Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...