Homeಮುಖಪುಟ‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಪ್ರಮುಖ ಸಾಮಾಜಿಕ ಮಾಧ್ಯಮಗಳನ್ನು ಹೈಜಾಕ್ ಮಾಡಲು ಮತ್ತು ಎನ್‌ಕ್ರಿಪ್ಟ್ ಮಾಡಿದ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌‌ಗಳನ್ನು ಬೈಪಾಸ್ ಮಾಡಲು ಬಿಜೆಪಿಯು “ಟೆಕ್ ಫಾಗ್” ಎಂಬ ರಹಸ್ಯವಾದ ಅಪ್ಲಿಕೇಶನ್ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಬರಬೇಕು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಸಂದೇಶಗಳನ್ನು ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿಕೊಳ್ಳಲು, ಮಹಿಳಾ ಪತ್ರಕರ್ತರು ಸೇರಿದಂತೆ ಬಲಪಂಥೀಯ ರಾಜಕಾರಣದ ವಿರುದ್ಧ ಇರುವವರನ್ನು ಟಾರ್ಗೆಟ್‌ ಮಾಡಲು ಈ ಅಪ್ಲಿಕೇಶನ್ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಥೆ ಆರೋಪಿಸಿದ್ದಾರೆ.

ದಿ ವೈರ್‌ನ ಎರಡು ವರ್ಷಗಳ ತನಿಖೆಯು ರಹಸ್ಯ ಅಪ್ಲಿಕೇಶನ್‌ನ ಕಾರ್ಯನಿರ್ವಹಣೆಯನ್ನು ಬಹಿರಂಗಪಡಿಸಿದೆ. ಟ್ವಿಟರ್‌‌ನ ‘ಟ್ರೆಂಡಿಂಗ್’ ವಿಭಾಗವನ್ನು ಮತ್ತು ಫೇಸ್‌ಬುಕ್‌ನಲ್ಲಿನ ‘ಟ್ರೆಂಡ್’ ಅನ್ನು ಹೈಜಾಕ್ ಮಾಡಬಹುದು, ‘ನಿಷ್ಕ್ರಿಯ’ ವಾಟ್ಸ್‌ಅಪ್‌‌ ಖಾತೆಗಳನ್ನು ಉದ್ದೇಶಿತ ಕಿರುಕುಳಕ್ಕಾಗಿ ಬಳಸಬಹುದು ಎಂಬುದನ್ನು ತನಿಖಾ ವರದಿ ಹೊರಹಾಕಿದೆ.

“ಸರ್ಕಾರವು ನಿಸ್ಸಂಶಯವಾಗಿ ಟೆಕ್ ಫಾಗ್‌ನೊಂದಿಗೆ ಕೈಜೋಡಿಸಿದೆ. ಬಿಜೆಪಿ ವಿಶೇಷವಾಗಿ ಟೆಕ್ ಫಾಗ್‌ನೊಂದಿಗಿದೆ. ಆದರೆ ಭಾರತದ ಐಟಿ ಮತ್ತು ದೂರಸಂಪರ್ಕ ಸಚಿವರು ಏನು ಮಾಡುತ್ತಿದ್ದಾರೆ? ಸಮಸ್ಯೆ ಎಷ್ಟು ಗಂಭೀರವಾಗಿದ್ದರೂ ಸಚಿವಾಲಯ ಏಕೆ ಎಚ್ಚೆತ್ತುಕೊಂಡಿಲ್ಲ?” ಸುಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಪತ್ರಕರ್ತರು ಮತ್ತು ರಾಜಕಾರಣಿಗಳು ಸೇರಿದಂತೆ ಜನರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಬಳಸುವ ಬಗ್ಗೆ ಸರ್ಕಾರವು ಮೌನವಾಗಿದೆ. ಸುಪ್ರೀಂ ಕೋರ್ಟ್ ಪೆಗಾಸಸ್‌‌ ವಿವಾದವನ್ನು ವಿಚಾರಣೆ ಮಾಡುತ್ತಿದೆ ಎಂದಿರುವ ಅವರು, ಟೆಕ್‌ ಫಾಗ್‌ ಪ್ರಕರಣವನ್ನೂ ಹೀಗೆಯೇ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ. ಸುಪ್ರಿಂ ಕೋರ್ಟ್ ಈಗಾಗಲೇ ಪೆಗಾಸಸ್ ವಿಷಯವನ್ನು ಪರಿಶೀಲಿಸುತ್ತಿದೆ. ಈ ವರದಿಯು ಭಾರತೀಯ ನಾಗರಿಕರನ್ನು ‌ಟಾರ್ಗೆಟ್‌ ಮಾಡಿದೆ. ನಮ್ಮ ಪ್ರಜಾಪ್ರಭುತ್ವದ ತಳಹದಿಯನ್ನೇ ಘಾಸಿಗೊಳಿಸುವುದರಿಂದ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ನೋಡಬೇಕು” ಅವರು ಹೇಳಿದ್ದಾರೆ.

“ಭಾರತದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಹಕ್ಕು ಅಥವಾ ಸ್ವಾತಂತ್ರ್ಯ ಯಾರಿಗೂ ಇರಬಾರದು ಎಂಬ ಕಾರಣಕ್ಕಾಗಿ ನಾನು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು. ಇದರ ಹಿಂದೆ ಇರುವವರನ್ನು ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಕೆಲವು ಪದಾಧಿಕಾರಿಗಳು ಈ ಅಪ್ಲಿಕೇಷನ್‌‌ನ ಭಾಗವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯು ಈ ವಿಷಯದ ಬಗ್ಗೆ ಸ್ಪಷ್ಟವಾಗಿರಬೇಕು ಎಂದು ತಿಳಿಸಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಯುವ ಮೊರ್ಚಾದ ನಾಯಕರೊಬ್ಬರು, ಬಿಜೆಪಿ ಆ್ಯಪ್ ಬಳಸಿರುವುದನ್ನು ನಿರಾಕರಿಸಿದ್ದಾರೆ.

ಕರೋನವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ನಂತರ ಕಾಂಗ್ರೆಸ್‌ ಪಕ್ಷವು ಕಾರ್ಮಿಕರೊಂದಿಗೆ ನಿಂತಿತು. ಆಗ ಹ್ಯಾಶ್‌ಟ್ಯಾಗ್ ಬಳಸಿ ಕಾಂಗ್ರೆಸ್ ಅನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲು ಟೆಕ್‌ ಫಾಗ್‌ ಅಪ್ಲಿಕೇಷನ್‌‌ ಬಳಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಆರೋಪಿಸಿದ್ದಾರೆ.

ತಬ್ಲೀಘಿ ಜಮಾತ್‌ನ ಮೇಲೆಯೂ ವ್ಯವಸ್ಥಿತ ದಾಳಿಯನ್ನು ಟೆಕ್ ಫಾಗ್ ಮಾಡಿದೆ. ಆದ್ದರಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಯಾಕೆಂದರೆ ಇದು ಭಾರತದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ನೋವುಂಟು ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ರಹಸ್ಯ ಅಪ್ಲಿಕೇಶನ್ ಕುರಿತ ಚರ್ಚೆಗಾಗಿ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯನ್ನು ಕೇಳಿದ್ದಾರೆ. ಟೆಕ್‌ ಫಾಗ್‌ ವಿಷಯವು ಗಂಭೀರವಾಗಿದ್ದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...