Homeಮುಖಪುಟಫೈಜ್ ಅಹಮದ್ ಫೈಜ್‍ರ ಹಮ್ ದೇಖೇಂಗೇ ಕವಿತೆಯೂ ವೈದಿಕಮಣಿಗಳ ಸಂಕುಚಿತ ಬುದ್ಧಿಯೂ

ಫೈಜ್ ಅಹಮದ್ ಫೈಜ್‍ರ ಹಮ್ ದೇಖೇಂಗೇ ಕವಿತೆಯೂ ವೈದಿಕಮಣಿಗಳ ಸಂಕುಚಿತ ಬುದ್ಧಿಯೂ

- Advertisement -
- Advertisement -

ಪಾಕಿಸ್ತಾನದ ಸುಪ್ರಸಿದ್ಧ ಕವಿ ಫೈಜ್ ಅಹಮದ್ ಫೈಜ್ ಅವರ ಕವಿತೆಯೊಂದರ ಕುರಿತು ವಿವಾದ ಭುಗಿಲೆದ್ದಿದೆ. ದೆಹಲಿಯ ಮಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ್ದ ಅನಾಗರಿಕ ಹಲ್ಲೆ ದೌರ್ಜನ್ಯವನ್ನು ಖಂಡಿಸಿ, ಜಾಮಿಯಾ ವಿದ್ಯಾರ್ಥಿಗಳಿಗೆ ಸಹಾನುಭೂತಿ ವ್ಯಕ್ತಪಡಿಸಿ ಕಳೆದ ಡಿಸೆಂಬರ್ 17ರಂದು ಐಐಟಿ ಕಾನ್ಪುರ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಫೈಜ್ ಬರೆದಿದ್ದ “ಹಮ್ ದೇಖೇಂಗೇ” ಕವಿತೆಯನ್ನು ವಾಚಿಸಲಾಗಿತ್ತು. ಇನ್‍ಸ್ಪೈರ್ ಎಂಬ ವಿಜ್ಞಾನ ಕಾರ್ಯಕ್ರಮದಡಿ ಇದೇ ಐಐಟಿಯಲ್ಲಿ ಐದು ವರ್ಷಗಳ ಅವಧಿಗೆ ಕರಾರಿನ ಮೇಲೆ ಬೋಧಕನಾಗಿ 2016ರಲ್ಲಿ ನೇಮಕಗೊಂಡಿರುವ ವಸಿ ಶರ್ಮಾ ಎಂಬ ಪ್ರಾಧ್ಯಾಪಕ ಮತ್ತು ಇತರ 16 ಜನರು “ಹಮ್ ದೇಖೇಂಗೇ ಕವಿತೆ ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸುತ್ತದೆ” ಎಂದು ಆಡಳಿತಾಂಗಕ್ಕೆ ದೂರು ಸಲ್ಲಿಸಿದ್ದರು. ಇದರ ಅನ್ವಯ ಆಡಳಿತಾಂಗವು ಆರು ಮಂದಿ ಪ್ರಾಧ್ಯಾಪಕರ ಸಮಿತಿಯೊಂದನ್ನು ನೇಮಿಸಿ ದೂರಿನ ಕುರಿತು ತನಿಖೆ ನಡೆಸಿ ದೂರಿನಲ್ಲಿ ಏನಾದರೂ ಹುರುಳಿದೆಯೋ ಎಂದು ವರದಿ ನೀಡಲು ತಿಳಿಸಿದೆ. ದ ಹಿಂದೂ ಪತ್ರಿಕೆಯಲ್ಲಿ ವರದಿಯಾದಂತೆ ಆಡಳಿತಾಂಗವು ಸ್ಪಷ್ಟಪಡಿಸಿರುವ ಪ್ರಕಾರ ತನಿಖಾ ಸಮಿತಿಯು ಕವಿತೆ ಹಿಂದೂ ವಿರೋಧಿಯೇ ಅಲ್ಲವೇ ಎಂಬ ಕುರಿತು ತನಿಖೆ ನಡೆಸುವುದಿಲ್ಲ, ಆದರೆ ಅದರ ಕುರಿತು ದೂರು ನೀಡಿರುವವರು ತಿಳಿಸಿರುವಂತೆ ಆ ಕವಿತೆಯನ್ನು ವಾಚಿಸಿದವರಲ್ಲಿ ದುರುದ್ದೇಶವಿತ್ತೇ ಎಂಬ ಕುರಿತು ವರದಿ ನೀಡುತ್ತದೆ.

