Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...