Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...