Homeಮುಖಪುಟ‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಪ್ರಮುಖ ಸಾಮಾಜಿಕ ಮಾಧ್ಯಮಗಳನ್ನು ಹೈಜಾಕ್ ಮಾಡಲು ಮತ್ತು ಎನ್‌ಕ್ರಿಪ್ಟ್ ಮಾಡಿದ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌‌ಗಳನ್ನು ಬೈಪಾಸ್ ಮಾಡಲು ಬಿಜೆಪಿಯು “ಟೆಕ್ ಫಾಗ್” ಎಂಬ ರಹಸ್ಯವಾದ ಅಪ್ಲಿಕೇಶನ್ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಬರಬೇಕು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಸಂದೇಶಗಳನ್ನು ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿಕೊಳ್ಳಲು, ಮಹಿಳಾ ಪತ್ರಕರ್ತರು ಸೇರಿದಂತೆ ಬಲಪಂಥೀಯ ರಾಜಕಾರಣದ ವಿರುದ್ಧ ಇರುವವರನ್ನು ಟಾರ್ಗೆಟ್‌ ಮಾಡಲು ಈ ಅಪ್ಲಿಕೇಶನ್ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಥೆ ಆರೋಪಿಸಿದ್ದಾರೆ.

ದಿ ವೈರ್‌ನ ಎರಡು ವರ್ಷಗಳ ತನಿಖೆಯು ರಹಸ್ಯ ಅಪ್ಲಿಕೇಶನ್‌ನ ಕಾರ್ಯನಿರ್ವಹಣೆಯನ್ನು ಬಹಿರಂಗಪಡಿಸಿದೆ. ಟ್ವಿಟರ್‌‌ನ ‘ಟ್ರೆಂಡಿಂಗ್’ ವಿಭಾಗವನ್ನು ಮತ್ತು ಫೇಸ್‌ಬುಕ್‌ನಲ್ಲಿನ ‘ಟ್ರೆಂಡ್’ ಅನ್ನು ಹೈಜಾಕ್ ಮಾಡಬಹುದು, ‘ನಿಷ್ಕ್ರಿಯ’ ವಾಟ್ಸ್‌ಅಪ್‌‌ ಖಾತೆಗಳನ್ನು ಉದ್ದೇಶಿತ ಕಿರುಕುಳಕ್ಕಾಗಿ ಬಳಸಬಹುದು ಎಂಬುದನ್ನು ತನಿಖಾ ವರದಿ ಹೊರಹಾಕಿದೆ.

“ಸರ್ಕಾರವು ನಿಸ್ಸಂಶಯವಾಗಿ ಟೆಕ್ ಫಾಗ್‌ನೊಂದಿಗೆ ಕೈಜೋಡಿಸಿದೆ. ಬಿಜೆಪಿ ವಿಶೇಷವಾಗಿ ಟೆಕ್ ಫಾಗ್‌ನೊಂದಿಗಿದೆ. ಆದರೆ ಭಾರತದ ಐಟಿ ಮತ್ತು ದೂರಸಂಪರ್ಕ ಸಚಿವರು ಏನು ಮಾಡುತ್ತಿದ್ದಾರೆ? ಸಮಸ್ಯೆ ಎಷ್ಟು ಗಂಭೀರವಾಗಿದ್ದರೂ ಸಚಿವಾಲಯ ಏಕೆ ಎಚ್ಚೆತ್ತುಕೊಂಡಿಲ್ಲ?” ಸುಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಪತ್ರಕರ್ತರು ಮತ್ತು ರಾಜಕಾರಣಿಗಳು ಸೇರಿದಂತೆ ಜನರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಬಳಸುವ ಬಗ್ಗೆ ಸರ್ಕಾರವು ಮೌನವಾಗಿದೆ. ಸುಪ್ರೀಂ ಕೋರ್ಟ್ ಪೆಗಾಸಸ್‌‌ ವಿವಾದವನ್ನು ವಿಚಾರಣೆ ಮಾಡುತ್ತಿದೆ ಎಂದಿರುವ ಅವರು, ಟೆಕ್‌ ಫಾಗ್‌ ಪ್ರಕರಣವನ್ನೂ ಹೀಗೆಯೇ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ. ಸುಪ್ರಿಂ ಕೋರ್ಟ್ ಈಗಾಗಲೇ ಪೆಗಾಸಸ್ ವಿಷಯವನ್ನು ಪರಿಶೀಲಿಸುತ್ತಿದೆ. ಈ ವರದಿಯು ಭಾರತೀಯ ನಾಗರಿಕರನ್ನು ‌ಟಾರ್ಗೆಟ್‌ ಮಾಡಿದೆ. ನಮ್ಮ ಪ್ರಜಾಪ್ರಭುತ್ವದ ತಳಹದಿಯನ್ನೇ ಘಾಸಿಗೊಳಿಸುವುದರಿಂದ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ನೋಡಬೇಕು” ಅವರು ಹೇಳಿದ್ದಾರೆ.

“ಭಾರತದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಹಕ್ಕು ಅಥವಾ ಸ್ವಾತಂತ್ರ್ಯ ಯಾರಿಗೂ ಇರಬಾರದು ಎಂಬ ಕಾರಣಕ್ಕಾಗಿ ನಾನು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು. ಇದರ ಹಿಂದೆ ಇರುವವರನ್ನು ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಕೆಲವು ಪದಾಧಿಕಾರಿಗಳು ಈ ಅಪ್ಲಿಕೇಷನ್‌‌ನ ಭಾಗವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯು ಈ ವಿಷಯದ ಬಗ್ಗೆ ಸ್ಪಷ್ಟವಾಗಿರಬೇಕು ಎಂದು ತಿಳಿಸಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಯುವ ಮೊರ್ಚಾದ ನಾಯಕರೊಬ್ಬರು, ಬಿಜೆಪಿ ಆ್ಯಪ್ ಬಳಸಿರುವುದನ್ನು ನಿರಾಕರಿಸಿದ್ದಾರೆ.

ಕರೋನವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ನಂತರ ಕಾಂಗ್ರೆಸ್‌ ಪಕ್ಷವು ಕಾರ್ಮಿಕರೊಂದಿಗೆ ನಿಂತಿತು. ಆಗ ಹ್ಯಾಶ್‌ಟ್ಯಾಗ್ ಬಳಸಿ ಕಾಂಗ್ರೆಸ್ ಅನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲು ಟೆಕ್‌ ಫಾಗ್‌ ಅಪ್ಲಿಕೇಷನ್‌‌ ಬಳಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಆರೋಪಿಸಿದ್ದಾರೆ.

ತಬ್ಲೀಘಿ ಜಮಾತ್‌ನ ಮೇಲೆಯೂ ವ್ಯವಸ್ಥಿತ ದಾಳಿಯನ್ನು ಟೆಕ್ ಫಾಗ್ ಮಾಡಿದೆ. ಆದ್ದರಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಯಾಕೆಂದರೆ ಇದು ಭಾರತದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ನೋವುಂಟು ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ರಹಸ್ಯ ಅಪ್ಲಿಕೇಶನ್ ಕುರಿತ ಚರ್ಚೆಗಾಗಿ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯನ್ನು ಕೇಳಿದ್ದಾರೆ. ಟೆಕ್‌ ಫಾಗ್‌ ವಿಷಯವು ಗಂಭೀರವಾಗಿದ್ದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...