Homeಮುಖಪುಟನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

- Advertisement -
- Advertisement -

ರೂಪಾಯಿ 68 ಕೋಟಿ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ ಆರೋಪದ ಮೇಲೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಸಮೂಹ ಕಂಪನಿ ರಿಲಯನ್ಸ್ ಪವರ್‌ನ ಸಿಎಫ್‌ಒ ಅಶೋಕ್ ಪಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ.

ವಿಚಾರಣೆಯ ಬಳಿಕ ಶುಕ್ರವಾರ ರಾತ್ರಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಅಶೋಕ್ ಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಶೋಕ್ ಪಾಲ್ ಅವರನ್ನು ಶನಿವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಈ ಪ್ರಕರಣವು ರಿಲಯನ್ಸ್ ಪವರ್‌ನ ಅಂಗಸಂಸ್ಥೆಯಾದ ರಿಲಯನ್ಸ್ ಎನ್‌ಯು ಬೆಸ್ ಲಿಮಿಟೆಡ್ ಪರವಾಗಿ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಇಸಿಐ) ಗೆ ಸಲ್ಲಿಸಲಾದ 68.2 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿಗೆ ಸಂಬಂಧಿಸಿದೆ, ಅದು ‘ನಕಲಿ’ ಎಂದು ಕಂಡುಬಂದಿದೆ.

ಈ ಕಂಪನಿಯನ್ನು ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು. ವ್ಯಾಪಾರ ಗುಂಪುಗಳಿಗೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ಒದಗಿಸುವ ದಂಧೆಯನ್ನು ನಡೆಸುತ್ತಿದ್ದ ಆರೋಪಿ ಕಂಪನಿಯನ್ನು ಒಡಿಶಾ ಮೂಲದ ಬಿಸ್ವಾಲ್ ಟ್ರೇಡ್‌ಲಿಂಕ್ ಎಂದು ಇಡಿ ಗುರುತಿಸಿದೆ.

ತನಿಖೆಯ ಭಾಗವಾಗಿ, ಇಡಿ ಆಗಸ್ಟ್‌ನಲ್ಲಿ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧ ಶೋಧ ನಡೆಸಿ, ಅದರ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್ ಅವರನ್ನು ಬಂಧಿಸಿತ್ತು.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ನವೆಂಬರ್ 2024ರಲ್ಲಿ ದಾಖಲಿಸಿದ ಎಫ್‌ಐಆರ್‌ನಿಂದ ಈ ಹಣ ಅಕ್ರಮ ವರ್ಗಾವಣೆ ಪ್ರಕರಣ ಹುಟ್ಟಿಕೊಂಡಿದೆ.

ಕಂಪನಿಯು ಶೇಕಡ 8ರಷ್ಟು ಕಮಿಷನ್ ಮೇಲೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ನೀಡುವಲ್ಲಿ ನಿರತವಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ರಿಲಯನ್ಸ್ ಪವರ್ ‘ವಂಚನೆ ಮತ್ತು ಪಿತೂರಿಯ ಬಲಿಪಶು ಎಂದು ರಿಲಯನ್ಸ್ ಗ್ರೂಪ್ ಆಗ ಹೇಳಿತ್ತು. ನವೆಂಬರ್ 7, 2024ರಂದು ಷೇರು ವಿನಿಮಯ ಕೇಂದ್ರಕ್ಕೆ ಸರಿಯಾದ ಬಹಿರಂಗಪಡಿಸುವಿಕೆಯನ್ನು ಮಾಡಿತ್ತು.

ಅಕ್ಟೋಬರ್ 2024ರಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗಲ್ಲಿ ಥರ್ಡ್ ಪಾರ್ಟಿ (ಆರೋಪಿ ಕಂಪನಿ) ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕ್ರಿಯೆ ನಂತರ ನಡೆಯಲಿದೆ ಎಂದು ರಿಲಯನ್ಸ್ ಗ್ರೂಪ್ ವಕ್ತಾರರು ತಿಳಿಸಿದ್ದರು.

ಇಡಿ ಮೂಲಗಳ ಪ್ರಕಾರ, ಭುವನೇಶ್ವರ ಮೂಲದ ಕಂಪನಿಯೊಂದು s-bi.co.in ಎಂಬ ಇಮೇಲ್ ಡೊಮೇನ್ ಬಳಸಿತ್ತು, ಇದು sbi.co.in ಗೆ ಸಮಾನವಾಗಿದೆ. ಇದರಿಂದಾಗಿ, ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದಲೇ ಸಂವಹನ ನಡೆಸಲಾಗುತ್ತಿದೆ ಎಂಬ ಒಂದು ನಂಬಿಕೆಯ ಮುಖಭಾವ ಸೃಷ್ಟಿಸಲಾಗಿತ್ತು.

ಎಸ್‌ಇಸಿಐಗೆ ‘ನಕಲಿ’ ಸಂವಹನವನ್ನು ಕಳುಹಿಸಲು ನಕಲಿ ಡೊಮೇನ್ ಅನ್ನು ಬಳಸಲಾಗಿದೆ ಎಂದು ಹೇಳಲಾಗ್ತಿದೆ.

ಇಡಿಯ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಂಪನಿಯು ಕಮಿಷನ್‌ಗಾಗಿ ‘ನಕಲಿ’ ಬಿಲ್‌ಗಳನ್ನು ಸೃಷ್ಟಿಸಿತ್ತು ಮತ್ತು ಅನೇಕ ‘ಬಹಿರಂಗಪಡಿಸದ ಬ್ಯಾಂಕ್ ಖಾತೆಗಳನ್ನು ಬಳಸಿತ್ತು.

ಈ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿಗಳ ಸಂದಿಗ್ಧ ವಹಿವಾಟುಗಳು ನಡೆದಿವೆ. ಕಂಪನಿಯು ಕೇವಲ ಕಾಗದದಲ್ಲಿ ಮಾತ್ರ ಇದೆ. ಏಕೆಂದರೆ, ಅದರ ನೋಂದಾಯಿತ ಕಚೇರಿಯು ಬಿಸ್ವಾಲ್‌ನ ಸಂಬಂಧಿಯೊಬ್ಬರ ವಸತಿ ಆಸ್ತಿಯಾಗಿದೆ. ತನಿಖೆಯ ಸಂದರ್ಭದಲ್ಲಿ ಆ ವಿಳಾಸದಲ್ಲಿ ಕಂಪನಿಯ ಯಾವುದೇ ದಾಖಲೆಗಳು ಕಂಡುಬಂದಿಲ್ಲ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ವಿವರಿಸಿವೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...