Homeಮುಖಪುಟನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

- Advertisement -
- Advertisement -

ರೂಪಾಯಿ 68 ಕೋಟಿ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ ಆರೋಪದ ಮೇಲೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಸಮೂಹ ಕಂಪನಿ ರಿಲಯನ್ಸ್ ಪವರ್‌ನ ಸಿಎಫ್‌ಒ ಅಶೋಕ್ ಪಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ.

ವಿಚಾರಣೆಯ ಬಳಿಕ ಶುಕ್ರವಾರ ರಾತ್ರಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಅಶೋಕ್ ಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಶೋಕ್ ಪಾಲ್ ಅವರನ್ನು ಶನಿವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಈ ಪ್ರಕರಣವು ರಿಲಯನ್ಸ್ ಪವರ್‌ನ ಅಂಗಸಂಸ್ಥೆಯಾದ ರಿಲಯನ್ಸ್ ಎನ್‌ಯು ಬೆಸ್ ಲಿಮಿಟೆಡ್ ಪರವಾಗಿ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಇಸಿಐ) ಗೆ ಸಲ್ಲಿಸಲಾದ 68.2 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿಗೆ ಸಂಬಂಧಿಸಿದೆ, ಅದು ‘ನಕಲಿ’ ಎಂದು ಕಂಡುಬಂದಿದೆ.

ಈ ಕಂಪನಿಯನ್ನು ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು. ವ್ಯಾಪಾರ ಗುಂಪುಗಳಿಗೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ಒದಗಿಸುವ ದಂಧೆಯನ್ನು ನಡೆಸುತ್ತಿದ್ದ ಆರೋಪಿ ಕಂಪನಿಯನ್ನು ಒಡಿಶಾ ಮೂಲದ ಬಿಸ್ವಾಲ್ ಟ್ರೇಡ್‌ಲಿಂಕ್ ಎಂದು ಇಡಿ ಗುರುತಿಸಿದೆ.

ತನಿಖೆಯ ಭಾಗವಾಗಿ, ಇಡಿ ಆಗಸ್ಟ್‌ನಲ್ಲಿ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧ ಶೋಧ ನಡೆಸಿ, ಅದರ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್ ಅವರನ್ನು ಬಂಧಿಸಿತ್ತು.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ನವೆಂಬರ್ 2024ರಲ್ಲಿ ದಾಖಲಿಸಿದ ಎಫ್‌ಐಆರ್‌ನಿಂದ ಈ ಹಣ ಅಕ್ರಮ ವರ್ಗಾವಣೆ ಪ್ರಕರಣ ಹುಟ್ಟಿಕೊಂಡಿದೆ.

ಕಂಪನಿಯು ಶೇಕಡ 8ರಷ್ಟು ಕಮಿಷನ್ ಮೇಲೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ನೀಡುವಲ್ಲಿ ನಿರತವಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ರಿಲಯನ್ಸ್ ಪವರ್ ‘ವಂಚನೆ ಮತ್ತು ಪಿತೂರಿಯ ಬಲಿಪಶು ಎಂದು ರಿಲಯನ್ಸ್ ಗ್ರೂಪ್ ಆಗ ಹೇಳಿತ್ತು. ನವೆಂಬರ್ 7, 2024ರಂದು ಷೇರು ವಿನಿಮಯ ಕೇಂದ್ರಕ್ಕೆ ಸರಿಯಾದ ಬಹಿರಂಗಪಡಿಸುವಿಕೆಯನ್ನು ಮಾಡಿತ್ತು.

ಅಕ್ಟೋಬರ್ 2024ರಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗಲ್ಲಿ ಥರ್ಡ್ ಪಾರ್ಟಿ (ಆರೋಪಿ ಕಂಪನಿ) ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕ್ರಿಯೆ ನಂತರ ನಡೆಯಲಿದೆ ಎಂದು ರಿಲಯನ್ಸ್ ಗ್ರೂಪ್ ವಕ್ತಾರರು ತಿಳಿಸಿದ್ದರು.

ಇಡಿ ಮೂಲಗಳ ಪ್ರಕಾರ, ಭುವನೇಶ್ವರ ಮೂಲದ ಕಂಪನಿಯೊಂದು s-bi.co.in ಎಂಬ ಇಮೇಲ್ ಡೊಮೇನ್ ಬಳಸಿತ್ತು, ಇದು sbi.co.in ಗೆ ಸಮಾನವಾಗಿದೆ. ಇದರಿಂದಾಗಿ, ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದಲೇ ಸಂವಹನ ನಡೆಸಲಾಗುತ್ತಿದೆ ಎಂಬ ಒಂದು ನಂಬಿಕೆಯ ಮುಖಭಾವ ಸೃಷ್ಟಿಸಲಾಗಿತ್ತು.

ಎಸ್‌ಇಸಿಐಗೆ ‘ನಕಲಿ’ ಸಂವಹನವನ್ನು ಕಳುಹಿಸಲು ನಕಲಿ ಡೊಮೇನ್ ಅನ್ನು ಬಳಸಲಾಗಿದೆ ಎಂದು ಹೇಳಲಾಗ್ತಿದೆ.

ಇಡಿಯ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಂಪನಿಯು ಕಮಿಷನ್‌ಗಾಗಿ ‘ನಕಲಿ’ ಬಿಲ್‌ಗಳನ್ನು ಸೃಷ್ಟಿಸಿತ್ತು ಮತ್ತು ಅನೇಕ ‘ಬಹಿರಂಗಪಡಿಸದ ಬ್ಯಾಂಕ್ ಖಾತೆಗಳನ್ನು ಬಳಸಿತ್ತು.

ಈ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿಗಳ ಸಂದಿಗ್ಧ ವಹಿವಾಟುಗಳು ನಡೆದಿವೆ. ಕಂಪನಿಯು ಕೇವಲ ಕಾಗದದಲ್ಲಿ ಮಾತ್ರ ಇದೆ. ಏಕೆಂದರೆ, ಅದರ ನೋಂದಾಯಿತ ಕಚೇರಿಯು ಬಿಸ್ವಾಲ್‌ನ ಸಂಬಂಧಿಯೊಬ್ಬರ ವಸತಿ ಆಸ್ತಿಯಾಗಿದೆ. ತನಿಖೆಯ ಸಂದರ್ಭದಲ್ಲಿ ಆ ವಿಳಾಸದಲ್ಲಿ ಕಂಪನಿಯ ಯಾವುದೇ ದಾಖಲೆಗಳು ಕಂಡುಬಂದಿಲ್ಲ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ವಿವರಿಸಿವೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...