Homeಚಳವಳಿನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ಇಂದು ಭಾರತವೂ ಸಹ ಆ ಎಪ್ಪತ್ತು-ಎಂಬತ್ರರ ದಶಕದ ಪಾಕಿಸ್ತಾನದ ನಿರಂಕುಶ ಪ್ರಬುತ್ವದ, ಮತೀಯವಾದದ ವ್ಯವಸ್ಥೆಗೆ ಜಾರುತ್ತಿದೆ. ಸಂಘ ಪರಿವಾರದ ಸುಳ್ಳುಗಳು ತಾಂಡವವಾಡುತ್ತಿವೆ, ಸತ್ಯದ ದನಿ ಕ್ಷೀಣಗೊಂಡಿದೆ.

- Advertisement -
- Advertisement -

(ಪತ್ರಿಕಾ ವರದಿ : ಕಳೆದ ವಾರ ಐಐಟಿ – ಖರಗಪುರನ ವಿದ್ಯಾರ್ಥಿಗಳು ‘ಜಾಮಿಯ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಸಿಎಎ-ಎನ್‌ಆರ್‌ಸಿ ಪ್ರತಿಭಟನೆ ವಿರುದ್ದ ದಾಳಿ ಮಾಡಿದ ಪೋಲೀಸರ ಕೃತ್ಯದ ವಿರುದ್ದ’ ಪ್ರತಿಭಟಿಸುತ್ತಿದ್ದರು. ಆದರೆ ಇವರು ದ್ವೇಷವನ್ನು ಹರಡುತ್ತಿದ್ದಾರೆ’ ಎಂದು ಅಲ್ಲಿಯ ಪ್ರಾಧ್ಯಾಪಕರೊಬ್ಬರು ಆರೋಪಿಸಿದರು. ಇಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಕಾರಣವೇನೆಂದರೆ ಅಹಿಂಸಾತ್ಮಕವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳು ಫೈಜ್ ಅವರ ಪ್ರಖ್ಯಾನ ಕವಿತೆ ‘ನಾವೂ ನೋಡುತ್ತೇವೆ’ (ಹಮ್ ಬೀ ದೇಖೇಂಗೆ) ಯ ಕೆಲ ಸಾಲುಗಳನ್ನು ಬಳಸಿಕೊಂಡಿದ್ದರು. ಫೈಜ್ ಈ ಸಾಲುಗಳು ಆ ಪ್ರಾದ್ಯಾಪಕರ ಪ್ರಕಾರ ದ್ವೇಷ ಬಿತ್ತುತ್ತವೆ !!)

ಪಾಕಿಸ್ತಾನದ ಲೇಖಕ, ಕವಿ ಫೈಜ್ ‘ನಾವೂ ನೋಡುತ್ತೇವೆ’ ಕವಿತೆಯನ್ನು ಸರ್ವಾಧಿಕಾರಿ ಜಿಯಾ-ಉಲ್-ಹಕ್ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ 1979ರಲ್ಲಿ ಬರೆದರು. ಇದು ಬಂಡಾಯ ಕವಿತೆ. ಜಿಯಾ ಉಲ್ ಹಕ್ ಸಾಂಪ್ರದಾಯಿಕ ಇಸ್ಲಾಂ ಧರ್ಮವನ್ನು ತನ್ನ ಸರ್ವಾಧಿಕಾರಕ್ಕೆ ಆಯುಧವಾಗಿ ಬಳಸಿಕೊಂಡು ತನ್ನ ನಿರಂಕುಶ ಪ್ರಭುತ್ವದ ಹಿಡಿತ ಗಟ್ಟಿಗೊಳಿಸಿಕೊಂಡ. ಫೈಜ್ ‘ಜಿಯಾ ಅದಿಕಾರದ ಹುಚ್ಚು ಹಿಡಿಸಿಕೊಂಡಿದ್ದಾರೆ, ಅವರು ದೈವ ಭಕ್ತರಲ್ಲ’ ಎಂದು ಹೇಳಲು ತಮ್ಮ ಈ ಕವಿತೆಯಲ್ಲಿ ಧರ್ಮವನ್ನು ಸಾಂಕೇತಿಕವಾಗಿ ಬಳಸಿಕೊಂಡು ನಂಬಿಕೆಯ ಪ್ರತಿಮಾ ಸೃಷ್ಟಿಯ ಮೂಲಕ ಬಂಡಾಯದ ದನಿ ಸಿಡಿಸಿದ್ದಾರೆ

