Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...