Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...