ಫೈಜ್ ಅಹಮದ್ ಫೈಜ್ ಅವರ ಕವಿತೆಯ ಕುರಿತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಇಂತಹ ತನಿಖೆಯನ್ನು ನಡೆಸುತ್ತಿರುವುದೇ ಹಾಸ್ಯಾಸ್ಪದ ಎಂಬ ಅಭಿಪ್ರಾಯವನ್ನು ದೇಶದ ಸಾಂಸ್ಕೃತಿಕ ಲೋಕದ ಹಲವಾರು ಗಣ್ಯರು ವ್ಯಕ್ತಪಡಿಸಿದ್ದಾರೆ. ಇದಕ್ಕೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿದೆ. ಫೈಜ್ ಅವರ ಬದುಕು, ಕಾವ್ಯದ ಅಲ್ಪಸ್ವಲ್ಪ ಪರಿಚಯವಿದ್ದವರಿಗೂ ಇಂತಹ ಆರೋಪ ಎಷ್ಟು ಬಾಲಿಶಃ ಎಂಬುದು ಅರ್ಥವಾಗುತ್ತದೆ.

ಹಮ್ ದೇಖೇಂಗೆ ಕವಿತೆಯಲ್ಲಿ ಏನಿದೆ?

ಫೈಜ್ ಅವರ ಹಮ್ ದೇಖೇಂಗೇ ಕವಿತೆ ಹಿಂದೂ ಧರ್ಮವನ್ನು ನಾಶ ಮಾಡಿ ಇಸ್ಲಾಂ ದೇಶವನ್ನು ಸ್ಥಾಪಿಸುವ ಕರೆ ನೀಡುವ ಕವಿತೆ ಎಂಬುದು ವಸಿ ಶರ್ಮನ ಮುಖ್ಯ ಆರೋಪ. ಅದಕ್ಕೆ ಅವನು ಈ ಕವಿತೆಯಲ್ಲಿ ಬರುವ ವಾಕ್ಯಗಳಲ್ಲಿನ ಕೆಲವು ಪದಗಳನ್ನು ಉಲ್ಲೇಖಿಸುತ್ತಾನೆ.
“ಜಬ್ ಅರ್ಜ್-ಎ-ಖುದಾ ಕೆ ಕಾಬೆ ಸೆ/ಸಬ್ ಬುತ್ ಉಠವಾಯೇ ಜಾಯೇಂಗೇ, ಹಮ್ ಅಹ್ಲ್-ಎ-ಸಫಾ ಮರ್ದೂದೆ ಹರಮ್/ಮಸನದ್ ಪೆ ಬಿಠಾಯೇ ಜಾಯೇಂಗೇ/ಸಬ್ ತಾಜ್ ಉಛಲೆ ಜಾಯೆಂಗೇ/ಸಬ್ ತಖ್ತ್ ಗಿರಾಯೇ ಜಾಯೆಂಗೆ/ಬಸ್ ನಾಮ್ ರಹೇಗಾ ಅಲ್ಲಾಹ್ ಕಾ” ಈ ಸಾಲುಗಳಲ್ಲಿ ಫೈಜ್ ಕವಿ ಎಲ್ಲಾ ವಿಗ್ರಹಗಳನ್ನು ನಾಶ ಮಾಡಿ ಕೇವಲ ಅಲ್ಲಾಹನ ಹೆಸರೊಂದೇ ಉಳಿಯುವ ಆ ದಿನವನ್ನು ನಾವು ನೋಡುತ್ತೇವೆ ಎಂದು ಹೇಳಿದ್ದಾನೆ ಹೀಗಾಗಿ ಇದು ನಮ್ಮ ಧರ್ಮವಿರೋಧಿ ಕವಿತೆಯಾಗಿದೆ ಎಂಬುದು ಶರ್ಮಾನ ವರಾತ. ಇವನ ವಾದವನ್ನು ನೋಡಿ ನಿಜಕ್ಕೂ ನಗಬೇಕೋ ಅಳಬೇಕೋ ತಿಳಿಯುತ್ತಿಲ್ಲ. ಈ ಶರ್ಮಾ ಈ ಹಿಂದೆ “ಲವ್ ಜಿಹಾದ್” ಬಗ್ಗೆಯೂ ಇಂತಹುದೇ ಆರೋಪಗಳನ್ನು ಮಾಡಿ ತನ್ನನ್ನು ತಾನು ಇಸ್ಲಾಮಿ ಜಿಹಾದಿಗಳ ವಿರುದ್ಧ ಧ್ವನಿ ಎತ್ತುತ್ತಿರುವ ಭಾರೀ ಪಂಡಿತ ಎಂದು ಬಿಂಬಿಸಿಕೊಂಡಿರುವಾತ.