ಈ ಕವಿತೆಯ (ಒರಟಾದ) ಭಾವಾನುವಾದ

ನಾವೂ ನೋಡುತ್ತೇವೆ —

ನಾವು ನೋಡುತ್ತೇವೆ, ನಿಜಕ್ಕೂ, ನಾವೂ  ಸಾಕ್ಷಿಯಾಗಬೇಕು
ಎಲ್ಲಾ ಚಿರಕಾಲದ ಮೇಲೆ ನಾವು ಕೆತ್ತಿದ ವಾಗ್ದಾನದ ದಿನಕ್ಕೆ

ನಿರಂಕುಶದ, ಶೋಷಣೆಯ ಬೆಟ್ಟಗಳು ಹತ್ತಿಯಂತೆ ಹಾರಿ ಹೋಗುವಾಗ  ನಮ್ಮ ಕಾಲ ಕೆಳಗಿರುವ ಶೋಷಿತರ ಭೂಮಿಯು ಕಂಪಿಸಿ ನಡುಗುವಾಗ  ಆರ್ಭಟಿಸುವ ಗುಡುಗು, ಸೀಳುವ ಮಿಂಚು ಆಳುವವರ ಮೇಲೆ ಠಳಾಯಿಸುವಾಗ
ನಾವು ಖಂಡಿತ ಸಾಕ್ಷಿಯಾಗುತ್ತೇವೆ

ಅಸತ್ಯದ ವಿಗ್ರಹಗಳನ್ನು ದೇವರ ಕಾಬಾದ ನೆಲೆಯಿಂದಾಚೆ ಎಸೆದುಬಿಡುವಾಗ
ನಾವು-ಶುದ್ದರು, ಪವಿತ್ರ ಸ್ಥಳದಿಂದ ಹೊರದೂಡಲ್ಪಟ್ಟವರು (ಶೋಷಿತರು) ಸಿಂಹಾಸನಗಳ ಮೇಲೆ ಅದಿಕಾರ ಸ್ಥಾಪಿಸುತ್ತೇವಾಗ
ಕಿರೀಟಗಳನ್ನು ಎಸೆದುಬಿಡುವಾಗ,  ಸಿಂಹಾಸನಗಳನ್ನು ದ್ವಂಸಗೊಳಿಸುವಾಗ

ಆಗ ಹೆಸರು ಮಾತ್ರ ಉಳಿದುಕೊಳ್ಳುತ್ತದೆ, ಅದು ಅಗೋಚರವೂ ಹೌದು ಮತ್ತು ಗೋಚರವೂ ಹೌದು
ಅವೆರೆಡೂ ನೋಟವೂ ಹೌದು, ನೋಡುಗನೂ ಹೌದು, ಸತ್ಯದ ದನಿಯು ಮುಗಿಲೆತ್ತರಕ್ಕೆ

ಅದು ನಾನು ಮತ್ತು ನೀನು, ಮತ್ತು ದೇವರ ಮಕ್ಕಳು ಆಳ್ವಿಕೆ ನಡೆಸುತ್ತಾರೆ
ಅದು ನಾನು ಮತ್ತು ನೀನು
ನಾವು ಸಾಕ್ಷಿಯಾಗುತ್ತೇವೆ, ಖಂಡಿತವಾಗಿ ನಾವೂ ಸಾಕ್ಷಿಯಾಗಬೇಕು

