Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...