Homeಮುಖಪುಟಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

- Advertisement -
- Advertisement -

ಕೃಷ್ಣರಾಜಪೇಟೆ ತಾಲ್ಲೂಕಿನ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೋಲಿಸರಿಗೆ ಬೆದರಿಸಿ ಆಟೋದಲ್ಲಿ ಪರಾರಿಯಾಗಿದ್ದ ಮೂವರು ಯುವಕರನ್ನು ತಹಶಿಲ್ದಾರ್‌ ಶಿವಮಾಧು ಸೇರಿದಂತೆ ಹಲವು ಮಾಧ್ಯಮಗಳು ಮುಸ್ಲಿಂ ಯುವಕರು ಎಂದು ತಪ್ಪು ಸುದ್ದಿ ಹರಡಿದ್ದರಿಂದ ತಾಲ್ಲೂಕಿನಾದ್ಯಂತ ಆತಂಕ ಉಂಟಾಗಿತ್ತು.

ಆದರೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ನಂತರ ಆರೋಪಿಗಳು ಪತ್ತೆಯಾಗಿದ್ದು ಅವರನ್ನು ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಮಹೇಶ್.ಬಿನ್ ಕೆಂಪಟ್ಟಿಗೌಡ, ಅಭಿಶೇಕ್ ಬಿನ್ ಮಹೇಶ,  ಶ್ರೀನಿವಾಸ್ ಬಿನ್ ಪುಟ್ಟರಾಜು ಎಂದು ಗುರುತಿಸಲಾಗಿದೆ.

ವಿಡಿಯೋ ನೋಡಿ

ಮುಸ್ಲಿಮ್ ಯುವಕರ ಬಗ್ಗೆ ಸುಳ್ಳು ಸುದ್ದಿಗಳು

ಕ್ವಾರಂಟೈನ್‌ನಲ್ಲಿದ್ದ ಮುಸ್ಲಿಮ್ ಹುಡುಗರು ಕೆ.ಆರ್ ಪೇಟೆ ತುಂಬಾ ಓಡಾಡಿದ್ದಾರೆ ಎಂಬ ಸುಳ್ಳು ಹರಡುವಿಕೆ. ಕೊನೆಗೆ ಸಿಕ್ಕಿದ್ದು ಬೇರೆ ಧರ್ಮದವರು. ಸುಳ್ಳು ಸುದ್ದಿ ಹರಡುವ ಮುನ್ನ ಪರಿಶೀಲಿಸಿ..

Posted by Naanu Gauri on Thursday, April 9, 2020

ಇದರಿಂದಾಗಿ ತಾಲ್ಲೂಕಿನ ಜನತೆಯಲ್ಲಿ ಉಂಟಾಗಿದ್ದ ಆತಂಕವನ್ನು ಕೃಷ್ಣರಾಜಪೇಟೆ ಗ್ರಾಮಾಂತರ ಪೋಲಿಸರು ದೂರ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

ಬಂಧಿತರ ಪೈಕಿ ಮಹೇಶ್ ಬೆಂಗಳೂರಿನಲ್ಲಿ ಆಟೋ ಓಡಿಸುವ ವೃತ್ತಿ ಮಾಡುತ್ತಿದ್ದು, ಯುಗಾದಿ ಹಬ್ಬಕ್ಕೆ ಸ್ವಗ್ರಾಮ ಬಳ್ಳೇಕೆರೆಗೆ ಬಂದಿದ್ದರು. ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಹೇಶ್ ಕೈಗೆ ಗ್ರಾಮ ಪಂಚಾಯಿತಿ ಯವರು ಸೀಲ್ ಹಾಕಿ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಆದೇಶ ನೀಡಿದ್ದರು. ಆದರೆ ಸ್ನೇಹಿತರೊಂದಿಗೆ ಚನಕುರಳಿಗೆ ಮೆಡಿಕಲ್‌ಗೆ ಹೋಗಿ ವಾಪಸ್ ಬರುವಾಗ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಿಡಿದುಕೊಳ್ಳುವ ಭಯದಿಂದ ನಮಗೆ ಕೊರೋನೊ ಇದೆ ಮುಟ್ಟಿದರೆ ನಿಮಗೂ ಕೊರೋನೋ ಬರುತ್ತದೆ ನೋಡಿ ಎಂದು ಕೈಯಲ್ಲಿದ್ದ ಸೀಲ್ ತೋರಿಸಿ ಭಯಹುಟ್ಟಿಸಿ ಯುವಕರು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ 12 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ರಾತ್ರಿ ತೆಂಡೆಕರೆ ಚೆಕ್‌ಪೋಸ್ಟ್‌ ಬಳಿ ಹೋಗಿದ್ದು ನಾವೆ. ಔಷಧಿ ತರಲು ಚಿನಕುರಳಿಗೆ ಹೋಗಿದ್ದೇವು. ಪೊಲೀಸ್‌ ಭಯದಿಂದ ಅಲ್ಲಿಂದ ತಪ್ಪಿಸಿಕೊಂಡಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಇಂದು ಬೆಳಿಗ್ಗೆಯಿಂದಲೇ ಕೆ.ಆರ್‌ ಪೇಟೆ ಮತ್ತು ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತ ಮುಸ್ಲಿಮರು ಕೆ.ಆರ್‌ ಪೇಟೆ ಸುತ್ತುತ್ತಾ ಇತರರಿಗೂ ಹರಡುತ್ತಿದ್ದಾರೆ ಹುಷಾರಾಗಿರಿ ಎಂಬ ಸುಳ್ಳುಗಳನ್ನು ವೈರಲ್‌ ಮಾಡಲಾಗಿತ್ತು. ಆದರೆ ಆರೋಪಿಗಳು ಮುಸ್ಲಿಮರಲ್ಲ ಎಂಬುದು ಬಂಧನದ ನಂತರ ಸ್ಪಷ್ಟವಾಗಿದೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಎರಡು ದಿನಗಳ ಕೆಳಗೆ ತಾನೇ ಮುಖ್ಯಮಂತ್ರಿ ಯಡಿಯೂರಪ್ಪನವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹರಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದೆರು. ಆದರೂ ಸಹ ಅಧಿಕಾರಿಗಳು ಸೇರಿದಂತೆ ಈ ಸುಳ್ಳು ಸುದ್ದಿ ಹರಡುವ, ಕೋಮುದ್ವೇಷ ಹರಡುವ ಕೆಲಸಗಳು ನಿಂತಿಲ್ಲ. ಈ ಕುರಿತು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...