ಸಹಜವಾಗಿಯೆ ಸರ್ವಾದಿಕಾರಿ ಜಿಯಾ ಈ ಕ್ರಾಂತಿಕಾರಿ ಕವಿತೆಯನ್ನು ನಿಷೇಧಿಸಿದರು. ಆದರೆ 1986ರಲ್ಲಿ ಪಾಕಿಸ್ತಾನದ ಖ್ಯಾತ ಗಜಲ್ ಗಾಯಕಿ ಇಕ್ಬಾಲ್ ಬಾನು ಈ ಕವಿತೆಯನ್ನು ಪ್ರೇಕ್ಷಕರ ಮುಂದೆ ಹಾಡಿದಾಗ ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆ ಮುಗಿಲು ಮುಟ್ಟಿತು. ಸುಹಾಂತ್ ಸಿಂಗ್ ಬರೆಯುತ್ತಾರೆ ‘ಆದಿನ ಪ್ರೇಕ್ಷಕರು ಕಿರೀಟಗಳನ್ನು ಎಸೆದು ಬಿಡುತ್ತೇವೆ, ಸಿಂಹಾಸನಗಳನ್ನು ಉರುಳಿಸುತ್ತೇವೆ (ಸಬ್ ತಾಜ್ ಉಚಾಲೆ ಜಾಯೆಂಗೆ, ಸಬ್ ತಕ್ತ್ ಗಿರಾಯೆ ಜಾಯೆಂಗೆ) ಎಂದು ಹುರುಪಿನಿಂದ ಹಾಡುತ್ತಿದ್ದರು’

ಇದು ಕವಿತೆಗಿರುವ ಶಕ್ತಿ. ಆದರೆ ಜೊತೆಗೆ ಕವಿ, ಲೇಖಕನ ನೈತಿಕತೆ ಮತ್ತು ಬದ್ದತೆ ಸಹ ಮುಖ್ಯವಾಗುತ್ತದೆ. ಫೈಜ್ ಅವರ ನೈತಿಕತೆ ಮತ್ತು ಮೌಲ್ಯಗಳ ಕುರಿತು ಪಾಕಿಸ್ತಾನ ಪ್ರಜೆಗಳಿಗೆ ಚಿರಪರಿಚಿತವಾಗಿತ್ತು. ಜನರನ್ನು ಬಹುದಿನಗಳ ಕಾಲ ಅದುಮಿಡಲು ಸಾದ್ಯವಿಲ್ಲ. ದಂಗೆಗಾಗಿ ಕಾಯುತ್ತಾರೆ. ಆ ಹೊಳಹು ಕವಿತೆಯ ರೂಪದಲ್ಲಿಯೂ ಇರಬಹುದು ಎಂಬುದಕ್ಕೆ ‘ನಾವೂ ನೋಡುತ್ತೇವೆ’ ಕವಿತೆ ಸಾಕ್ಷಿ. ಆದರೆ ಇಂದು ಭಾರತವೂ ಸಹ ಆ ಎಪ್ಪತ್ತು-ಎಂಬತ್ರರ ದಶಕದ ಪಾಕಿಸ್ತಾನದ ನಿರಂಕುಶ ಪ್ರಬುತ್ವದ, ಮತೀಯವಾದದ ವ್ಯವಸ್ಥೆಗೆ ಜಾರುತ್ತಿದೆ. ಸಂಘ ಪರಿವಾರದ ಸುಳ್ಳುಗಳು ತಾಂಡವವಾಡುತ್ತಿವೆ, ಸತ್ಯದ ದನಿ ಕ್ಷೀಣಗೊಂಡಿದೆ. ಆ ಸತ್ಯದ ದನಿಯನ್ನು ಮುಗಿಲೆತ್ತರಕ್ಕೇರಿಸುವವರೂ ಸಹ ದಿಕ್ಕು ತೋಚದಂತಾಗಿದ್ದಾರೆ. ಫೈಜ್ ಮತ್ತೆ ಮತ್ತೆ ನಮಗೆ ಸಾಕ್ಷಿಪ್ರಜ್ಞೆಯಾಗುತ್ತಾರೆ.