ಈ ವಸಿ ಶರ್ಮಾ ಹೇಳಿಕೇಳಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿಕೊಂಡಿರುವಾತ. ಅವನು ಫೈಜ್ ಅವರಂತಹ ಮಹಾನ್ ಕವಿಗಳ ಕವಿತೆಗಳನ್ನು ಅವುಗಳಲ್ಲಿರುವ ಉಪಮೆ, ರೂಪಕಗಳನ್ನು ಅರ್ಥಮಾಡಿಕೋ ಎಂದರೆ ಅವನಿಗೆ ಅದು ಸುಲಭದ ಕೆಲಸವಲ್ಲ. ಅಷ್ಟಕ್ಕೂ ಮನಸ್ಸಿನಲ್ಲಿ ಮತೋನ್ಮಾದದ ವಿಷವನ್ನೇ ತುಂಬಿಕೊಂಡಿದ್ದಾಗಲಂತೂ ಯಾವುದೇ ಕವಿತೆ ಆಶಯಗಳೂ ಅರ್ಥವಾಗುವುದು ಕಷ್ಟ.
ಆದರೆ ಈ ಕವಿತೆ ಮತ್ತು ಇದರ ಬಗ್ಗೆ ವಸಿ ಶರ್ಮಾನಂತರವು ಎತ್ತಿರುವ ತಕರಾರು ಮತಾಂಧ ಮನಸ್ಸುಗಳ ಆಲೋಚನಾ ದಾಟಿಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಿದೆ ಮಾತ್ರವಲ್ಲ ಈ ವಿವಾದದ ನಂತರದಲ್ಲಿ ದೇಶದ ಸಹಸ್ರಾರು ಜನರು ಫೈಜ್ ಎಂಬ ಮಹಾಕವಿಯ ಬದುಕನ್ನು ಮತ್ತು ಆತನ ಕವಿತೆಗಳನ್ನು ಹುಡುಕಿಕೊಂಡು ತಿಳಿದುಕೊಳ್ಳುವಂತಾಗಿದೆ.

