Homeಚಳವಳಿನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ಇಂದು ಭಾರತವೂ ಸಹ ಆ ಎಪ್ಪತ್ತು-ಎಂಬತ್ರರ ದಶಕದ ಪಾಕಿಸ್ತಾನದ ನಿರಂಕುಶ ಪ್ರಬುತ್ವದ, ಮತೀಯವಾದದ ವ್ಯವಸ್ಥೆಗೆ ಜಾರುತ್ತಿದೆ. ಸಂಘ ಪರಿವಾರದ ಸುಳ್ಳುಗಳು ತಾಂಡವವಾಡುತ್ತಿವೆ, ಸತ್ಯದ ದನಿ ಕ್ಷೀಣಗೊಂಡಿದೆ.

- Advertisement -
- Advertisement -

(ಪತ್ರಿಕಾ ವರದಿ : ಕಳೆದ ವಾರ ಐಐಟಿ – ಖರಗಪುರನ ವಿದ್ಯಾರ್ಥಿಗಳು ‘ಜಾಮಿಯ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಸಿಎಎ-ಎನ್‌ಆರ್‌ಸಿ ಪ್ರತಿಭಟನೆ ವಿರುದ್ದ ದಾಳಿ ಮಾಡಿದ ಪೋಲೀಸರ ಕೃತ್ಯದ ವಿರುದ್ದ’ ಪ್ರತಿಭಟಿಸುತ್ತಿದ್ದರು. ಆದರೆ ಇವರು ದ್ವೇಷವನ್ನು ಹರಡುತ್ತಿದ್ದಾರೆ’ ಎಂದು ಅಲ್ಲಿಯ ಪ್ರಾಧ್ಯಾಪಕರೊಬ್ಬರು ಆರೋಪಿಸಿದರು. ಇಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಕಾರಣವೇನೆಂದರೆ ಅಹಿಂಸಾತ್ಮಕವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳು ಫೈಜ್ ಅವರ ಪ್ರಖ್ಯಾನ ಕವಿತೆ ‘ನಾವೂ ನೋಡುತ್ತೇವೆ’ (ಹಮ್ ಬೀ ದೇಖೇಂಗೆ) ಯ ಕೆಲ ಸಾಲುಗಳನ್ನು ಬಳಸಿಕೊಂಡಿದ್ದರು. ಫೈಜ್ ಈ ಸಾಲುಗಳು ಆ ಪ್ರಾದ್ಯಾಪಕರ ಪ್ರಕಾರ ದ್ವೇಷ ಬಿತ್ತುತ್ತವೆ !!)

ಪಾಕಿಸ್ತಾನದ ಲೇಖಕ, ಕವಿ ಫೈಜ್ ‘ನಾವೂ ನೋಡುತ್ತೇವೆ’ ಕವಿತೆಯನ್ನು ಸರ್ವಾಧಿಕಾರಿ ಜಿಯಾ-ಉಲ್-ಹಕ್ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ 1979ರಲ್ಲಿ ಬರೆದರು. ಇದು ಬಂಡಾಯ ಕವಿತೆ. ಜಿಯಾ ಉಲ್ ಹಕ್ ಸಾಂಪ್ರದಾಯಿಕ ಇಸ್ಲಾಂ ಧರ್ಮವನ್ನು ತನ್ನ ಸರ್ವಾಧಿಕಾರಕ್ಕೆ ಆಯುಧವಾಗಿ ಬಳಸಿಕೊಂಡು ತನ್ನ ನಿರಂಕುಶ ಪ್ರಭುತ್ವದ ಹಿಡಿತ ಗಟ್ಟಿಗೊಳಿಸಿಕೊಂಡ. ಫೈಜ್ ‘ಜಿಯಾ ಅದಿಕಾರದ ಹುಚ್ಚು ಹಿಡಿಸಿಕೊಂಡಿದ್ದಾರೆ, ಅವರು ದೈವ ಭಕ್ತರಲ್ಲ’ ಎಂದು ಹೇಳಲು ತಮ್ಮ ಈ ಕವಿತೆಯಲ್ಲಿ ಧರ್ಮವನ್ನು ಸಾಂಕೇತಿಕವಾಗಿ ಬಳಸಿಕೊಂಡು ನಂಬಿಕೆಯ ಪ್ರತಿಮಾ ಸೃಷ್ಟಿಯ ಮೂಲಕ ಬಂಡಾಯದ ದನಿ ಸಿಡಿಸಿದ್ದಾರೆ