ಇಂದು ಭಾರತದಲ್ಲಿ ಕರಾಳ ಶಾಸನಗಳಾದ ಸಿಎಎ-ಎನ್‌ಆರ್‌ಸಿ ವಿರುದ್ದ ನಾಗರಿಕರು, ವಿದ್ಯಾರ್ಥಿಗಳು ದಂಗೆ ಎದ್ದಿದ್ದಾರೆ. ಇಂದು ಈ ಸಿಎಎ ಶಾಸನವು ಮೂಲಬೂತ ಹಕ್ಕುಗಳಾದ ಸಮಾನತೆ, ಸ್ವಾತಂತ್ರ್‍ಯ ಮತ್ತು ಬಂಧುತ್ವಗಳನ್ನು ಉಲ್ಲಂಘಿಸುತ್ತದೆ. ಆ ಮೂಲಕ ದೇಶದ ಘನತೆ ಸಹ ನಾಶವಾಗುತ್ತಿದೆ. ಮೋದಿ-ಶಾ-ಆರೆಸ್ಸಸ್ ಜೋಡಿಗೆ ಸುಳ್ಳುಗಳನ್ನು ಎತ್ತರದ ದನಿಯಲ್ಲಿ ಮಾತನಾಡಿದರೆ ಅದನ್ನು ಜನರಿಗೆ ತಲುಪಿಸಬಹುದು ಎಂದು ನಂಬಿದ್ದಾರೆ. ಚುನಾವಣೆಗಳಲ್ಲಿ ಅವರ ಗೆಲುವು ಇವರ ಈ ಆತ್ಮವಿಶ್ವಾಸಕ್ಕೆ ಕಾರಣವಾಗಿದೆ. ಇವರ ಸುಳ್ಳುಗಳಿಗೆ, ಮತೀಯವಾದಕ್ಕೆ ತಲೆದೂಗಿಸುವಂತಹ ಬಕ್ತರ ಶೇಕಡಾವಾರು ಪ್ರಮಾಣ ಇಂದಿಗೂ ಕಡಿಮೆಯಾಗಿಲ್ಲ.

ಇಲ್ಲಿ ಆಳುವವರಿಗೂ ಸಂವಿದಾನದ ಪೀಠಿಕೆಯ, ನಿತಿಸಂಹಿತೆಗಳ ಅರಿವಿಲ್ಲ ಮತ್ತು ಅವರು ಅದನ್ನು ತಿರಸ್ಕರಿಸಿದ್ದಾರೆ ಆದರೆ ಆಳಿಸಿಕೊಳ್ಳುವವರೂ ಸಹ ಇದೆ ಹಾದಿಯಲ್ಲಿರುವುದೆ ಇಂದಿನ ಭಾರತದ ದುರಂತ. ‘ಕಿರೀಟಗಳನ್ನು ಎಸೆದು ಬಿಡುತ್ತೇವೆ, ಸಿಂಹಾಸನಗಳನ್ನು ಉರುಳಿಸುತ್ತೇವೆ’ ಎಂದು ಆತ್ಮವಿಶ್ವಾಸದಿಂದ ಮಾತನಾಡುವ ಬಂಡಾಯಗಾರರು ಇಂದಿಗೂ ಅಲ್ಪಸಂಖ್ಯೆಯಲ್ಲಿದ್ದಾರೆ. ಈ ಸಿಎಎ-ಎನ್‌ಆರ್‌ಸಿ ವಿರುದ್ದದ ಹೋರಾಟದ ಬಿರುಸು ದಿನದಿನಕ್ಕೂ ಹೆಚ್ಚುತ್ತಿರುವುದು ನಿಜ. ಆದರೆ ಪೌರತ್ವ, ದೇಶ, ಪ್ರಜೆ ಇವುಗಳ ಸಮಜೋ-ಸಾಂಸ್ಕೃತಿಕ-ರಾಜಕೀಯ ಸಂಕೀರ್ಣತೆಯನ್ನು ಜನತೆಗೆ ಮನದಟ್ಟು ಮಾಡಿಕೊಡದಿದ್ದರೆ ಮುಂದಿನ ದಿನಗಳು ದುರಂತಮಯವಾಗಲಿದೆ