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’. 1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ. ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ವಾಸ್ತವದಲ್ಲಿ ಫೈಜ್ ಒಬ್ಬ ಎಡಪಂಥೀಯ ಕವಿ. ಅವರ ಪ್ರತಿ ಕವಿತೆಗಳಲ್ಲಿ ಪ್ರೇಮ ಮತ್ತು ಕ್ರಾಂತಿಯ ಸಂದೇಶಗಳ ಹೊರತಾಗಿರುವುದು ಏನೂ ಇಲ್ಲ. ಹಮ್ ದೇಖೇಂಗೇ ಕವಿತೆಯಲ್ಲಿ ಅವರು ಬಳಸಿರುವ ದೈವಿಕವಾದ ಪದಪುಂಜಗಳನ್ನು ಈ ಕವಿತೆಯ ಆಶಯ ಮತ್ತು ಅದು ಹುಟ್ಟಿದ ಸಂದರ್ಭದಿಂದ ಹೊರತಾಗಿ ನೊಡಹೋದರೆ ವಸಿ ಶರ್ಮಾನಂತಹ ಕೂಪಮಂಡೂಕಗಳ ಮಾತುಗಳಲ್ಲಿ ಸತ್ಯವಿದೆ ಅನಿಸಬಹುದು. ಮೇಲೆ ಉಲ್ಲೇಖಿಸಿರುವ ವಿವಾದಿತ ಸಾಲುಗಳಲ್ಲಿ ಕವಿ ಫೈಜ್ ಸರ್ವಾಧಿಕಾರಿ ಜಿಯಾ ಉಲ್ ಹಕ್‍ನನ್ನು ಧರೆಯ ಮೇಲಿನ ಪೊಳ್ಳುತನಗಳಿಗೆ ಹೋಲಿಸುತ್ತಾರೆ. ಸರ್ವಾಧಿಕಾರಿಗಳ ಸಿಂಹಾಸನಗಳು ಧರೆಗುರುಳುವ ಆ ದಿನ ದ್ರೋಹಿಗಳು ಎಂಬ ಹಣೆಪಟ್ಟಿ ಹಚ್ಚಿಕೊಂಡಿರುವ ನಿಜವಾದ ಹೃದಯವಂತು ಹಕ್ಕಿನ ಗದ್ದುಗೆ ಏರುತ್ತೇವೆ, ಬೂಟಾಟಿಕೆಯ ದೊರೆಗಳು ನಾಶವಾಗಿ ಅಂತಿಮವಾಗಿ ಸರ್ವಶಕ್ತನ ಹೆಸರೊಂದೇ ಉಳಿಯುತ್ತದೆ ಎಂಬುದು ಈ ಕವಿತೆಯ ಸಾಲುಗಳ ಸಾರ. ಇಲ್ಲಿ ಅಲ್ಲಾಹುವಿನ ಎಂಬ ಇಸ್ಲಾಂ ಧರ್ಮದ ದೇವರನ್ನು ಸೂಚಿಸುವ ಪದವನ್ನು ಫೈಜ್ ಬಳಸಿದ್ದಾರೆ ನಿಜ. ಆದರೆ ಫೈಜ್ ನಂಬುವ ಅಲ್ಲಾಹ್ ಯಾರು ಎಲ್ಲಿದ್ದಾನೆ ಎಂಬುದನ್ನು ಇದೇ ಕವಿತೆಯ ಮುಂದಿನ ಪ್ಯಾರಾದಲ್ಲಿರುವ ಸಾಲುಗಳು ತಿಳಿಸುತ್ತವೆ. ಅದರಲ್ಲಿ ಫೈಜ್ ಹೇಳುತ್ತಾರೆ “ಜೊ ನಾಮ್ ರಹೇಗಾ ಅಲ್ಲಾಹ್ ಕಾ/ ಜೊ ಗಾಯೆಬ್ ಭೀ ಹೇ ಜಾಜಿರ್ ಭೀ/ ಜೊ ಮಂಜಿರ್ ಭೀ/ಉಠ್ಠೇಗಾ ಅನಲ್ ಹಕ್ ಕಾ ನಾರಾ/ಜೊ ಮೈಂ ಭೀ ಹೂಂ ಓರ್ ತುಮ್ ಭೀ ಹೋ” ಇವುಗಳ ಭಾವಾರ್ಥ ಹೀಗಿದೆ: ಅಲ್ಲಾಹನ ಹೆಸರೊಂದೇ ಉಳಿಯುತ್ತದೆ, ನಾನು ಮತ್ತು ನೀನು ಇಬ್ಬರೂ ದೇವರ ಪ್ರೀತಿಗೆ ಪಾತ್ರರಾಗುವ ಆ ದಿನ ಅನಲ್ ಹಕ್‍ನ ಘೋಷ ಮೊಳಗಲಿದೆ, ಆ ದಿನ ನಾನು ಮತ್ತು ನೀನು ದೇವರಾಗಲಿದ್ದೇವೆ.

