Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...