Homeಮುಖಪುಟನಕಲಿ ಅಂಕಪತ್ರ ಸಲ್ಲಿಕೆ: ಅಯೋಧ್ಯೆಯ ಬಿಜೆಪಿ ಶಾಸಕ ಅನರ್ಹ- 5 ವರ್ಷ ಜೈಲು

ನಕಲಿ ಅಂಕಪತ್ರ ಸಲ್ಲಿಕೆ: ಅಯೋಧ್ಯೆಯ ಬಿಜೆಪಿ ಶಾಸಕ ಅನರ್ಹ- 5 ವರ್ಷ ಜೈಲು

ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

- Advertisement -
- Advertisement -

ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕಪತ್ರ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಅಲ್ಲದೆ ಅವರಿಗೆ 8,000 ರೂ ದಂಡದ ಜೊತೆಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್‌ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ.

ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು, ತಿವಾರಿಯವರ ಐದು ವರ್ಷಗಳ ಶಾಸಕ ಸ್ಥಾನದ ಅಧಿಕಾರಾವಧಿಯು ಕೊನೆಗೊಳ್ಳುವ ಕೆಲವೇ ತಿಂಗಳುಗಳ ಮೊದಲು ಈ ಶಿಕ್ಷೆ ಸಂಭವಿಸಿದೆ. ಅಕ್ಟೋಬರ್ 18 ರಿಂದಲೇ ಅವರ ಅಧಿಕಾರವಧಿ ಕೊನೆಗೊಂಡಿದೆ ವಿಧಾನಸಭಾ ಪ್ರಿನ್ಸಿಪಲ್ ಸೆಕ್ರಟರಿ ವಿನೋದ್ ಕುಮಾರ್ ದುವೆ ನೋಟಿಸ್ ಹೊರಡಿಸಿದ್ದಾರೆ.

ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಯದುವಂಶ್ ರಾಮ್ ತ್ರಿಪಾಠಿ ಅವರು 1992ರಲ್ಲಿ ದಾಖಲಾತಿ ಪಡೆಯಲು ನಕಲಿ ಅಂಕಪತ್ರ ಬಳಸಿದ್ದಾರೆ ಎಂದು ಆರೋಪಿಸಿ ತಿವಾರಿ ವಿರುದ್ಧ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತಿವಾರಿ ಅವರು ಮೊದಲ ವರ್ಷದ ನಕಲಿ ಅಂಕಪಟ್ಟಿ ತಯಾರಿಸಿ ಬಿಎಸ್ಸಿ ಎರಡನೇ ವರ್ಷಕ್ಕೆ ಪ್ರವೇಶ ಪಡೆದಿದ್ದರು ಎಂದು ತ್ರಿಪಾಠಿ ಆರೋಪಿಸಿದ್ದರು.

ನಕಲಿ ಅಂಕಪಟ್ಟಿ ಪ್ರಕರಣದಲ್ಲಿ, ತನಿಖಾಧಿಕಾರಿಯು 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಕೆಳ ನ್ಯಾಯಾಲಯವು 2018 ರಲ್ಲಿ ವಿಚಾರಣೆಗಾಗಿ ಸೆಷನ್ ನ್ಯಾಯಾಲಯಕ್ಕೆ ವಿಷಯವನ್ನು ಉಲ್ಲೇಖಿಸಿತ್ತು. ಈ 28 ವರ್ಷಗಳ ಸುದೀರ್ಘ ವಿಚಾರಣೆಯಲ್ಲಿ, ಫಿರ್ಯಾದಿ ಪ್ರೊಫೆಸರ್ ಯದುವಂಶ್ ರಾಮ್ ತ್ರಿಪಾಠಿ ಕೂಡ ಸಾವನ್ನಪ್ಪಿದ್ದರು ಮತ್ತು ಇತರ ಅನೇಕ ಸಾಕ್ಷಿಗಳು ಸಹ ನಿಧನರಾದರು. ನಂತರ, ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಇತರ ಸಾಕ್ಷಿಗಳನ್ನು ಹಾಜರುಪಡಿಸಿತ್ತು.

ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧ 302, 307,308, 420, 467, 471, 504, 506, 147, 148, 149, 307, 120 ಬಿ ಮುಂತಾದ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯವು ಅಪಹರಣ ಪ್ರಕರಣದಲ್ಲ ತಿವಾರಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 8,000 ರೂ ದಂಡ ವಿಧಿಸಿದೆ.


ಇದನ್ನೂ ಓದಿ: ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...