ಇದರ ಮೂಲಕ ಫೈಜ್ ಇಸ್ಲಾಂ ಮತಾಂಧತೆಯನ್ನು ಪ್ರಚುರಪಡಿಸುತ್ತಿಲ್ಲ ಬದಲಿಗೆ, ಜಗತ್ತಿನ ಎಲ್ಲಾ ಧರ್ಮಗಳ ಜನರು ಒಪ್ಪಿಕೊಂಡಿರುವ ಆಧ್ಯಾತ್ಮಿಕ ತತ್ವವನ್ನು ತಮ್ಮ ಕವಿತೆಯ ಮೂಲಕ ಹೇಳುತ್ತಿದ್ದಾರೆ. ಇಲ್ಲಿ ಫೈಜ್ ಬಳಸಿರುವ ‘ಅನಲ್ ಹಕ್” ಪದವನ್ನು ನೀಡಿದ್ದು ಧಾರ್ಮಿಕ ಮೂಲಭೂತವಾದಕ್ಕೆ ತನ್ನದೇ ರೀತಿಯಲ್ಲಿ ಸೆಡ್ಡು ಹೊಡೆದ ಸೂಫಿ ಪಂಥ. ಕ್ರಿ.ಶ. 922ರಲ್ಲಿ ಪರ್ಷಿಯಾದ ಅನುಭಾವಿ ಸೂಫಿ ಸಂತ ಮನ್ಸೂರ್ ಅಲ್ ಹಲ್ಲಾಝ್ ಈ ‘ಅನಲ್ ಹಕ್’ ಎಂಬ ನುಡಿಗಟ್ಟನ್ನು ಸೂಫಿ ಸಾಹಿತ್ಯದಲ್ಲಿ ಬಳಕೆಗೆ ತಂದ ಕಾರಣದಿಂದ ಆತನನ್ನು “ಧರ್ಮದ್ರೋಹ”ದ ಆರೋಪದಲ್ಲಿ ಗಲ್ಲಿಗೇರಿಸಲಾಗಿತ್ತು. ಯಾಕೆಂದರೆ ಈ ನುಡಿಗಟ್ಟಿನ ಮೂಲಕ ಸೂಫಿ ಕವಿ ಹೇಳಿದ್ದು ನಾನು ಮತ್ತು ದೇವರು ಬೇರೆ ಅಲ್ಲ, ನಾನೇ ಸತ್ಯ, ನಾನೇ ದೇವರು, ನಮ್ಮ ಅಹಂನ್ನು ಕಳಚಿಕೊಂಡು, ನಮ್ಮೊಳಗಿನ ಅಂತಿಮ ಸತ್ಯವನ್ನು ಕಂಡುಕೊಳ್ಳುವ ಮೂಲಕವೇ ದೇವರನ್ನು ಕಂಡುಕೊಳ್ಳಬೇಕು ಎಂದು. ಆ ಸ್ಥಿತಿಯೇ ಅನಲ್ ಹಕ್ ಎನ್ನಲಾಗಿದೆ. ಆದರೆ ದೇವರೆಂದರೆ ಇದು, ಧರ್ಮವೆಂದರೆ ಇದು ಎಂದು ಬರೆದುಕೊಂಡು ಕುಳಿತವರಿಗೆ ಈ ತತ್ವವನ್ನು ಅರಗಿಸಿಕೊಳ್ಳುವುದು ಕಷ್ಟ. ಮನ್ಸೂರ್ ಬರೆಯುತ್ತಾನೆ, “ಹೃದಯದ ಕಣ್ಣಿನಿಂದ ನನ್ನ ದೇವರನ್ನು ನಾನು ನೋಡಿದೆ, ಆಗ ನಾನು ಕೇಳಿದೆ “ನೀನು ಯಾರು”, ಅದಕ್ಕವನುತ್ತರಿಸಿದ “ನೀನು”. ಇದನ್ನೇ ಅಲ್ಲವೇ ನಮ್ಮ ಕಬೀರನೂ ಹೇಳಿದ್ದು, ಶಿಶುನಾಳ ಶರೀಫರೂ ಹೇಳಿದ್ದು? ಹಾಗಿದ್ದ ಮೇಲೆ ಹಿಂದೂ ಧರ್ಮದ ವಿರೋಧದ ಪ್ರಶ್ನೆ ಎಲ್ಲಿ ಬರುತ್ತದೆ? ಫೈಜ್ ತಮ್ಮ ಕವಿತೆಯಲ್ಲಿ ಮಾರ್ದನಿಸಿದ ಮನ್ಸೂರನ ಸೂಫಿ ತತ್ವ ಬೇರೆಯಲ್ಲ ಉಪನಿಷತ್ತುಗಳಲ್ಲಿ ಹೇಳಲಾದ ಅದ್ವೈತ ತತ್ವ ಬೇರೆಯಲ್ಲ. ನಮ್ಮ ನೋಡುವ ಕಣ್ಣು, ಸ್ವೀಕರಿಸುವ ಒಳಗಣ್ಣು ಹೃದಯಗಳು ಪರಿಶುದ್ಧವಾಗಿದ್ದರೆ ಇದನ್ನು ಅರಿಯುವುದು ಕಷ್ಟವೇನಲ್ಲ ಆದರೆ ವೈದಿಕ ವಿಷಜಂತು ವಸಿ ಶರ್ಮಾನಂತ ಮತಾಂಧರಿಗೆ ಪ್ರತಿಯೊಂದೂ ಹಿಂದು ಧರ್ಮ ವಿರೋಧಿಯಾಗಿಯೇ ಕಾಣಿಸುವುದು, ಫೈಜ್ ಕವಿತೆಯನ್ನು ಹಾಡುವ, ಅದನ್ನು ಸಮರ್ಥಿಸುವ ಪ್ರತಿಯೊಬ್ಬರೂ ಐಸಿಸ್‍ನ ಸಮರ್ಥಕರಂತೆ ತೋರುತ್ತಿರುವುದು ಅಚ್ಚರಿಯೂ ಅಲ್ಲ ಹೊಸ ವಿಷಯ ಅಂತೂ ಅಲ್ಲವೇ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...