Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...