Homeಕರೋನಾ ತಲ್ಲಣಕೋವಿಡ್‌ ಎದುರಿಸುವಲ್ಲಿ ವಿಫಲತೆ: ಡಬಲ್ ಇಂಜಿನ್ ಸರಕಾರಗಳಿಂದ ಡಬಲ್ ಧೋಖಾ

ಕೋವಿಡ್‌ ಎದುರಿಸುವಲ್ಲಿ ವಿಫಲತೆ: ಡಬಲ್ ಇಂಜಿನ್ ಸರಕಾರಗಳಿಂದ ಡಬಲ್ ಧೋಖಾ

ಬಹುಶಃ ಕರ್ನಾಟಕ  ಹೈಕೋರ್ಟ್ ಇಲ್ಲದೇ ಹೋಗಿದ್ದರೆ ರಾಜ್ಯದ ಕೋವಿಡ್ ರೋಗಿಗಳ ಸ್ಥಿತಿ ಊಹಿಸಲೂ ಅಸಾಧ್ಯವಾಗಿರುತ್ತಿತ್ತು.

- Advertisement -
- Advertisement -

ಕೋವಿಡ್ ಎರಡನೇ ಅಲೆಯು ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಅಪ್ಪಳಿಸಿ ಜಗತ್ತನ್ನೇ  ತಲ್ಲಣಗೊಳಿಸಿತು. ಮಾತ್ರವಲ್ಲ ಜಗತ್ತಿನಾದ್ಯಂತ ಎಲ್ಲಾ ಸರ್ಕಾರಗಳ ಬಂಡವಾಳವನ್ನು ಬಯಲು ಮಾಡಿತು. ಎರಡನೇ ಅಲೆಗೆ ಬಹುಪಾಲು ದೇಶಗಳ, ರಾಜ್ಯಗಳ ಸರ್ಕಾರಗಳು ಸಿದ್ಧವಾಗಿರಲಿಲ್ಲ ಅನ್ನುವುದು ನಿಜವಾದರೂ, ಕಠಿಣ ಪರಿಸ್ಥಿತಿಯಲ್ಲಿ ಎಷ್ಟು ವಿವೇಕಾಯುತವಾಗಿ ಸರ್ಕಾರಗಳು ಮತ್ತು ನಾಯಕರು ನಡೆದುಕೊಂಡರು ಎಂಬುದು ಬಹಳ ಮುಖ್ಯವಾಗುತ್ತದೆ.  ಒಕ್ಕೂಟ ಸರ್ಕಾರವಂತೂ ತನಗೂ ಈ ಸಮಸ್ಯೆಗೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸಿತು.  ರೈತ ನಾಯಕ, ಹೋರಾಟಗಳಿಂದ ಬೆಳೆದುಬಂದವರು ಅನ್ನಿಸಿಕೊಂಡಿರುವ ಯಡಿಯೂರಪ್ಪನವರಾದರೂ ಜನರ ಮನಗೆಲ್ಲುವ ಕೆಲಸ ಮಾಡಬಹುದಿತ್ತು ಆದರೆ ಅವರು ಸಹ ಸಂಪೂರ್ಣವಾಗಿ ವಿಫಲರಾದರು.

ಇಡೀ ಕೋವಿಡ್ ಸಂದರ್ಭದಲ್ಲಿ ಯಾವ ಸಮಯದಲ್ಲೂ ಯಡಿಯೂರಪ್ಪ ಅಥವಾ ಅವರ ಮಂತ್ರಿಗಳು ಯಾರೂ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಲೇ ಇಲ್ಲ. ಜನರಿಗೆ ಸರ್ಕಾರದ ಬಗ್ಗೆ ಭರವಸೆ ಹುಟ್ಟುವಂತಹ ಯಾವ ಕೆಲಸವನ್ನೂ ಮಾಡಲಿಲ್ಲ. ಇವರುಗಳಿಗೆ ದುರಾಸಕ್ತಿ ಇತ್ತೇ ಹೊರತು ದೂರದೃಷ್ಟಿ ಇರಲಿಲ್ಲ.