ಸಂವಿಧಾನ ಪ್ರಸ್ತಾವನೆಯಲ್ಲಿನ ಆರಂಬದ ಸಾಲುಗಳಾದ ಸ್ವಾಯತ್ತತೆ, ಸಮಾಜವಾದ, ಪ್ರಜಾಪ್ರಬುತ್ವ ಮತ್ತು ಗಣರಾಜ್ಯ ತತ್ವಗಳು ಭಾರತ ದೇಶದ ಅಡಿಪಾಯಗಳು. ಆದರೆ ಈ ಕುರಿತು ನಮ್ಮ ಜನಮಾನಸದಲ್ಲಿ ಅರಿವು, ಆಳವಾದ ಬದ್ದತೆ ಮತ್ತು ಸಂವೇದನೆಯ ಕೊರತೆ ಇದೆ. ಸಂವಿದಾನದ ಅನುಚ್ಚೇಧ 14, 15, 16, 17, 21 22, 23, 24, 25 ಸಾರ್ವತ್ರಿಕವಾಗಿ ಪ್ರಜೆಗಳ ಮೂಲಭೂತ ಹಕ್ಕುಗಳನ್ನು ಕಾಪಾಡುತ್ತವೆ. ಸಂವಿದಾನದ ಪ್ರಸ್ತಾವನೆ ಮತ್ತು ಅನುಚ್ಚೇಧಗಳ ಅನುಸಾರ ದೇಶವೆಂದರೆ ಒಂದು ಬಹುತ್ವದ ಸಮಾಜ, ನೈತಿಕತೆ, ಐಕ್ಯತೆ. ಅಕ್ರಮ ವಲಸಿಗರು ಎಂದರೆ ಅವರು ಮನುಶ್ಯರು ಎಂದರ್ಥ. ಅವರು ನಾಗರಿಕರು ಎಂಬದೂ ನಿಜ. ಆದರೆ ಅವರ ಘನತೆ ಕುಂದಿಸುವ ಹಕ್ಕು ಯಾವ ಪ್ರಬುತ್ವಕ್ಕೂ ಇಲ್ಲ. ಈ ಮನುಷ್ಯ ಮತ್ತು ಮಾನವೀಯತೆಯನ್ನು ರಾಜಕೀಯಗೊಳಿಸಿ ಅವರನ್ನೆಲ್ಲ ನಿರ್ದಿಷ್ಟ ಪ್ರದೇಶದ ಗಡಿಯೊಳಗೆ ನಾಗರಿಕರೆಂದು ಮೌಲ್ಯಮಾಪನ ಮಾಡುವುದೆ ಸಂವಿದಾನದ ನೀತಿಸಂಹಿತೆಗಳ ಉಲ್ಲಂಘನೆಯಾಗುತ್ತದೆ.

