Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...