Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...