Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...