Homeಕರ್ನಾಟಕನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

- Advertisement -
- Advertisement -

ತನ್ನ ಮಗಳಿಗೆ ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ ಒಟ್ಟು 11 ಜನರ ವಿರುದ್ಧ ದಾವಣಗೆರೆಯ ಕೆಟಿಜೆ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ.

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ ಎಂದು ಹಲವು ದಿನಗಳಿಂದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅವರ ದಾಖಲೆಗಳು ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರಾಗಿದ್ದು, ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿತ್ತು.

ಇದನ್ನೂ ಓದಿ: ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರೇಣುಕಾಚಾರ್ಯ ಅವರು, ಮಗಳು ಪರಿಶಿಷ್ಟ ಜಾತಿಯ ಸರ್ಟಿಫಿಕೇ‌ಟ್‌ ಪಡೆದಿದ್ದು ನಿಜವೇ ಆಗಿದೆ ಎಂದು ಒಪ್ಪಿಕೊಂಡಿದ್ದರು. ಆದರೆ ತನ್ನ ಮಗಳು ಯಾವುದೆ ಸವಲತ್ತುಗಳನ್ನು ಪಡೆದುಕೊಂಡಿಲ್ಲ ಎಂದು ಹೇಳಿದ್ದರು. ಅಲ್ಲದೆ ಈ ಪ್ರಮಾಣ ಪತ್ರವನ್ನು ತನ್ನ ಸಹೋದರ ಮಾಡಿಕೊಟ್ಟಿದ್ದಾಗಿ ಕೂಡಾ ಹೇಳಿಕೊಂಡಿದ್ದರು.

ಈ ಬಗ್ಗೆ ದಲಿತ ಸಂಘಟನೆಯ ಮುಖಂಡರಾದ ಹೆಗ್ಗರೆ ರಂಗಪ್ಪ ದೂರು ನೀಡಿದ್ದರು. ಅದರಂತೆ ದ್ವಾರಕೇಶ್ವರಯ್ಯ ಸೇರಿದಂತೆ 11 ಜನರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುದರ ಬಗ್ಗೆ ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದು ಹೇಳಿದ್ದಾರೆ

ಇದನ್ನೂ ಓದಿ: ಮಾಧ್ಯಮಗಳ ಜಾತಿ ಅಜೆಂಡಾ ವಿರುದ್ದ ಆಕ್ರೊಶ: ಟಿವಿ ಚರ್ಚೆಗಳನ್ನು ಬಹಿಷ್ಕರಿಸಿದ ಬಿಎಸ್‌ಪಿ

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂಬುವುದು ಇದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಬಿಜೆಪಿ ಸಚಿವರಾಗಿರುವ ಪ್ರಭು ಚೌವ್ಹಾಣ್ ಅವರು ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿತ್ತು. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ಶಿವಮಣಿ ವಿಷಾದಿಸಿದ್ದಾರೆ.

“ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಶಿವಮಣಿ ಆತಂಕ ವ್ಯಕ್ತಪಡಿಸಿದ್ದಾರೆ.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಶಿವಮಣಿ, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ಶಿವಮಣಿ ವಿವರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...