ಭಾರತದ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಆರೋಗ್ಯ ಮೂಲಸೌಕರ್ಯಗಳ ಕೊರತೆ ಕಾಣಿಸಿಕೊಳ್ಳುತ್ತಿದೆ. ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತಿದ್ದರೂ ಉತ್ತರಾಖಂಡದ ಕುಂಭಮೇಳದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಇದು ವಿಶ್ವದಾದ್ಯಂತ ಅನೇಕ ಮಂದಿಯ ಟೀಕೆಗೂ ಕಾರಣವಾಗಿದೆ.
ಆದರೂ ಕೂಡ ಬಿಜೆಪಿ ಆಡಳಿತಡ ಕೇಂದ್ರ ಸರ್ಕಾರ, ಉತ್ತರಾಖಂಡ ಸರ್ಕಾರ ಕುಂಭಮೇಳದ ಬಗ್ಗೆ ಯಾವುದೇ ಆಕ್ಷೇಪ ಎತ್ತುತ್ತಿಲ್ಲ. ಬದಲಿಗೆ ಕುಂಭಮೇಳವನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ನಡುವೆ ಉತ್ತರಪ್ರದೇಶದ ಬಿಜೆಪಿ ನಾಯಕ ಸುನಿಲ್ ಭಾರಲಾ ಕುಂಭಮೇಳದ ನಂಬಿಕೆ ಕೊರೊನಾ ನಿಯಮಗಳಿಗಿಂತ ದೊಡ್ಡದು ಎಂದು ಹೇಳಿಕೆ ನೀಡಿದ್ದಾರೆ.
ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಿರುವ ಜನಸಮೂಹ ಮತ್ತು ಬೃಹತ್ ಧಾರ್ಮಿಕ ಸಭೆಯನ್ನು ಸಮರ್ಥಿಸಿಕೊಂಡ ಯುಪಿ ಬಿಜೆಪಿ ನಾಯಕ ಸುನಿಲ್ ಭಾರಲಾ, ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, “ಕುಂಭ ಕಿ ಆಸ್ತಾ ಕೊರೊನಾ ವೈರಸ್ ಸೇ ಬಹುತ್ ಬಡಿ ಹೈ” (ಕುಂಭಮೇಳದದ ನಂಬಿಕೆ ಕೊರೊನಾ ವೈರಸ್ಗಿಂತ ತುಂಬಾ ದೊಡ್ಡದು) ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!
“ನಾನು ಏಪ್ರಿಲ್ 13 ರಂದು ಕುಂಭಮೇಳಕ್ಕೆ ಹಾಜರಾಗಿದ್ದೇನೆ ಮತ್ತು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ನಂಬಿಕೆ ಮತ್ತು ಧಾರ್ಮಿಕ ನಂಬಿಕೆಗಳು ಎಲ್ಲ ಕೊರೊನಾ ಮಾನದಂಡಗಳು ಮತ್ತು ಮಾರ್ಗಸೂಚಿಗಳಿಗಿಂತ ದೊಡ್ಡದು” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.
ಕುಂಭಮೇಳದ ಬೃಹತ್ ಆಚರಣೆ ಕೊರೊನಾವನ್ನು ನಿವಾರಿಸುವುದಕ್ಕೆ ನಡೆಯುತ್ತಿದೆ. ಜೊತೆಗೆ ಗಂಗಾ ಮಾತೆ ವೈರಸ್ ವಿರುದ್ಧ ಹೋರಾಡುತ್ತಾಳೆ ಎಂದು ಹೇಳಿದ್ದಾರೆ.
#कुंभ की आस्था, कोरोना से बहुत बड़ी है, गंगा माँ ही इस #कोरोना_वायरस का सर्वनाश करेगी।@ndtvindia @sanket @2021mahakumbh #Live https://t.co/uYZiSvE2UC
— Pt Sunil Bharala (@sunilbharala) April 15, 2021
ಇದನ್ನೂ ಓದಿ: ಸಭೆ-ಸಮಾರಂಭಗಳಲ್ಲಿ 200 ಜನಕ್ಕಷ್ಟೇ ಅವಕಾಶ: ಕುಂಭಮೇಳಕ್ಕೆ ವಿನಾಯಿತಿ ನೀಡಿದ ಉತ್ತರಾಖಂಡ ಸರ್ಕಾರ
ಹರಿದ್ವಾರದಲ್ಲಿ ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸುತ್ತಿರುವ ಕಾರಣ ಮಹಾ ಕುಂಭಮೇಳವನ್ನು ಮರ್ಕಾಜ್ ಹೋಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರು ನಡೆಯುತ್ತಿರುವ ಕುಂಭಮೇಳ ಏಪ್ರಿಲ್ 30ರ ವರೆಗೆ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಕೇವಲ 5 ದಿನಗಳ ಅವಧಿಯಲ್ಲಿ ಕುಂಭಮೇಳ ಪ್ರದೇಶದ 2,167 ಜನರು ಕೊರೊನಾ ಸೋಂಕಿಗೆ ಒಳಪಟ್ಟಿದ್ದಾರೆ.
ಆದರೆ ಉತ್ತರಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಕೊರೊನಾ ಏರಿಕೆಯ ನಡುವೆಯೂ ಕುಂಭಮೇಳ ನಡೆಸುವುದನ್ನು ಸಮರ್ಥಿಸಿಕೊಂಡಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ, ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಬೇರೆ ರಾಜ್ಯಗಳು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪ್ರಕಟಿಸುತ್ತಿದ್ದರೆ, ಇತ್ತ ಲಕ್ಷಾಂತರ ಜನರು ಹರಿದ್ವಾರದ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!