ಈ ಕವಿತೆಯ (ಒರಟಾದ) ಭಾವಾನುವಾದ

ನಾವೂ ನೋಡುತ್ತೇವೆ —

ನಾವು ನೋಡುತ್ತೇವೆ, ನಿಜಕ್ಕೂ, ನಾವೂ  ಸಾಕ್ಷಿಯಾಗಬೇಕು
ಎಲ್ಲಾ ಚಿರಕಾಲದ ಮೇಲೆ ನಾವು ಕೆತ್ತಿದ ವಾಗ್ದಾನದ ದಿನಕ್ಕೆ

ನಿರಂಕುಶದ, ಶೋಷಣೆಯ ಬೆಟ್ಟಗಳು ಹತ್ತಿಯಂತೆ ಹಾರಿ ಹೋಗುವಾಗ  ನಮ್ಮ ಕಾಲ ಕೆಳಗಿರುವ ಶೋಷಿತರ ಭೂಮಿಯು ಕಂಪಿಸಿ ನಡುಗುವಾಗ  ಆರ್ಭಟಿಸುವ ಗುಡುಗು, ಸೀಳುವ ಮಿಂಚು ಆಳುವವರ ಮೇಲೆ ಠಳಾಯಿಸುವಾಗ
ನಾವು ಖಂಡಿತ ಸಾಕ್ಷಿಯಾಗುತ್ತೇವೆ

ಅಸತ್ಯದ ವಿಗ್ರಹಗಳನ್ನು ದೇವರ ಕಾಬಾದ ನೆಲೆಯಿಂದಾಚೆ ಎಸೆದುಬಿಡುವಾಗ
ನಾವು-ಶುದ್ದರು, ಪವಿತ್ರ ಸ್ಥಳದಿಂದ ಹೊರದೂಡಲ್ಪಟ್ಟವರು (ಶೋಷಿತರು) ಸಿಂಹಾಸನಗಳ ಮೇಲೆ ಅದಿಕಾರ ಸ್ಥಾಪಿಸುತ್ತೇವಾಗ
ಕಿರೀಟಗಳನ್ನು ಎಸೆದುಬಿಡುವಾಗ,  ಸಿಂಹಾಸನಗಳನ್ನು ದ್ವಂಸಗೊಳಿಸುವಾಗ

ಆಗ ಹೆಸರು ಮಾತ್ರ ಉಳಿದುಕೊಳ್ಳುತ್ತದೆ, ಅದು ಅಗೋಚರವೂ ಹೌದು ಮತ್ತು ಗೋಚರವೂ ಹೌದು
ಅವೆರೆಡೂ ನೋಟವೂ ಹೌದು, ನೋಡುಗನೂ ಹೌದು, ಸತ್ಯದ ದನಿಯು ಮುಗಿಲೆತ್ತರಕ್ಕೆ

ಅದು ನಾನು ಮತ್ತು ನೀನು, ಮತ್ತು ದೇವರ ಮಕ್ಕಳು ಆಳ್ವಿಕೆ ನಡೆಸುತ್ತಾರೆ
ಅದು ನಾನು ಮತ್ತು ನೀನು
ನಾವು ಸಾಕ್ಷಿಯಾಗುತ್ತೇವೆ, ಖಂಡಿತವಾಗಿ ನಾವೂ ಸಾಕ್ಷಿಯಾಗಬೇಕು