ಇಂದು ಮೋದಿ-ಶಾ ಜೋಡಿಯು ದೇಶವನ್ನು ಇಲ್ಲಿನ ನಾಗರಿಕರನ್ನು ಒಂದು ಬೌಗೋಳಿಕತೆಗೆ ಸೀಮಿತಗೊಳಿಸಿ ಅವರಲ್ಲಿ ಬಹುಸಂಖ್ಯಾತರಿಗೆ ಮಾತ್ರ ಪೌರತ್ವ ಕೊಡಿಸುವ ಮತಾಂಧ ರಾಜಕಾರಣ ಹೇರುತ್ತಿದ್ದಾರೆ. ಮುಸ್ಲಿಂರು ಎನ್ನುವ ಆದಾರದ ಮೇಲೆ ವಲಸಿಗರನ್ನು ವರ್ಗೀಕರಿಸುವ ಮೂಲಕ ಸಂವಿದಾನದ ಆಶಯವಾದ ಬಂದುತ್ವವನ್ನೆ ನಾಶ ಮಾಡಲಾಗುತ್ತಿದೆ. ಆ ಮೂಲಕ ಸೆಕ್ಯುಲರಿಸಂ ಸಹ ಧೂಳಿಪಟವಾಗುತ್ತದೆ. ಬಿಜೆಪಿ ಪಕ್ಷದ ಈ ಸರ್ವಾದಿಕಾರಿ ರಾಜಕಾರಣಕ್ಕೆ ಮುಖಾಮುಖಿಯಾಗುವ ದಿಟ್ಟತೆ, ಬದ್ದತೆ ಇಂಡಿಯಾದ ರಾಜಕೀಯ ಪಕ್ಷಗಳಿಲ್ಲ. ಮತ್ತೊಂದೆಡೆ ಸಂಘ ಪರಿವಾರವು ಈ ದೇಶದ ಬಹುಸಂಖ್ಯಾತರನ್ನು ಈ ಮತೀಯ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದನ್ನು ಮನದಟ್ಟು ಮಾಡಿಕೊಡಲು ಪ್ರಗತಿಪರರು ಮತ್ತೆ ಮತ್ತೆ ಸೋಲುತ್ತಿದ್ದಾರೆ. ಇದು ಕೇವಲ ಅದ್ಯಯನದ ಕೊರತೆ ಮಾತ್ರವಲ್ಲ, ಸಮಾಜ, ನಮ್ಮ ಬದುಕಿನ ದೃಷ್ಟಿಕೋನ ಮತ್ತು ನಮ್ಮ ಹೋರಾಟ ಮೂರರ ನಡುವಿನ ಸಂವಹನ, ನಂಬಿಕೆ ಮತ್ತು ತಾಳಮೇಳದ ಕೊರತೆ ಇದೆ. ಇದನ್ನು ಮೀರುವುದು ಹೇಗೆ?

ಅಚನ್ ವೈನಿಕ್ ಅವರು “ಹೋರಾಟದಲ್ಲಿ ರಾಶ್ಟ್ರೀಯತೆ ಕಲ್ಪನೆಯ ಸಂಕೀರ್ಣತೆಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಸ್ಪರ್ದಾತ್ಮಕ ರಾಶ್ಟ್ರೀಯತೆಗಳು ಯಾಕಿವೆ ಮತ್ತು ನಾವು ಯಾವ ದಿಕ್ಕೆನೆಡೆಗೆ ಸಾಗಬೇಕು ಎಂದು ನಿರ್ಣಯಿಸಬೇಕಾಗಿದೆ. ರಾಶ್ಟ್ರೀಯತೆಯು ಹಳೆಯದೆ ಅಥವಾ ಹೊಸದೆ? ರಾಶ್ಟ್ರೀಯತೆಯು ವಸ್ತುನಿಶ್ಟ ಪರಿಚೆಗಳ ಮೇಲೆ ಆದಾರವಾಗಿದೆಯೆ? ಅತವಾ ವ್ಯಕ್ತಿನಿಶ್ಟ ಗುಣಲಕ್ಷಣಗಳ ಮೇಲೆ ಆದಾರವಾಗಿದೆಯೆ? ರಾಶ್ಟ್ರೀಯತೆಯು ಪೌರಸಂಬಂದಿತವೆ ಅಥವಾ ಜನಾಂಗೀಯತೆಯೆ? ಅಥವಾ ಅವೆರಡೂ? ರಾಶ್ಟ್ರೀಯತೆಯು ವಿಶ್ವಾವ್ಯಾಪಿಯೆ ಅಥವಾ ವೈಯುಕ್ತಿಕವಾದಿಯೆ? ಅಥವಾ ಅವೆರಡೂ? ರಾಶ್ಟ್ರೀಯತೆ ತತ್ವ ಸಿದ್ದಾಂತವೆ? ಬಾವಾವೇಶವೆ? ಅಥವಾ ಅವೆರಡೂ? ರಾಶ್ಟ್ರೀಯತೆಯು ಒಳಗೊಳ್ಳುವಿಕೆಯೆ? ಹೊರಗಿಡುವಿಕೆಯೆ? ಅಥವಾ ಅವೆರಡೂ? ಅದು ಸಾಂಸ್ಕೃತಿಕವೆ? ರಾಜಕೀಯವೆ? ಅತವಾ ಅವೆರಡೂ? ಅದು ಒಳ್ಳೆಯದೆ? ಕೆಟ್ಟದೆ? ಅಥವಾ ಅವೆರಡೂ? ಕೆಲಸಂದರ್ಬದಲ್ಲಿ ಅದು ಒಳ್ಳೆಯದೆ? ಅದರಲ್ಲಿ ಕೆಲ ಕೆಟ್ಟ ಅಂಶಗಳಿವೆಯೆ? ಅದು ತೀರಾ ಕೆಟ್ಟದಾಗಿದರೂ ಸಹ ಕೆಲವೊಮ್ಮೆ ಅದರಲ್ಲಿ ಒಳ್ಳೆಯ ಅಂಶಗಳಿರುತ್ತದೆಯೆ?” ಎಂದು ಬರೆಯುತ್ತಾರೆ.