ಸರಕಾರಕ್ಕೆ ಕೋವಿಡ್ ಎದುರಿಸಲು ಮುಂದೇನು ಮಾಡಬೇಕು ಎಂಬುದರ ಬಗ್ಗೆ ಕೊಂಚವೂ ಅರಿವೇ ಇರಲಿಲ್ಲ. ಸಾಂಕ್ರಮಿಕ ರೋಗ ತಜ್ಞರು ಅಥವಾ ವೈರಾಲಾಜಿಸ್ಟ್‌ರ ಬದಲಿಗೆ ಇಬ್ಬರು ಹೃದಯರೋಗ ತಜ್ಞರನ್ನು ಕೋವಿಡ್ ಟಾಸ್ಕ್ ಪೋರ್ಸಿಗೆ ಮುಖ್ಯಸ್ಥರನ್ನಾಗಿ ನೇಮಕ ಮಾಡಿಕೊಂಡ ಸರ್ಕಾರ ಮೊದಲ ಹೆಜ್ಜೆಯಲ್ಲೇ ಎಡವಿತು.

ಇನ್ನು ಸರ್ಕಾರದ ಮಂತ್ರಿಗಳಲ್ಲೇ ಕೊಂಚವೂ ಸಾಮರಸ್ಯ ಇರಲಿಲ್ಲ. ಪ್ರತೀ ಬಾರಿ ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳ ಯೋಜನೆ ಮತ್ತು ಯೋಚನೆಗಳಲ್ಲಿ ತಾಳೆಯೇ ಆಗುತ್ತಿರಲಿಲ್ಲ. ಇಡೀ ಕೋವಿಡ್ ಅವಧಿಯಲ್ಲಿ ಒಂದೇ ಒಂದು ಸಣ್ಣ ನಿರ್ಧಾರವನ್ನೂ ಸರ್ಕಾರ ಸಮರ್ಪಕವಾಗಿ ತೆಗೆದುಕೊಳ್ಳಲಿಲ್ಲ. ಕೆಲವು ಖಾಸಗಿ ಆಸ್ಪತ್ರೆಗಳು ಜನರನ್ನು ಫೀಸಿನ ಹೆಸರಲ್ಲಿ ದೋಚುತ್ತಿದ್ದರೂ, ಸರಕಾರ ಕಣ್ಣು – ಮೂಗು – ಬಾಯಿ ಮುಚ್ಚಿಕೊಂಡು ಕುಳಿತಿತ್ತು.

ಆಮ್ಲಜನಕ ಕೊರತೆಯ ಬಗ್ಗೆ ಸರಿಯಾಗಿ ಸಿದ್ಧತೆಯನ್ನೂ ಮಾಡಲಿಲ್ಲ, ತನ್ನ ಸಂಸದರ ಮೂಲಕ ಒಕ್ಕೂಟ ಸರ್ಕಾರಕ್ಕೆ ಒತ್ತಡ ತರುವ ಕೆಲಸವನ್ನೂ ಮಾಡಲಿಲ್ಲ. ಐಸಿಯು ಬೆಡ್‌ಗಳು, ವೆಂಟಿಲೇಟರ್ ಬೆಡ್‌ಗಳ ಕೊರತೆಯ ವಿಚಾರದಲ್ಲೂ ಸರ್ಕಾರ ಪ್ರಾಮಾಣಿಕವಾಗಿ ನಡೆದುಕೊಳ್ಳದೇ ಲೂಟಿಗೆ ಸಿಕ್ಕ ಅವಕಾಶದಂತೆ ವರ್ತಿಸಿತು. ಲಸಿಕೆಯ ವಿಚಾರದಲ್ಲಂತೂ ಖುದ್ದಾಗಿ ಹೈಕೋರ್ಟ್ ಕರ್ನಾಟಕ ಸರ್ಕಾರವನ್ನು ತಿವಿದು ನಿಮ್ಮ ಬಳಿ ಪ್ಲಾನ್ ಎಂಬುದು ಏನಾದರೂ ಇದೆಯೇ ಎಂದು ಕೇಳಿತು.

ಇನ್ನು ಒಕ್ಕೂಟ ಸರ್ಕಾರ ಹಾವನ್ನು ಕಂಡ ಮುಂಗುಸಿಯ ಹಾಗೆ ಸಾಧ್ಯವಾದಷ್ಟೂ ಕಿರುಕುಳವನ್ನು ಕರ್ನಾಟಕಕ್ಕೆ ಕೊಟ್ಟಿತು. ಡಬಲ್ ಇಂಜಿನ್ ಸರಕಾರ ಜನರನ್ನು ಸಾಯಲು  ಬಿಟ್ಟು ಡಬಲ್ ಧೋಖಾ ಮಾಡಿತು. ತನ್ನ ಹಕ್ಕಿನ ಪಾಲನ್ನು ಪಡೆಯಲು ಪ್ರತೀ ಬಾರಿಯೂ ಕೋರ್ಟ್ ಮುಂದೆ ನಿಲ್ಲಬೇಕಾದ ಸ್ಥಿತಿ ರಾಜ್ಯಕ್ಕೆ ಬಂತು. ಅದು ಆಮ್ಲಜನಕದ ವಿಷಯವಾಗಿರಲಿ, ಲಸಿಕೆಯ ಹಂಚಿಕೆಯಾಗಲಿ, ಅನುದಾನ, ಪರಿಹಾರಗಳಾಗಿರಲಿ ಎಲ್ಲದರಲ್ಲೂ ಒಕ್ಕೂಟ ಸರಕಾರ ನಮ್ಮ ನಾಡನ್ನು ಕೀಳಾಗಿ ಕಂಡಿತು.