ಸಹಜವಾಗಿಯೆ ಸರ್ವಾದಿಕಾರಿ ಜಿಯಾ ಈ ಕ್ರಾಂತಿಕಾರಿ ಕವಿತೆಯನ್ನು ನಿಷೇಧಿಸಿದರು. ಆದರೆ 1986ರಲ್ಲಿ ಪಾಕಿಸ್ತಾನದ ಖ್ಯಾತ ಗಜಲ್ ಗಾಯಕಿ ಇಕ್ಬಾಲ್ ಬಾನು ಈ ಕವಿತೆಯನ್ನು ಪ್ರೇಕ್ಷಕರ ಮುಂದೆ ಹಾಡಿದಾಗ ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆ ಮುಗಿಲು ಮುಟ್ಟಿತು. ಸುಹಾಂತ್ ಸಿಂಗ್ ಬರೆಯುತ್ತಾರೆ ‘ಆದಿನ ಪ್ರೇಕ್ಷಕರು ಕಿರೀಟಗಳನ್ನು ಎಸೆದು ಬಿಡುತ್ತೇವೆ, ಸಿಂಹಾಸನಗಳನ್ನು ಉರುಳಿಸುತ್ತೇವೆ (ಸಬ್ ತಾಜ್ ಉಚಾಲೆ ಜಾಯೆಂಗೆ, ಸಬ್ ತಕ್ತ್ ಗಿರಾಯೆ ಜಾಯೆಂಗೆ) ಎಂದು ಹುರುಪಿನಿಂದ ಹಾಡುತ್ತಿದ್ದರು’

ಇದು ಕವಿತೆಗಿರುವ ಶಕ್ತಿ. ಆದರೆ ಜೊತೆಗೆ ಕವಿ, ಲೇಖಕನ ನೈತಿಕತೆ ಮತ್ತು ಬದ್ದತೆ ಸಹ ಮುಖ್ಯವಾಗುತ್ತದೆ. ಫೈಜ್ ಅವರ ನೈತಿಕತೆ ಮತ್ತು ಮೌಲ್ಯಗಳ ಕುರಿತು ಪಾಕಿಸ್ತಾನ ಪ್ರಜೆಗಳಿಗೆ ಚಿರಪರಿಚಿತವಾಗಿತ್ತು. ಜನರನ್ನು ಬಹುದಿನಗಳ ಕಾಲ ಅದುಮಿಡಲು ಸಾದ್ಯವಿಲ್ಲ. ದಂಗೆಗಾಗಿ ಕಾಯುತ್ತಾರೆ. ಆ ಹೊಳಹು ಕವಿತೆಯ ರೂಪದಲ್ಲಿಯೂ ಇರಬಹುದು ಎಂಬುದಕ್ಕೆ ‘ನಾವೂ ನೋಡುತ್ತೇವೆ’ ಕವಿತೆ ಸಾಕ್ಷಿ. ಆದರೆ ಇಂದು ಭಾರತವೂ ಸಹ ಆ ಎಪ್ಪತ್ತು-ಎಂಬತ್ರರ ದಶಕದ ಪಾಕಿಸ್ತಾನದ ನಿರಂಕುಶ ಪ್ರಬುತ್ವದ, ಮತೀಯವಾದದ ವ್ಯವಸ್ಥೆಗೆ ಜಾರುತ್ತಿದೆ. ಸಂಘ ಪರಿವಾರದ ಸುಳ್ಳುಗಳು ತಾಂಡವವಾಡುತ್ತಿವೆ, ಸತ್ಯದ ದನಿ ಕ್ಷೀಣಗೊಂಡಿದೆ. ಆ ಸತ್ಯದ ದನಿಯನ್ನು ಮುಗಿಲೆತ್ತರಕ್ಕೇರಿಸುವವರೂ ಸಹ ದಿಕ್ಕು ತೋಚದಂತಾಗಿದ್ದಾರೆ. ಫೈಜ್ ಮತ್ತೆ ಮತ್ತೆ ನಮಗೆ ಸಾಕ್ಷಿಪ್ರಜ್ಞೆಯಾಗುತ್ತಾರೆ.