ಈ ಎಲ್ಲಾ ಪ್ರಶ್ನೆಗಳಿಗೆ ನಾವು ಸೂಕ್ತ ಉತ್ತರಗಳನ್ನು ಕಂಡುಕೊಳ್ಳುವುದು ಮಾತ್ರವಲ್ಲ ಇಂದು ಪೌರತ್ವದ ಉಮೇದಿಯಲ್ಲಿ, ಹಪಾಹಪಿತನದಲ್ಲಿರುವ ಬಹುಸಂಖ್ಯಾತರಿಗೂ ಇದರ ಅರಿವು ಸಂವೇದನೆ ಮೂಡಿಸುವ ಜವಬ್ದಾರಿ ಇಲ್ಲಿನ ಪ್ರಜ್ಞಾವಂತರ ಮೇಲಿದೆ. ಇದು ದೊಡ್ಡ ಸವಾಲು. ಈ ಹೊಣೆಗಾರಿಕೆಯನ್ನು ಎಚ್ಚರಿಕೆಯಿಂದ, ಸಾಮಾನ್ಯ ಜ್ಞಾನದಿಂದ ನಿಭಾಯಿಸದಿದ್ದರೆ ಎಲ್ಲಾ ಹೋರಾಟಗಳೂ ವ್ಯರ್ಥವಾಗುತ್ತವೆ. ಇಂದಿನ ಹೋರಾಟಗಳಲ್ಲಿ ‘ಇಂಕ್ವಿಲಾಬ್ ಜಿಂದಾಬಾದ್’ ಘೋಶಣೆ ಮೊಳಗುತ್ತಿದೆ. ಈ ಘೋಶಣೆಗೆ ರಚನಾತ್ಮಕ ಗಾಲಿಗಳನ್ನು ಜೋಡಿಸುವ, ಆ ಮೂಲಕ ಹೊಸ ಪಯಣವನ್ನು ಆರಂಬಿಸುವ ಸವಾಲು ನಮ್ಮ ಮುಂದಿದೆ. ಏಕೆಂದರೆ ನಾವೂ ನೋಡುತ್ತೇವೆ, ನಾವೂ ಸಾಕ್ಷಿಯಾಗುತ್ತೇವೆ ಎನ್ನುವ ಕವಿತೆಯ ಸಾಲುಗಳನ್ನು ಹಾಡುವ, ಗುನುಗುನಿಸುದಕ್ಕೂ ಎದೆಗಾರಿಕೆ ಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...