ಬಹುಶಃ ಕರ್ನಾಟಕ  ಹೈಕೋರ್ಟ್ ಇಲ್ಲದೇ ಹೋಗಿದ್ದರೆ ರಾಜ್ಯದ ಕೋವಿಡ್ ರೋಗಿಗಳ ಸ್ಥಿತಿ ಊಹಿಸಲೂ ಅಸಾಧ್ಯವಾಗಿರುತ್ತಿತ್ತು.

ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಶಾಸಕ ಅಥವಾ ಸಂಸದನನ್ನು ಹೊಂದಿಲ್ಲದ ಆಮ್ ಆದ್ಮಿ ಪಕ್ಷದಂತಹ ಸಣ್ಣ ಪಕ್ಷವೊಂದು ರಾತೋರಾತ್ರಿ 42 ನುರಿತ ವೈದ್ಯರನ್ನು ಒಟ್ಟುಗೂಡಿಸಿ,   ಹಗಲೂ ರಾತ್ರಿ ಕರೆ ಸ್ವೀಕರಿಸಬಲ್ಲ ಕಾರ್ಯಕರ್ತರ ತಂಡ ರಚಿಸಿ,  24*7 ಸಹಾಯವಾಣಿಯನ್ನು ಆರಂಭಿಸಿತು. ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತ ಆಕ್ಸಿಮೀಟರ್ ವಿತರಣೆ,  ಸುಮಾರು 16000 ಜನ ರೋಗಿಗಳಿಗೆ ಹೋಂ ಐಸೋಲೇಶನ್ ನೆರವು, ಸುಮಾರು 1300 ರೋಗಿಗಳಿಗೆ ಮನೋವೈದ್ಯರಿಂದ ಕೌನ್ಸಿಲಿಂಗ್, 3,00,000 ಕ್ಕೂ ಅಧಿಕ ಮಾಸ್ಕ್ ವಿತರಣೆ, ಅಪಾರ್ಟ್ಮೆಂಟ್‌ಗಳು, ವಸತಿ ಸಮುಚ್ಚಯಗಳು, ಮನೆಗಳು ಹಾಗೂ ಅನಾಥಾಶ್ರಮಗಳು, ವೃದ್ಧಾಶ್ರಮಗಳು, ಕಛೇರಿಗಳು, ಪೊಲೀಸ್ ಠಾಣೆಗಳು, ಪೊಲೀಸ್ ಚೌಕಿಗಳು ಸೇರಿದಂತೆ 18,000 ಕ್ಕೂ ಹೆಚ್ಚು ಕಡೆ ಸ್ಯಾನಿಟೈಶೇಷನ್ ಇಷ್ಟನ್ನೂ ಬರೀ ಬೆಂಗಳೂರು ನಗರವೊಂದರಲ್ಲೇ ಮಾಡಿತ್ತು. ಡಬಲ್ ಇಂಜಿನ್ ಸರಕಾರ ಏನೆಲ್ಲಾ ಮಾಡಬಹುದಿತ್ತು ಯೋಚಿಸಿ!

ಬರೀ ಆಮ್ ಆದ್ಮಿ ಪಕ್ಷ ಮಾತ್ರವಲ್ಲ, ವಿದ್ಯಾರ್ಥಿ ಸಂಘಟನೆಗಳು, ನೂರಾರು ಸಂಘ ಸಂಸ್ಥೆಗಳು, ವ್ಯಕ್ತಿಗಳು ರಾಜ್ಯ ಮತ್ತು ಒಕ್ಕೂಟ ಸರಕಾರ ಮಾಡುವುದಕ್ಕಿಂತಲೂ ಹೆಚ್ಚಿನ ಕೆಲಸವನ್ನು ನಾಜೂಕಾಗಿ, ಯೋಜಿತ ರೀತಿಯಲ್ಲಿ ಮಾಡಿದ್ದಾರೆ.