ಇಂದು ಭಾರತದಲ್ಲಿ ಕರಾಳ ಶಾಸನಗಳಾದ ಸಿಎಎ-ಎನ್‌ಆರ್‌ಸಿ ವಿರುದ್ದ ನಾಗರಿಕರು, ವಿದ್ಯಾರ್ಥಿಗಳು ದಂಗೆ ಎದ್ದಿದ್ದಾರೆ. ಇಂದು ಈ ಸಿಎಎ ಶಾಸನವು ಮೂಲಬೂತ ಹಕ್ಕುಗಳಾದ ಸಮಾನತೆ, ಸ್ವಾತಂತ್ರ್‍ಯ ಮತ್ತು ಬಂಧುತ್ವಗಳನ್ನು ಉಲ್ಲಂಘಿಸುತ್ತದೆ. ಆ ಮೂಲಕ ದೇಶದ ಘನತೆ ಸಹ ನಾಶವಾಗುತ್ತಿದೆ. ಮೋದಿ-ಶಾ-ಆರೆಸ್ಸಸ್ ಜೋಡಿಗೆ ಸುಳ್ಳುಗಳನ್ನು ಎತ್ತರದ ದನಿಯಲ್ಲಿ ಮಾತನಾಡಿದರೆ ಅದನ್ನು ಜನರಿಗೆ ತಲುಪಿಸಬಹುದು ಎಂದು ನಂಬಿದ್ದಾರೆ. ಚುನಾವಣೆಗಳಲ್ಲಿ ಅವರ ಗೆಲುವು ಇವರ ಈ ಆತ್ಮವಿಶ್ವಾಸಕ್ಕೆ ಕಾರಣವಾಗಿದೆ. ಇವರ ಸುಳ್ಳುಗಳಿಗೆ, ಮತೀಯವಾದಕ್ಕೆ ತಲೆದೂಗಿಸುವಂತಹ ಬಕ್ತರ ಶೇಕಡಾವಾರು ಪ್ರಮಾಣ ಇಂದಿಗೂ ಕಡಿಮೆಯಾಗಿಲ್ಲ.

ಇಲ್ಲಿ ಆಳುವವರಿಗೂ ಸಂವಿದಾನದ ಪೀಠಿಕೆಯ, ನಿತಿಸಂಹಿತೆಗಳ ಅರಿವಿಲ್ಲ ಮತ್ತು ಅವರು ಅದನ್ನು ತಿರಸ್ಕರಿಸಿದ್ದಾರೆ ಆದರೆ ಆಳಿಸಿಕೊಳ್ಳುವವರೂ ಸಹ ಇದೆ ಹಾದಿಯಲ್ಲಿರುವುದೆ ಇಂದಿನ ಭಾರತದ ದುರಂತ. ‘ಕಿರೀಟಗಳನ್ನು ಎಸೆದು ಬಿಡುತ್ತೇವೆ, ಸಿಂಹಾಸನಗಳನ್ನು ಉರುಳಿಸುತ್ತೇವೆ’ ಎಂದು ಆತ್ಮವಿಶ್ವಾಸದಿಂದ ಮಾತನಾಡುವ ಬಂಡಾಯಗಾರರು ಇಂದಿಗೂ ಅಲ್ಪಸಂಖ್ಯೆಯಲ್ಲಿದ್ದಾರೆ. ಈ ಸಿಎಎ-ಎನ್‌ಆರ್‌ಸಿ ವಿರುದ್ದದ ಹೋರಾಟದ ಬಿರುಸು ದಿನದಿನಕ್ಕೂ ಹೆಚ್ಚುತ್ತಿರುವುದು ನಿಜ. ಆದರೆ ಪೌರತ್ವ, ದೇಶ, ಪ್ರಜೆ ಇವುಗಳ ಸಮಜೋ-ಸಾಂಸ್ಕೃತಿಕ-ರಾಜಕೀಯ ಸಂಕೀರ್ಣತೆಯನ್ನು ಜನತೆಗೆ ಮನದಟ್ಟು ಮಾಡಿಕೊಡದಿದ್ದರೆ ಮುಂದಿನ ದಿನಗಳು ದುರಂತಮಯವಾಗಲಿದೆ

