Homeಕರ್ನಾಟಕನಕಲಿ ಉದ್ಯೋಗ ಪ್ರಮಾಣಪತ್ರ ನೀಡಿ ESIC ಕಾರ್ಡ್‌ ರಚನೆ; ನಾಲ್ವರ ಬಂಧನ

ನಕಲಿ ಉದ್ಯೋಗ ಪ್ರಮಾಣಪತ್ರ ನೀಡಿ ESIC ಕಾರ್ಡ್‌ ರಚನೆ; ನಾಲ್ವರ ಬಂಧನ

- Advertisement -
- Advertisement -

ನಕಲಿ ಕಂಪನಿಗಳನ್ನು ಸ್ಥಾಪಿಸಿ, ಅದರ ಮೂಲಕ ನಕಲಿ ಉದ್ಯೋಗ ಪ್ರಮಾಣಪತ್ರಗಳನ್ನು ತಯಾರಿಸಿ ಅನರ್ಹರಿಗೆ ನೂರಾರು ಉದ್ಯೋಗಿ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಕಾರ್ಡ್‌ಗಳನ್ನು ರಚಿಸುವ ದಂಧೆಯನ್ನು ಮಂಗಳವಾರ ಭೇದಿಸಿದ್ದಾಗಿ ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ ಮಂಗಳವಾರ ತಿಳಿಸಿದೆ. ನಕಲಿ ಉದ್ಯೋಗ 

ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾಗಿ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ನಿವೃತ್ತ ಸೇನಾಧಿಕಾರಿ ಶ್ರೀಧರ್(42), ರಮೇಶ್ ಬಿ ಕೆ(54), ಚಂದ್ರ ಕುಮಾರ್ ಎಸ್ ಎಚ್(37) ಮತ್ತು ಶಿವಗಂಗಾ(38) ಎಂದು ಗುರುತಿಸಿದ್ದಾರೆ. ಈ ಎಲ್ಲಾ ಆರೋಪಿಗಳು ಬೆಂಗಳೂರಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ನಕಲಿ ಉದ್ಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿ ರಮೇಶ್ 2018 ರಲ್ಲಿ ಈ ಹಗರಣವನ್ನು ಪ್ರಾರಂಭಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಅದಾಗ್ಯೂ, ಅವರ ಅಕ್ರಮ ಕಾರ್ಯಾಚರಣೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿದ್ದವು. 2022 ರಲ್ಲಿ ಇದನ್ನು ಮತ್ತೆ ಪ್ರಾರಂಭಿಸಲಾಗಿತ್ತು, ಈ ವೇಳೆ ಮತ್ತೊಬ್ಬ ಆರೋಪಿ ಶ್ರೀಧರ್ ಕೂಡಾ ಅವರೊಂದಿಗೆ ಸೇರಿಕೊಂಡಿದ್ದ ಎಂದು ಅವರು ಹೇಳಿದ್ದಾರೆ.

21,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ಗಳಿಸುವ ಕಾರ್ಮಿಕರಿಗೆ ESIC ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್‌ ಇದ್ದವರಿಗೆ ESIC ಸಂಯೋಜಿತ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ವಭ್ಯವಾಗುತ್ತದೆ.

ಆರೋಪಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಸೌಲಭ್ಯ ವಂಚಿತ ರೋಗಿಗಳನ್ನು ಗುರಿಯಾಗಿಸಿಕೊಂಡು, ಅತ್ಯಲ್ಪ ಶುಲ್ಕಕ್ಕೆ ಇಎಸ್‌ಐಸಿ ಕಾರ್ಡ್‌ಗಳನ್ನು ನೀಡುತ್ತಿದ್ದರು. ಅದಕ್ಕಾಗಿ ಅವರು ನಕಲಿ ಕಂಪನಿಗಳನ್ನು ಸ್ಥಾಪಿಸಿದ್ದರು. ಜೊತೆಗೆ ESIC ಕಾರ್ಡ್ ಅರ್ಹತಾ ಮಾನದಂಡಗಳನ್ನು ಪೂರೈಸಲು ಉದ್ಯೋಗ ಪ್ರಮಾಣಪತ್ರಗಳನ್ನು ಕೂಡಾ ತಯಾರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ದಾಖಲೆಗಳನ್ನು ಬಳಸಿಕೊಂಡು, ಅವರು 869 ESIC ಕಾರ್ಡ್‌ಗಳನ್ನು ರಚಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಜೊತೆಗೆ ಆರೋಪಿಗಳು ಫಲಾನುಭವಿಗಳಿಂದ ಮಾಸಿಕ 500 ರೂಪಾಯಿಗಳನ್ನು “ಖಾತೆ ಶುಲ್ಕ” ಎಂದು ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಧೆಯ ಸಂಪೂರ್ಣ ವ್ಯಾಪ್ತಿಯನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...