ಒಕ್ಕೂಟ ಸರಕಾರಕ್ಕೆ ಪೂರ್ತಿ ಎಂಟು ತಿಂಗಳ ಕಾಲಾವಕಾಶ ಇತ್ತು. ಈ ಅವಧಿಯಲ್ಲಿ ‘ಆಕ್ಸಿಜನ್ ಪ್ಲಾಂಟ್`ಗಳನ್ನು  ಅಗತ್ಯಕ್ಕೆ ಅನುಗುಣವಾಗಿ ಸ್ಥಾಪಿಸಬಹುದಿತ್ತು, ಸಾಕಷ್ಟು ಆಕ್ಸಿಜನ್ ಬೆಡ್ ಮತ್ತು ವೆಂಟಿಲೆಟರ್ ಬೆಡ್ ಸಿದ್ಧಪಡಿಸಿಟ್ಟುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಬಹುದಿತ್ತು. ಇದು ಯಾವುದನ್ನೂ ಮಾಡದೇ ಬೀದಿ ಬೀದಿಯಲ್ಲಿ ಜನ ಸಾಯುವಂತೆ ಮಾಡಿದರು. ಇದು ಸರ್ಕಾರದ ವಿಫಲತೆ ಅಲ್ಲ. ಇದು ಸರ್ಕಾರಿ ಪ್ರಾಯೋಜಿತ ಮಾರಣಹೋಮ ಅಂದರೂ ತಪ್ಪಲ್ಲ.

ಒಕ್ಕೂಟ ಸರಕಾರ ಮತ್ತು ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷವು ಒಂದಿಷ್ಟೂ  ಹೊಣೆಗಾರಿಕೆಯನ್ನು ಹೊಂದದೇ ತನ್ನೆಲ್ಲಾ ವಿಫಲತೆಗಳ ಮೂಟೆಯನ್ನು ಕಾಂಗ್ರೆಸ್ ಪಕ್ಷದ ಮೇಲೆ ಹಾಕಿಬಿಟ್ಟಿತು. ಬಾಲಕ್ಕೆ ಬೆಂಕಿ ಹಚ್ಚಿಸಿಕೊಂಡ ಕುನ್ನಿಯಾದರೂ ಪ್ರತಿರೋಧ ತೋರುತ್ತದೆ, ಪಾಪ ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿಯೂ ಇಲ್ಲ.

ಮುಂದೆ ಬರಬಹುದಾದ ಮೂರನೇ ಕೋವಿಡ್ ಅಲೆಗೆ ಅರವಿಂದ್ ಕೇಜ್ರಿವಾಲರ ಸರಕಾರ ಈಗಾಗಲೇ ಸಿದ್ದತೆ ಆರಂಭಿಸಿದೆ. ಪೇಡಿಯಾಟ್ರಿಸ್ಟ್‌ಗಳ ತಂಡ ರಚಿಸಿ ಮಕ್ಕಳ ಐಸಿಯೂಗಳ, ವೆಂಟಿಲೇಟರ್ ಗಳ ನಿರ್ಮಾಣ ಆರಂಭಿಸಿದೆ. ಮಕ್ಕಳಿಗೆ ಆದಷ್ಟೂ ಬೇಗ ಲಸಿಕೆ ಹಾಕಿಸುವ ಸಿದ್ಧತೆ ಮಾಡುತ್ತಿದೆ. ಆದರೆ ಒಕ್ಕೂಟ ಸರಕಾರ ಮತ್ತು ರಾಜ್ಯ ಸರಕಾರಕ್ಕೆ ಈಗಲೂ ಮುಂಬರುವ ದಿನಗಳ ಬಗ್ಗೆ ಚಿಂತೆ ಇದ್ದಂತೆ ಕಾಣುತ್ತಿಲ್ಲ.

ಈ ಕೋವಿಡ್ ಮಹಾಮಾರಿಯ ಅವಧಿಯಲ್ಲಿ ಒಕ್ಕೂಟ ಸರಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಒಂದು ಪಾಠವನ್ನಂತೂ ಕಲಿಯಬಹುದು. ಅದೇನೆಂದರೆ “ಸರ್ಕಾರಗಳು ಯಾವ ರೀತಿ ಸಾಂಕ್ರಾಮಿಕ ರೋಗಗಳನ್ನು ಎದುರಿಸಬಾರದು” ಅಂತ.

ದರ್ಶನ್ ಜೈನ್

(ದರ್ಶನ್ ಜೈನ್ ಸಾಮಾಜಿಕ ಕಾರ್ಯಕರ್ತರು ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿಗಳು)


ಇದನ್ನೂ ಓದಿ: ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...