Homeಮುಖಪುಟ‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಪ್ರಮುಖ ಸಾಮಾಜಿಕ ಮಾಧ್ಯಮಗಳನ್ನು ಹೈಜಾಕ್ ಮಾಡಲು ಮತ್ತು ಎನ್‌ಕ್ರಿಪ್ಟ್ ಮಾಡಿದ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌‌ಗಳನ್ನು ಬೈಪಾಸ್ ಮಾಡಲು ಬಿಜೆಪಿಯು “ಟೆಕ್ ಫಾಗ್” ಎಂಬ ರಹಸ್ಯವಾದ ಅಪ್ಲಿಕೇಶನ್ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಬರಬೇಕು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಸಂದೇಶಗಳನ್ನು ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿಕೊಳ್ಳಲು, ಮಹಿಳಾ ಪತ್ರಕರ್ತರು ಸೇರಿದಂತೆ ಬಲಪಂಥೀಯ ರಾಜಕಾರಣದ ವಿರುದ್ಧ ಇರುವವರನ್ನು ಟಾರ್ಗೆಟ್‌ ಮಾಡಲು ಈ ಅಪ್ಲಿಕೇಶನ್ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಥೆ ಆರೋಪಿಸಿದ್ದಾರೆ.

ದಿ ವೈರ್‌ನ ಎರಡು ವರ್ಷಗಳ ತನಿಖೆಯು ರಹಸ್ಯ ಅಪ್ಲಿಕೇಶನ್‌ನ ಕಾರ್ಯನಿರ್ವಹಣೆಯನ್ನು ಬಹಿರಂಗಪಡಿಸಿದೆ. ಟ್ವಿಟರ್‌‌ನ ‘ಟ್ರೆಂಡಿಂಗ್’ ವಿಭಾಗವನ್ನು ಮತ್ತು ಫೇಸ್‌ಬುಕ್‌ನಲ್ಲಿನ ‘ಟ್ರೆಂಡ್’ ಅನ್ನು ಹೈಜಾಕ್ ಮಾಡಬಹುದು, ‘ನಿಷ್ಕ್ರಿಯ’ ವಾಟ್ಸ್‌ಅಪ್‌‌ ಖಾತೆಗಳನ್ನು ಉದ್ದೇಶಿತ ಕಿರುಕುಳಕ್ಕಾಗಿ ಬಳಸಬಹುದು ಎಂಬುದನ್ನು ತನಿಖಾ ವರದಿ ಹೊರಹಾಕಿದೆ.

“ಸರ್ಕಾರವು ನಿಸ್ಸಂಶಯವಾಗಿ ಟೆಕ್ ಫಾಗ್‌ನೊಂದಿಗೆ ಕೈಜೋಡಿಸಿದೆ. ಬಿಜೆಪಿ ವಿಶೇಷವಾಗಿ ಟೆಕ್ ಫಾಗ್‌ನೊಂದಿಗಿದೆ. ಆದರೆ ಭಾರತದ ಐಟಿ ಮತ್ತು ದೂರಸಂಪರ್ಕ ಸಚಿವರು ಏನು ಮಾಡುತ್ತಿದ್ದಾರೆ? ಸಮಸ್ಯೆ ಎಷ್ಟು ಗಂಭೀರವಾಗಿದ್ದರೂ ಸಚಿವಾಲಯ ಏಕೆ ಎಚ್ಚೆತ್ತುಕೊಂಡಿಲ್ಲ?” ಸುಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಪತ್ರಕರ್ತರು ಮತ್ತು ರಾಜಕಾರಣಿಗಳು ಸೇರಿದಂತೆ ಜನರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಬಳಸುವ ಬಗ್ಗೆ ಸರ್ಕಾರವು ಮೌನವಾಗಿದೆ. ಸುಪ್ರೀಂ ಕೋರ್ಟ್ ಪೆಗಾಸಸ್‌‌ ವಿವಾದವನ್ನು ವಿಚಾರಣೆ ಮಾಡುತ್ತಿದೆ ಎಂದಿರುವ ಅವರು, ಟೆಕ್‌ ಫಾಗ್‌ ಪ್ರಕರಣವನ್ನೂ ಹೀಗೆಯೇ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ. ಸುಪ್ರಿಂ ಕೋರ್ಟ್ ಈಗಾಗಲೇ ಪೆಗಾಸಸ್ ವಿಷಯವನ್ನು ಪರಿಶೀಲಿಸುತ್ತಿದೆ. ಈ ವರದಿಯು ಭಾರತೀಯ ನಾಗರಿಕರನ್ನು ‌ಟಾರ್ಗೆಟ್‌ ಮಾಡಿದೆ. ನಮ್ಮ ಪ್ರಜಾಪ್ರಭುತ್ವದ ತಳಹದಿಯನ್ನೇ ಘಾಸಿಗೊಳಿಸುವುದರಿಂದ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ನೋಡಬೇಕು” ಅವರು ಹೇಳಿದ್ದಾರೆ.

“ಭಾರತದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಹಕ್ಕು ಅಥವಾ ಸ್ವಾತಂತ್ರ್ಯ ಯಾರಿಗೂ ಇರಬಾರದು ಎಂಬ ಕಾರಣಕ್ಕಾಗಿ ನಾನು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು. ಇದರ ಹಿಂದೆ ಇರುವವರನ್ನು ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಕೆಲವು ಪದಾಧಿಕಾರಿಗಳು ಈ ಅಪ್ಲಿಕೇಷನ್‌‌ನ ಭಾಗವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯು ಈ ವಿಷಯದ ಬಗ್ಗೆ ಸ್ಪಷ್ಟವಾಗಿರಬೇಕು ಎಂದು ತಿಳಿಸಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಯುವ ಮೊರ್ಚಾದ ನಾಯಕರೊಬ್ಬರು, ಬಿಜೆಪಿ ಆ್ಯಪ್ ಬಳಸಿರುವುದನ್ನು ನಿರಾಕರಿಸಿದ್ದಾರೆ.

ಕರೋನವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ನಂತರ ಕಾಂಗ್ರೆಸ್‌ ಪಕ್ಷವು ಕಾರ್ಮಿಕರೊಂದಿಗೆ ನಿಂತಿತು. ಆಗ ಹ್ಯಾಶ್‌ಟ್ಯಾಗ್ ಬಳಸಿ ಕಾಂಗ್ರೆಸ್ ಅನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲು ಟೆಕ್‌ ಫಾಗ್‌ ಅಪ್ಲಿಕೇಷನ್‌‌ ಬಳಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಆರೋಪಿಸಿದ್ದಾರೆ.

ತಬ್ಲೀಘಿ ಜಮಾತ್‌ನ ಮೇಲೆಯೂ ವ್ಯವಸ್ಥಿತ ದಾಳಿಯನ್ನು ಟೆಕ್ ಫಾಗ್ ಮಾಡಿದೆ. ಆದ್ದರಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಯಾಕೆಂದರೆ ಇದು ಭಾರತದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ನೋವುಂಟು ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ರಹಸ್ಯ ಅಪ್ಲಿಕೇಶನ್ ಕುರಿತ ಚರ್ಚೆಗಾಗಿ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯನ್ನು ಕೇಳಿದ್ದಾರೆ. ಟೆಕ್‌ ಫಾಗ್‌ ವಿಷಯವು ಗಂಭೀರವಾಗಿದ್ದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬುಧಾಬಿ | ಭದ್ರತಾಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...