Homeಮುಖಪುಟನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

- Advertisement -
- Advertisement -

ರೂಪಾಯಿ 68 ಕೋಟಿ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ ಆರೋಪದ ಮೇಲೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಸಮೂಹ ಕಂಪನಿ ರಿಲಯನ್ಸ್ ಪವರ್‌ನ ಸಿಎಫ್‌ಒ ಅಶೋಕ್ ಪಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ.

ವಿಚಾರಣೆಯ ಬಳಿಕ ಶುಕ್ರವಾರ ರಾತ್ರಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಅಶೋಕ್ ಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಶೋಕ್ ಪಾಲ್ ಅವರನ್ನು ಶನಿವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಈ ಪ್ರಕರಣವು ರಿಲಯನ್ಸ್ ಪವರ್‌ನ ಅಂಗಸಂಸ್ಥೆಯಾದ ರಿಲಯನ್ಸ್ ಎನ್‌ಯು ಬೆಸ್ ಲಿಮಿಟೆಡ್ ಪರವಾಗಿ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಇಸಿಐ) ಗೆ ಸಲ್ಲಿಸಲಾದ 68.2 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿಗೆ ಸಂಬಂಧಿಸಿದೆ, ಅದು ‘ನಕಲಿ’ ಎಂದು ಕಂಡುಬಂದಿದೆ.

ಈ ಕಂಪನಿಯನ್ನು ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು. ವ್ಯಾಪಾರ ಗುಂಪುಗಳಿಗೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ಒದಗಿಸುವ ದಂಧೆಯನ್ನು ನಡೆಸುತ್ತಿದ್ದ ಆರೋಪಿ ಕಂಪನಿಯನ್ನು ಒಡಿಶಾ ಮೂಲದ ಬಿಸ್ವಾಲ್ ಟ್ರೇಡ್‌ಲಿಂಕ್ ಎಂದು ಇಡಿ ಗುರುತಿಸಿದೆ.

ತನಿಖೆಯ ಭಾಗವಾಗಿ, ಇಡಿ ಆಗಸ್ಟ್‌ನಲ್ಲಿ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧ ಶೋಧ ನಡೆಸಿ, ಅದರ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್ ಅವರನ್ನು ಬಂಧಿಸಿತ್ತು.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ನವೆಂಬರ್ 2024ರಲ್ಲಿ ದಾಖಲಿಸಿದ ಎಫ್‌ಐಆರ್‌ನಿಂದ ಈ ಹಣ ಅಕ್ರಮ ವರ್ಗಾವಣೆ ಪ್ರಕರಣ ಹುಟ್ಟಿಕೊಂಡಿದೆ.

ಕಂಪನಿಯು ಶೇಕಡ 8ರಷ್ಟು ಕಮಿಷನ್ ಮೇಲೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ನೀಡುವಲ್ಲಿ ನಿರತವಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ರಿಲಯನ್ಸ್ ಪವರ್ ‘ವಂಚನೆ ಮತ್ತು ಪಿತೂರಿಯ ಬಲಿಪಶು ಎಂದು ರಿಲಯನ್ಸ್ ಗ್ರೂಪ್ ಆಗ ಹೇಳಿತ್ತು. ನವೆಂಬರ್ 7, 2024ರಂದು ಷೇರು ವಿನಿಮಯ ಕೇಂದ್ರಕ್ಕೆ ಸರಿಯಾದ ಬಹಿರಂಗಪಡಿಸುವಿಕೆಯನ್ನು ಮಾಡಿತ್ತು.

ಅಕ್ಟೋಬರ್ 2024ರಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗಲ್ಲಿ ಥರ್ಡ್ ಪಾರ್ಟಿ (ಆರೋಪಿ ಕಂಪನಿ) ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕ್ರಿಯೆ ನಂತರ ನಡೆಯಲಿದೆ ಎಂದು ರಿಲಯನ್ಸ್ ಗ್ರೂಪ್ ವಕ್ತಾರರು ತಿಳಿಸಿದ್ದರು.

ಇಡಿ ಮೂಲಗಳ ಪ್ರಕಾರ, ಭುವನೇಶ್ವರ ಮೂಲದ ಕಂಪನಿಯೊಂದು s-bi.co.in ಎಂಬ ಇಮೇಲ್ ಡೊಮೇನ್ ಬಳಸಿತ್ತು, ಇದು sbi.co.in ಗೆ ಸಮಾನವಾಗಿದೆ. ಇದರಿಂದಾಗಿ, ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದಲೇ ಸಂವಹನ ನಡೆಸಲಾಗುತ್ತಿದೆ ಎಂಬ ಒಂದು ನಂಬಿಕೆಯ ಮುಖಭಾವ ಸೃಷ್ಟಿಸಲಾಗಿತ್ತು.

ಎಸ್‌ಇಸಿಐಗೆ ‘ನಕಲಿ’ ಸಂವಹನವನ್ನು ಕಳುಹಿಸಲು ನಕಲಿ ಡೊಮೇನ್ ಅನ್ನು ಬಳಸಲಾಗಿದೆ ಎಂದು ಹೇಳಲಾಗ್ತಿದೆ.

ಇಡಿಯ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಂಪನಿಯು ಕಮಿಷನ್‌ಗಾಗಿ ‘ನಕಲಿ’ ಬಿಲ್‌ಗಳನ್ನು ಸೃಷ್ಟಿಸಿತ್ತು ಮತ್ತು ಅನೇಕ ‘ಬಹಿರಂಗಪಡಿಸದ ಬ್ಯಾಂಕ್ ಖಾತೆಗಳನ್ನು ಬಳಸಿತ್ತು.

ಈ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿಗಳ ಸಂದಿಗ್ಧ ವಹಿವಾಟುಗಳು ನಡೆದಿವೆ. ಕಂಪನಿಯು ಕೇವಲ ಕಾಗದದಲ್ಲಿ ಮಾತ್ರ ಇದೆ. ಏಕೆಂದರೆ, ಅದರ ನೋಂದಾಯಿತ ಕಚೇರಿಯು ಬಿಸ್ವಾಲ್‌ನ ಸಂಬಂಧಿಯೊಬ್ಬರ ವಸತಿ ಆಸ್ತಿಯಾಗಿದೆ. ತನಿಖೆಯ ಸಂದರ್ಭದಲ್ಲಿ ಆ ವಿಳಾಸದಲ್ಲಿ ಕಂಪನಿಯ ಯಾವುದೇ ದಾಖಲೆಗಳು ಕಂಡುಬಂದಿಲ್ಲ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ವಿವರಿಸಿವೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...