Homeಮುಖಪುಟನಕಲಿ ಅಂಕಪತ್ರ ಸಲ್ಲಿಕೆ: ಅಯೋಧ್ಯೆಯ ಬಿಜೆಪಿ ಶಾಸಕ ಅನರ್ಹ- 5 ವರ್ಷ ಜೈಲು

ನಕಲಿ ಅಂಕಪತ್ರ ಸಲ್ಲಿಕೆ: ಅಯೋಧ್ಯೆಯ ಬಿಜೆಪಿ ಶಾಸಕ ಅನರ್ಹ- 5 ವರ್ಷ ಜೈಲು

ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

- Advertisement -
- Advertisement -

ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕಪತ್ರ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಅಲ್ಲದೆ ಅವರಿಗೆ 8,000 ರೂ ದಂಡದ ಜೊತೆಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್‌ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ.

ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು, ತಿವಾರಿಯವರ ಐದು ವರ್ಷಗಳ ಶಾಸಕ ಸ್ಥಾನದ ಅಧಿಕಾರಾವಧಿಯು ಕೊನೆಗೊಳ್ಳುವ ಕೆಲವೇ ತಿಂಗಳುಗಳ ಮೊದಲು ಈ ಶಿಕ್ಷೆ ಸಂಭವಿಸಿದೆ. ಅಕ್ಟೋಬರ್ 18 ರಿಂದಲೇ ಅವರ ಅಧಿಕಾರವಧಿ ಕೊನೆಗೊಂಡಿದೆ ವಿಧಾನಸಭಾ ಪ್ರಿನ್ಸಿಪಲ್ ಸೆಕ್ರಟರಿ ವಿನೋದ್ ಕುಮಾರ್ ದುವೆ ನೋಟಿಸ್ ಹೊರಡಿಸಿದ್ದಾರೆ.

ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಯದುವಂಶ್ ರಾಮ್ ತ್ರಿಪಾಠಿ ಅವರು 1992ರಲ್ಲಿ ದಾಖಲಾತಿ ಪಡೆಯಲು ನಕಲಿ ಅಂಕಪತ್ರ ಬಳಸಿದ್ದಾರೆ ಎಂದು ಆರೋಪಿಸಿ ತಿವಾರಿ ವಿರುದ್ಧ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತಿವಾರಿ ಅವರು ಮೊದಲ ವರ್ಷದ ನಕಲಿ ಅಂಕಪಟ್ಟಿ ತಯಾರಿಸಿ ಬಿಎಸ್ಸಿ ಎರಡನೇ ವರ್ಷಕ್ಕೆ ಪ್ರವೇಶ ಪಡೆದಿದ್ದರು ಎಂದು ತ್ರಿಪಾಠಿ ಆರೋಪಿಸಿದ್ದರು.

ನಕಲಿ ಅಂಕಪಟ್ಟಿ ಪ್ರಕರಣದಲ್ಲಿ, ತನಿಖಾಧಿಕಾರಿಯು 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಕೆಳ ನ್ಯಾಯಾಲಯವು 2018 ರಲ್ಲಿ ವಿಚಾರಣೆಗಾಗಿ ಸೆಷನ್ ನ್ಯಾಯಾಲಯಕ್ಕೆ ವಿಷಯವನ್ನು ಉಲ್ಲೇಖಿಸಿತ್ತು. ಈ 28 ವರ್ಷಗಳ ಸುದೀರ್ಘ ವಿಚಾರಣೆಯಲ್ಲಿ, ಫಿರ್ಯಾದಿ ಪ್ರೊಫೆಸರ್ ಯದುವಂಶ್ ರಾಮ್ ತ್ರಿಪಾಠಿ ಕೂಡ ಸಾವನ್ನಪ್ಪಿದ್ದರು ಮತ್ತು ಇತರ ಅನೇಕ ಸಾಕ್ಷಿಗಳು ಸಹ ನಿಧನರಾದರು. ನಂತರ, ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಇತರ ಸಾಕ್ಷಿಗಳನ್ನು ಹಾಜರುಪಡಿಸಿತ್ತು.

ಇಂದ್ರ ಪ್ರತಾಪ್ ತಿವಾರಿ ಅಲಿಯಾಸ್ ಖಬ್ಬು ತಿವಾರಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧ 302, 307,308, 420, 467, 471, 504, 506, 147, 148, 149, 307, 120 ಬಿ ಮುಂತಾದ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯವು ಅಪಹರಣ ಪ್ರಕರಣದಲ್ಲ ತಿವಾರಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 8,000 ರೂ ದಂಡ ವಿಧಿಸಿದೆ.


ಇದನ್ನೂ ಓದಿ: ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...