Homeಕರೋನಾ ತಲ್ಲಣಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದ ಬಿಜೆಪಿ ನಾಯಕ

ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದ ಬಿಜೆಪಿ ನಾಯಕ

- Advertisement -
- Advertisement -

ಭಾರತದ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಆರೋಗ್ಯ ಮೂಲಸೌಕರ್ಯಗಳ ಕೊರತೆ ಕಾಣಿಸಿಕೊಳ್ಳುತ್ತಿದೆ. ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತಿದ್ದರೂ ಉತ್ತರಾಖಂಡದ ಕುಂಭಮೇಳದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಇದು ವಿಶ್ವದಾದ್ಯಂತ ಅನೇಕ ಮಂದಿಯ ಟೀಕೆಗೂ ಕಾರಣವಾಗಿದೆ.

ಆದರೂ ಕೂಡ ಬಿಜೆಪಿ ಆಡಳಿತಡ ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಕುಂಭಮೇಳದ ಬಗ್ಗೆ ಯಾವುದೇ ಆಕ್ಷೇಪ ಎತ್ತುತ್ತಿಲ್ಲ. ಬದಲಿಗೆ ಕುಂಭಮೇಳವನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ನಡುವೆ ಉತ್ತರಪ್ರದೇಶದ ಬಿಜೆಪಿ ನಾಯಕ ಸುನಿಲ್ ಭಾರಲಾ ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದು ಹೇಳಿಕೆ ನೀಡಿದ್ದಾರೆ.

ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಿರುವ ಜನಸಮೂಹ ಮತ್ತು ಬೃಹತ್ ಧಾರ್ಮಿಕ ಸಭೆಯನ್ನು ಸಮರ್ಥಿಸಿಕೊಂಡ ಯುಪಿ ಬಿಜೆಪಿ ನಾಯಕ ಸುನಿಲ್ ಭಾರಲಾ, ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, “ಕುಂಭ ಕಿ ಆಸ್ತಾ ಕೊರೊನಾ ವೈರಸ್ ಸೇ ಬಹುತ್ ಬಡಿ ಹೈ” (ಕುಂಭಮೇಳದದ ನಂಬಿಕೆ ಕೊರೊನಾ ವೈರಸ್‌ಗಿಂತ ತುಂಬಾ ದೊಡ್ಡದು) ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

“ನಾನು ಏಪ್ರಿಲ್ 13 ರಂದು ಕುಂಭಮೇಳಕ್ಕೆ ಹಾಜರಾಗಿದ್ದೇನೆ ಮತ್ತು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ನಂಬಿಕೆ ಮತ್ತು ಧಾರ್ಮಿಕ ನಂಬಿಕೆಗಳು ಎಲ್ಲ ಕೊರೊನಾ ಮಾನದಂಡಗಳು ಮತ್ತು ಮಾರ್ಗಸೂಚಿಗಳಿಗಿಂತ ದೊಡ್ಡದು” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಕುಂಭಮೇಳದ ಬೃಹತ್ ಆಚರಣೆ ಕೊರೊನಾವನ್ನು ನಿವಾರಿಸುವುದಕ್ಕೆ ನಡೆಯುತ್ತಿದೆ. ಜೊತೆಗೆ ಗಂಗಾ ಮಾತೆ ವೈರಸ್ ವಿರುದ್ಧ ಹೋರಾಡುತ್ತಾಳೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ

ಹರಿದ್ವಾರದಲ್ಲಿ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸುತ್ತಿರುವ ಕಾರಣ ಮಹಾ ಕುಂಭಮೇಳವನ್ನು ಮರ್ಕಾಜ್ ಹೋಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರು ನಡೆಯುತ್ತಿರುವ ಕುಂಭಮೇಳ ಏಪ್ರಿಲ್ 30ರ ವರೆಗೆ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಕೇವಲ 5 ದಿನಗಳ ಅವಧಿಯಲ್ಲಿ ಕುಂಭಮೇಳ ಪ್ರದೇಶದ 2,167 ಜನರು ಕೊರೊನಾ ಸೋಂಕಿಗೆ ಒಳಪಟ್ಟಿದ್ದಾರೆ.

ಆದರೆ ಉತ್ತರಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಕೊರೊನಾ ಏರಿಕೆಯ ನಡುವೆಯೂ ಕುಂಭಮೇಳ ನಡೆಸುವುದನ್ನು ಸಮರ್ಥಿಸಿಕೊಂಡಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ, ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಬೇರೆ ರಾಜ್ಯಗಳು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪ್ರಕಟಿಸುತ್ತಿದ್ದರೆ, ಇತ್ತ ಲಕ್ಷಾಂತರ ಜನರು ಹರಿದ್ವಾರದ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.


ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...