Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...