Homeಕರ್ನಾಟಕನಕಲಿ ಉದ್ಯೋಗ ಪ್ರಮಾಣಪತ್ರ ನೀಡಿ ESIC ಕಾರ್ಡ್‌ ರಚನೆ; ನಾಲ್ವರ ಬಂಧನ

ನಕಲಿ ಉದ್ಯೋಗ ಪ್ರಮಾಣಪತ್ರ ನೀಡಿ ESIC ಕಾರ್ಡ್‌ ರಚನೆ; ನಾಲ್ವರ ಬಂಧನ

- Advertisement -
- Advertisement -

ನಕಲಿ ಕಂಪನಿಗಳನ್ನು ಸ್ಥಾಪಿಸಿ, ಅದರ ಮೂಲಕ ನಕಲಿ ಉದ್ಯೋಗ ಪ್ರಮಾಣಪತ್ರಗಳನ್ನು ತಯಾರಿಸಿ ಅನರ್ಹರಿಗೆ ನೂರಾರು ಉದ್ಯೋಗಿ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಕಾರ್ಡ್‌ಗಳನ್ನು ರಚಿಸುವ ದಂಧೆಯನ್ನು ಮಂಗಳವಾರ ಭೇದಿಸಿದ್ದಾಗಿ ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ ಮಂಗಳವಾರ ತಿಳಿಸಿದೆ. ನಕಲಿ ಉದ್ಯೋಗ 

ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾಗಿ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ನಿವೃತ್ತ ಸೇನಾಧಿಕಾರಿ ಶ್ರೀಧರ್(42), ರಮೇಶ್ ಬಿ ಕೆ(54), ಚಂದ್ರ ಕುಮಾರ್ ಎಸ್ ಎಚ್(37) ಮತ್ತು ಶಿವಗಂಗಾ(38) ಎಂದು ಗುರುತಿಸಿದ್ದಾರೆ. ಈ ಎಲ್ಲಾ ಆರೋಪಿಗಳು ಬೆಂಗಳೂರಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ನಕಲಿ ಉದ್ಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿ ರಮೇಶ್ 2018 ರಲ್ಲಿ ಈ ಹಗರಣವನ್ನು ಪ್ರಾರಂಭಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಅದಾಗ್ಯೂ, ಅವರ ಅಕ್ರಮ ಕಾರ್ಯಾಚರಣೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿದ್ದವು. 2022 ರಲ್ಲಿ ಇದನ್ನು ಮತ್ತೆ ಪ್ರಾರಂಭಿಸಲಾಗಿತ್ತು, ಈ ವೇಳೆ ಮತ್ತೊಬ್ಬ ಆರೋಪಿ ಶ್ರೀಧರ್ ಕೂಡಾ ಅವರೊಂದಿಗೆ ಸೇರಿಕೊಂಡಿದ್ದ ಎಂದು ಅವರು ಹೇಳಿದ್ದಾರೆ.

21,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ಗಳಿಸುವ ಕಾರ್ಮಿಕರಿಗೆ ESIC ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್‌ ಇದ್ದವರಿಗೆ ESIC ಸಂಯೋಜಿತ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ವಭ್ಯವಾಗುತ್ತದೆ.

ಆರೋಪಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಸೌಲಭ್ಯ ವಂಚಿತ ರೋಗಿಗಳನ್ನು ಗುರಿಯಾಗಿಸಿಕೊಂಡು, ಅತ್ಯಲ್ಪ ಶುಲ್ಕಕ್ಕೆ ಇಎಸ್‌ಐಸಿ ಕಾರ್ಡ್‌ಗಳನ್ನು ನೀಡುತ್ತಿದ್ದರು. ಅದಕ್ಕಾಗಿ ಅವರು ನಕಲಿ ಕಂಪನಿಗಳನ್ನು ಸ್ಥಾಪಿಸಿದ್ದರು. ಜೊತೆಗೆ ESIC ಕಾರ್ಡ್ ಅರ್ಹತಾ ಮಾನದಂಡಗಳನ್ನು ಪೂರೈಸಲು ಉದ್ಯೋಗ ಪ್ರಮಾಣಪತ್ರಗಳನ್ನು ಕೂಡಾ ತಯಾರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ದಾಖಲೆಗಳನ್ನು ಬಳಸಿಕೊಂಡು, ಅವರು 869 ESIC ಕಾರ್ಡ್‌ಗಳನ್ನು ರಚಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಜೊತೆಗೆ ಆರೋಪಿಗಳು ಫಲಾನುಭವಿಗಳಿಂದ ಮಾಸಿಕ 500 ರೂಪಾಯಿಗಳನ್ನು “ಖಾತೆ ಶುಲ್ಕ” ಎಂದು ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಧೆಯ ಸಂಪೂರ್ಣ ವ್ಯಾಪ್ತಿಯನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...