ಮಾಡಿದ್ದಾರೆ.

ಒಕ್ಕೂಟ ಸರಕಾರಕ್ಕೆ ಪೂರ್ತಿ ಎಂಟು ತಿಂಗಳ ಕಾಲಾವಕಾಶ ಇತ್ತು. ಈ ಅವಧಿಯಲ್ಲಿ ‘ಆಕ್ಸಿಜನ್ ಪ್ಲಾಂಟ್`ಗಳನ್ನು  ಅಗತ್ಯಕ್ಕೆ ಅನುಗುಣವಾಗಿ ಸ್ಥಾಪಿಸಬಹುದಿತ್ತು, ಸಾಕಷ್ಟು ಆಕ್ಸಿಜನ್ ಬೆಡ್ ಮತ್ತು ವೆಂಟಿಲೆಟರ್ ಬೆಡ್ ಸಿದ್ಧಪಡಿಸಿಟ್ಟುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಬಹುದಿತ್ತು. ಇದು ಯಾವುದನ್ನೂ ಮಾಡದೇ ಬೀದಿ ಬೀದಿಯಲ್ಲಿ ಜನ ಸಾಯುವಂತೆ ಮಾಡಿದರು. ಇದು ಸರ್ಕಾರದ ವಿಫಲತೆ ಅಲ್ಲ. ಇದು ಸರ್ಕಾರಿ ಪ್ರಾಯೋಜಿತ ಮಾರಣಹೋಮ ಅಂದರೂ ತಪ್ಪಲ್ಲ.

ಒಕ್ಕೂಟ ಸರಕಾರ ಮತ್ತು ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷವು ಒಂದಿಷ್ಟೂ  ಹೊಣೆಗಾರಿಕೆಯನ್ನು ಹೊಂದದೇ ತನ್ನೆಲ್ಲಾ ವಿಫಲತೆಗಳ ಮೂಟೆಯನ್ನು ಕಾಂಗ್ರೆಸ್ ಪಕ್ಷದ ಮೇಲೆ ಹಾಕಿಬಿಟ್ಟಿತು. ಬಾಲಕ್ಕೆ ಬೆಂಕಿ ಹಚ್ಚಿಸಿಕೊಂಡ ಕುನ್ನಿಯಾದರೂ ಪ್ರತಿರೋಧ ತೋರುತ್ತದೆ, ಪಾಪ ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿಯೂ ಇಲ್ಲ.

ಮುಂದೆ ಬರಬಹುದಾದ ಮೂರನೇ ಕೋವಿಡ್ ಅಲೆಗೆ ಅರವಿಂದ್ ಕೇಜ್ರಿವಾಲರ ಸರಕಾರ ಈಗಾಗಲೇ ಸಿದ್ದತೆ ಆರಂಭಿಸಿದೆ. ಪೇಡಿಯಾಟ್ರಿಸ್ಟ್‌ಗಳ ತಂಡ ರಚಿಸಿ ಮಕ್ಕಳ ಐಸಿಯೂಗಳ, ವೆಂಟಿಲೇಟರ್ ಗಳ ನಿರ್ಮಾಣ ಆರಂಭಿಸಿದೆ. ಮಕ್ಕಳಿಗೆ ಆದಷ್ಟೂ ಬೇಗ ಲಸಿಕೆ ಹಾಕಿಸುವ ಸಿದ್ಧತೆ ಮಾಡುತ್ತಿದೆ. ಆದರೆ ಒಕ್ಕೂಟ ಸರಕಾರ ಮತ್ತು ರಾಜ್ಯ ಸರಕಾರಕ್ಕೆ ಈಗಲೂ ಮುಂಬರುವ ದಿನಗಳ ಬಗ್ಗೆ ಚಿಂತೆ ಇದ್ದಂತೆ ಕಾಣುತ್ತಿಲ್ಲ.

ಈ ಕೋವಿಡ್ ಮಹಾಮಾರಿಯ ಅವಧಿಯಲ್ಲಿ ಒಕ್ಕೂಟ ಸರಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಒಂದು ಪಾಠವನ್ನಂತೂ ಕಲಿಯಬಹುದು. ಅದೇನೆಂದರೆ “ಸರ್ಕಾರಗಳು ಯಾವ ರೀತಿ ಸಾಂಕ್ರಾಮಿಕ ರೋಗಗಳನ್ನು ಎದುರಿಸಬಾರದು” ಅಂತ.

ದರ್ಶನ್ ಜೈನ್

(ದರ್ಶನ್ ಜೈನ್ ಸಾಮಾಜಿಕ ಕಾರ್ಯಕರ್ತರು ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿಗಳು)


ಇದನ್ನೂ ಓದಿ: ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...