ಸಂವಿಧಾನ ಪ್ರಸ್ತಾವನೆಯಲ್ಲಿನ ಆರಂಬದ ಸಾಲುಗಳಾದ ಸ್ವಾಯತ್ತತೆ, ಸಮಾಜವಾದ, ಪ್ರಜಾಪ್ರಬುತ್ವ ಮತ್ತು ಗಣರಾಜ್ಯ ತತ್ವಗಳು ಭಾರತ ದೇಶದ ಅಡಿಪಾಯಗಳು. ಆದರೆ ಈ ಕುರಿತು ನಮ್ಮ ಜನಮಾನಸದಲ್ಲಿ ಅರಿವು, ಆಳವಾದ ಬದ್ದತೆ ಮತ್ತು ಸಂವೇದನೆಯ ಕೊರತೆ ಇದೆ. ಸಂವಿದಾನದ ಅನುಚ್ಚೇಧ 14, 15, 16, 17, 21 22, 23, 24, 25 ಸಾರ್ವತ್ರಿಕವಾಗಿ ಪ್ರಜೆಗಳ ಮೂಲಭೂತ ಹಕ್ಕುಗಳನ್ನು ಕಾಪಾಡುತ್ತವೆ. ಸಂವಿದಾನದ ಪ್ರಸ್ತಾವನೆ ಮತ್ತು ಅನುಚ್ಚೇಧಗಳ ಅನುಸಾರ ದೇಶವೆಂದರೆ ಒಂದು ಬಹುತ್ವದ ಸಮಾಜ, ನೈತಿಕತೆ, ಐಕ್ಯತೆ. ಅಕ್ರಮ ವಲಸಿಗರು ಎಂದರೆ ಅವರು ಮನುಶ್ಯರು ಎಂದರ್ಥ. ಅವರು ನಾಗರಿಕರು ಎಂಬದೂ ನಿಜ. ಆದರೆ ಅವರ ಘನತೆ ಕುಂದಿಸುವ ಹಕ್ಕು ಯಾವ ಪ್ರಬುತ್ವಕ್ಕೂ ಇಲ್ಲ. ಈ ಮನುಷ್ಯ ಮತ್ತು ಮಾನವೀಯತೆಯನ್ನು ರಾಜಕೀಯಗೊಳಿಸಿ ಅವರನ್ನೆಲ್ಲ ನಿರ್ದಿಷ್ಟ ಪ್ರದೇಶದ ಗಡಿಯೊಳಗೆ ನಾಗರಿಕರೆಂದು ಮೌಲ್ಯಮಾಪನ ಮಾಡುವುದೆ ಸಂವಿದಾನದ ನೀತಿಸಂಹಿತೆಗಳ ಉಲ್ಲಂಘನೆಯಾಗುತ್ತದೆ.

