Homeಮುಖಪುಟಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

- Advertisement -
- Advertisement -

ಕೃಷ್ಣರಾಜಪೇಟೆ ತಾಲ್ಲೂಕಿನ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೋಲಿಸರಿಗೆ ಬೆದರಿಸಿ ಆಟೋದಲ್ಲಿ ಪರಾರಿಯಾಗಿದ್ದ ಮೂವರು ಯುವಕರನ್ನು ತಹಶಿಲ್ದಾರ್‌ ಶಿವಮಾಧು ಸೇರಿದಂತೆ ಹಲವು ಮಾಧ್ಯಮಗಳು ಮುಸ್ಲಿಂ ಯುವಕರು ಎಂದು ತಪ್ಪು ಸುದ್ದಿ ಹರಡಿದ್ದರಿಂದ ತಾಲ್ಲೂಕಿನಾದ್ಯಂತ ಆತಂಕ ಉಂಟಾಗಿತ್ತು.

ಆದರೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ನಂತರ ಆರೋಪಿಗಳು ಪತ್ತೆಯಾಗಿದ್ದು ಅವರನ್ನು ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಮಹೇಶ್.ಬಿನ್ ಕೆಂಪಟ್ಟಿಗೌಡ, ಅಭಿಶೇಕ್ ಬಿನ್ ಮಹೇಶ,  ಶ್ರೀನಿವಾಸ್ ಬಿನ್ ಪುಟ್ಟರಾಜು ಎಂದು ಗುರುತಿಸಲಾಗಿದೆ.

ವಿಡಿಯೋ ನೋಡಿ

ಮುಸ್ಲಿಮ್ ಯುವಕರ ಬಗ್ಗೆ ಸುಳ್ಳು ಸುದ್ದಿಗಳು

ಕ್ವಾರಂಟೈನ್‌ನಲ್ಲಿದ್ದ ಮುಸ್ಲಿಮ್ ಹುಡುಗರು ಕೆ.ಆರ್ ಪೇಟೆ ತುಂಬಾ ಓಡಾಡಿದ್ದಾರೆ ಎಂಬ ಸುಳ್ಳು ಹರಡುವಿಕೆ. ಕೊನೆಗೆ ಸಿಕ್ಕಿದ್ದು ಬೇರೆ ಧರ್ಮದವರು. ಸುಳ್ಳು ಸುದ್ದಿ ಹರಡುವ ಮುನ್ನ ಪರಿಶೀಲಿಸಿ..

Posted by Naanu Gauri on Thursday, April 9, 2020

ಇದರಿಂದಾಗಿ ತಾಲ್ಲೂಕಿನ ಜನತೆಯಲ್ಲಿ ಉಂಟಾಗಿದ್ದ ಆತಂಕವನ್ನು ಕೃಷ್ಣರಾಜಪೇಟೆ ಗ್ರಾಮಾಂತರ ಪೋಲಿಸರು ದೂರ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

ಬಂಧಿತರ ಪೈಕಿ ಮಹೇಶ್ ಬೆಂಗಳೂರಿನಲ್ಲಿ ಆಟೋ ಓಡಿಸುವ ವೃತ್ತಿ ಮಾಡುತ್ತಿದ್ದು, ಯುಗಾದಿ ಹಬ್ಬಕ್ಕೆ ಸ್ವಗ್ರಾಮ ಬಳ್ಳೇಕೆರೆಗೆ ಬಂದಿದ್ದರು. ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಹೇಶ್ ಕೈಗೆ ಗ್ರಾಮ ಪಂಚಾಯಿತಿ ಯವರು ಸೀಲ್ ಹಾಕಿ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಆದೇಶ ನೀಡಿದ್ದರು. ಆದರೆ ಸ್ನೇಹಿತರೊಂದಿಗೆ ಚನಕುರಳಿಗೆ ಮೆಡಿಕಲ್‌ಗೆ ಹೋಗಿ ವಾಪಸ್ ಬರುವಾಗ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಿಡಿದುಕೊಳ್ಳುವ ಭಯದಿಂದ ನಮಗೆ ಕೊರೋನೊ ಇದೆ ಮುಟ್ಟಿದರೆ ನಿಮಗೂ ಕೊರೋನೋ ಬರುತ್ತದೆ ನೋಡಿ ಎಂದು ಕೈಯಲ್ಲಿದ್ದ ಸೀಲ್ ತೋರಿಸಿ ಭಯಹುಟ್ಟಿಸಿ ಯುವಕರು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ 12 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ರಾತ್ರಿ ತೆಂಡೆಕರೆ ಚೆಕ್‌ಪೋಸ್ಟ್‌ ಬಳಿ ಹೋಗಿದ್ದು ನಾವೆ. ಔಷಧಿ ತರಲು ಚಿನಕುರಳಿಗೆ ಹೋಗಿದ್ದೇವು. ಪೊಲೀಸ್‌ ಭಯದಿಂದ ಅಲ್ಲಿಂದ ತಪ್ಪಿಸಿಕೊಂಡಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಇಂದು ಬೆಳಿಗ್ಗೆಯಿಂದಲೇ ಕೆ.ಆರ್‌ ಪೇಟೆ ಮತ್ತು ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತ ಮುಸ್ಲಿಮರು ಕೆ.ಆರ್‌ ಪೇಟೆ ಸುತ್ತುತ್ತಾ ಇತರರಿಗೂ ಹರಡುತ್ತಿದ್ದಾರೆ ಹುಷಾರಾಗಿರಿ ಎಂಬ ಸುಳ್ಳುಗಳನ್ನು ವೈರಲ್‌ ಮಾಡಲಾಗಿತ್ತು. ಆದರೆ ಆರೋಪಿಗಳು ಮುಸ್ಲಿಮರಲ್ಲ ಎಂಬುದು ಬಂಧನದ ನಂತರ ಸ್ಪಷ್ಟವಾಗಿದೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಎರಡು ದಿನಗಳ ಕೆಳಗೆ ತಾನೇ ಮುಖ್ಯಮಂತ್ರಿ ಯಡಿಯೂರಪ್ಪನವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹರಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದೆರು. ಆದರೂ ಸಹ ಅಧಿಕಾರಿಗಳು ಸೇರಿದಂತೆ ಈ ಸುಳ್ಳು ಸುದ್ದಿ ಹರಡುವ, ಕೋಮುದ್ವೇಷ ಹರಡುವ ಕೆಲಸಗಳು ನಿಂತಿಲ್ಲ. ಈ ಕುರಿತು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....