ಇಂದು ಮೋದಿ-ಶಾ ಜೋಡಿಯು ದೇಶವನ್ನು ಇಲ್ಲಿನ ನಾಗರಿಕರನ್ನು ಒಂದು ಬೌಗೋಳಿಕತೆಗೆ ಸೀಮಿತಗೊಳಿಸಿ ಅವರಲ್ಲಿ ಬಹುಸಂಖ್ಯಾತರಿಗೆ ಮಾತ್ರ ಪೌರತ್ವ ಕೊಡಿಸುವ ಮತಾಂಧ ರಾಜಕಾರಣ ಹೇರುತ್ತಿದ್ದಾರೆ. ಮುಸ್ಲಿಂರು ಎನ್ನುವ ಆದಾರದ ಮೇಲೆ ವಲಸಿಗರನ್ನು ವರ್ಗೀಕರಿಸುವ ಮೂಲಕ ಸಂವಿದಾನದ ಆಶಯವಾದ ಬಂದುತ್ವವನ್ನೆ ನಾಶ ಮಾಡಲಾಗುತ್ತಿದೆ. ಆ ಮೂಲಕ ಸೆಕ್ಯುಲರಿಸಂ ಸಹ ಧೂಳಿಪಟವಾಗುತ್ತದೆ. ಬಿಜೆಪಿ ಪಕ್ಷದ ಈ ಸರ್ವಾದಿಕಾರಿ ರಾಜಕಾರಣಕ್ಕೆ ಮುಖಾಮುಖಿಯಾಗುವ ದಿಟ್ಟತೆ, ಬದ್ದತೆ ಇಂಡಿಯಾದ ರಾಜಕೀಯ ಪಕ್ಷಗಳಿಲ್ಲ. ಮತ್ತೊಂದೆಡೆ ಸಂಘ ಪರಿವಾರವು ಈ ದೇಶದ ಬಹುಸಂಖ್ಯಾತರನ್ನು ಈ ಮತೀಯ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದನ್ನು ಮನದಟ್ಟು ಮಾಡಿಕೊಡಲು ಪ್ರಗತಿಪರರು ಮತ್ತೆ ಮತ್ತೆ ಸೋಲುತ್ತಿದ್ದಾರೆ. ಇದು ಕೇವಲ ಅದ್ಯಯನದ ಕೊರತೆ ಮಾತ್ರವಲ್ಲ, ಸಮಾಜ, ನಮ್ಮ ಬದುಕಿನ ದೃಷ್ಟಿಕೋನ ಮತ್ತು ನಮ್ಮ ಹೋರಾಟ ಮೂರರ ನಡುವಿನ ಸಂವಹನ, ನಂಬಿಕೆ ಮತ್ತು ತಾಳಮೇಳದ ಕೊರತೆ ಇದೆ. ಇದನ್ನು ಮೀರುವುದು ಹೇಗೆ?

ಅಚನ್ ವೈನಿಕ್ ಅವರು “ಹೋರಾಟದಲ್ಲಿ ರಾಶ್ಟ್ರೀಯತೆ ಕಲ್ಪನೆಯ ಸಂಕೀರ್ಣತೆಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಸ್ಪರ್ದಾತ್ಮಕ ರಾಶ್ಟ್ರೀಯತೆಗಳು ಯಾಕಿವೆ ಮತ್ತು ನಾವು ಯಾವ ದಿಕ್ಕೆನೆಡೆಗೆ ಸಾಗಬೇಕು ಎಂದು ನಿರ್ಣಯಿಸಬೇಕಾಗಿದೆ. ರಾಶ್ಟ್ರೀಯತೆಯು ಹಳೆಯದೆ ಅಥವಾ ಹೊಸದೆ? ರಾಶ್ಟ್ರೀಯತೆಯು ವಸ್ತುನಿಶ್ಟ ಪರಿಚೆಗಳ ಮೇಲೆ ಆದಾರವಾಗಿದೆಯೆ? ಅತವಾ ವ್ಯಕ್ತಿನಿಶ್ಟ ಗುಣಲಕ್ಷಣಗಳ ಮೇಲೆ ಆದಾರವಾಗಿದೆಯೆ? ರಾಶ್ಟ್ರೀಯತೆಯು ಪೌರಸಂಬಂದಿತವೆ ಅಥವಾ ಜನಾಂಗೀಯತೆಯೆ? ಅಥವಾ ಅವೆರಡೂ? ರಾಶ್ಟ್ರೀಯತೆಯು ವಿಶ್ವಾವ್ಯಾಪಿಯೆ ಅಥವಾ ವೈಯುಕ್ತಿಕವಾದಿಯೆ? ಅಥವಾ ಅವೆರಡೂ? ರಾಶ್ಟ್ರೀಯತೆ ತತ್ವ ಸಿದ್ದಾಂತವೆ? ಬಾವಾವೇಶವೆ? ಅಥವಾ ಅವೆರಡೂ? ರಾಶ್ಟ್ರೀಯತೆಯು ಒಳಗೊಳ್ಳುವಿಕೆಯೆ? ಹೊರಗಿಡುವಿಕೆಯೆ? ಅಥವಾ ಅವೆರಡೂ? ಅದು ಸಾಂಸ್ಕೃತಿಕವೆ? ರಾಜಕೀಯವೆ? ಅತವಾ ಅವೆರಡೂ? ಅದು ಒಳ್ಳೆಯದೆ? ಕೆಟ್ಟದೆ? ಅಥವಾ ಅವೆರಡೂ? ಕೆಲಸಂದರ್ಬದಲ್ಲಿ ಅದು ಒಳ್ಳೆಯದೆ? ಅದರಲ್ಲಿ ಕೆಲ ಕೆಟ್ಟ ಅಂಶಗಳಿವೆಯೆ? ಅದು ತೀರಾ ಕೆಟ್ಟದಾಗಿದರೂ ಸಹ ಕೆಲವೊಮ್ಮೆ ಅದರಲ್ಲಿ ಒಳ್ಳೆಯ ಅಂಶಗಳಿರುತ್ತದೆಯೆ?” ಎಂದು ಬರೆಯುತ್ತಾರೆ.

ಈ ಎಲ್ಲಾ ಪ್ರಶ್ನೆಗಳಿಗೆ ನಾವು ಸೂಕ್ತ ಉತ್ತರಗಳನ್ನು ಕಂಡುಕೊಳ್ಳುವುದು ಮಾತ್ರವಲ್ಲ ಇಂದು ಪೌರತ್ವದ ಉಮೇದಿಯಲ್ಲಿ, ಹಪಾಹಪಿತನದಲ್ಲಿರುವ ಬಹುಸಂಖ್ಯಾತರಿಗೂ ಇದರ ಅರಿವು ಸಂವೇದನೆ ಮೂಡಿಸುವ ಜವಬ್ದಾರಿ ಇಲ್ಲಿನ ಪ್ರಜ್ಞಾವಂತರ ಮೇಲಿದೆ. ಇದು ದೊಡ್ಡ ಸವಾಲು. ಈ ಹೊಣೆಗಾರಿಕೆಯನ್ನು ಎಚ್ಚರಿಕೆಯಿಂದ, ಸಾಮಾನ್ಯ ಜ್ಞಾನದಿಂದ ನಿಭಾಯಿಸದಿದ್ದರೆ ಎಲ್ಲಾ ಹೋರಾಟಗಳೂ ವ್ಯರ್ಥವಾಗುತ್ತವೆ. ಇಂದಿನ ಹೋರಾಟಗಳಲ್ಲಿ ‘ಇಂಕ್ವಿಲಾಬ್ ಜಿಂದಾಬಾದ್’ ಘೋಶಣೆ ಮೊಳಗುತ್ತಿದೆ. ಈ ಘೋಶಣೆಗೆ ರಚನಾತ್ಮಕ ಗಾಲಿಗಳನ್ನು ಜೋಡಿಸುವ, ಆ ಮೂಲಕ ಹೊಸ ಪಯಣವನ್ನು ಆರಂಬಿಸುವ ಸವಾಲು ನಮ್ಮ ಮುಂದಿದೆ. ಏಕೆಂದರೆ ನಾವೂ ನೋಡುತ್ತೇವೆ, ನಾವೂ ಸಾಕ್ಷಿಯಾಗುತ್ತೇವೆ ಎನ್ನುವ ಕವಿತೆಯ ಸಾಲುಗಳನ್ನು ಹಾಡುವ, ಗುನುಗುನಿಸುದಕ್ಕೂ ಎದೆಗಾರಿಕೆ ಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...