Homeಮುಖಪುಟಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಕೆ.ಆರ್‌ ಪೇಟೆಯಲ್ಲಿ ಮುಸ್ಲಿಂ ಯುವಕರ ಬಗ್ಗೆ ಸುಳ್ಳು ಸುದ್ದಿ: ಕೊನೆಗೆ ಸಿಕ್ಕ ಆರೋಪಿಗಳು ಬೇರೆ ಧರ್ಮದವರು!

ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

- Advertisement -
- Advertisement -

ಕೃಷ್ಣರಾಜಪೇಟೆ ತಾಲ್ಲೂಕಿನ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೋಲಿಸರಿಗೆ ಬೆದರಿಸಿ ಆಟೋದಲ್ಲಿ ಪರಾರಿಯಾಗಿದ್ದ ಮೂವರು ಯುವಕರನ್ನು ತಹಶಿಲ್ದಾರ್‌ ಶಿವಮಾಧು ಸೇರಿದಂತೆ ಹಲವು ಮಾಧ್ಯಮಗಳು ಮುಸ್ಲಿಂ ಯುವಕರು ಎಂದು ತಪ್ಪು ಸುದ್ದಿ ಹರಡಿದ್ದರಿಂದ ತಾಲ್ಲೂಕಿನಾದ್ಯಂತ ಆತಂಕ ಉಂಟಾಗಿತ್ತು.

ಆದರೆ ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ನಂತರ ಆರೋಪಿಗಳು ಪತ್ತೆಯಾಗಿದ್ದು ಅವರನ್ನು ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಮಹೇಶ್.ಬಿನ್ ಕೆಂಪಟ್ಟಿಗೌಡ, ಅಭಿಶೇಕ್ ಬಿನ್ ಮಹೇಶ,  ಶ್ರೀನಿವಾಸ್ ಬಿನ್ ಪುಟ್ಟರಾಜು ಎಂದು ಗುರುತಿಸಲಾಗಿದೆ.

ವಿಡಿಯೋ ನೋಡಿ

ಮುಸ್ಲಿಮ್ ಯುವಕರ ಬಗ್ಗೆ ಸುಳ್ಳು ಸುದ್ದಿಗಳು

ಕ್ವಾರಂಟೈನ್‌ನಲ್ಲಿದ್ದ ಮುಸ್ಲಿಮ್ ಹುಡುಗರು ಕೆ.ಆರ್ ಪೇಟೆ ತುಂಬಾ ಓಡಾಡಿದ್ದಾರೆ ಎಂಬ ಸುಳ್ಳು ಹರಡುವಿಕೆ. ಕೊನೆಗೆ ಸಿಕ್ಕಿದ್ದು ಬೇರೆ ಧರ್ಮದವರು. ಸುಳ್ಳು ಸುದ್ದಿ ಹರಡುವ ಮುನ್ನ ಪರಿಶೀಲಿಸಿ..

Posted by Naanu Gauri on Thursday, April 9, 2020

ಇದರಿಂದಾಗಿ ತಾಲ್ಲೂಕಿನ ಜನತೆಯಲ್ಲಿ ಉಂಟಾಗಿದ್ದ ಆತಂಕವನ್ನು ಕೃಷ್ಣರಾಜಪೇಟೆ ಗ್ರಾಮಾಂತರ ಪೋಲಿಸರು ದೂರ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣ ಸತ್ಯ ತಿಳಿಯುವ ಮುನ್ನ ಸುಳ್ಳು ಸುದ್ದಿ ಹರಡಬಾರದೆಂಬ ಪಾಠವನ್ನು ಕಲಿಸಿದೆ.

ಬಂಧಿತರ ಪೈಕಿ ಮಹೇಶ್ ಬೆಂಗಳೂರಿನಲ್ಲಿ ಆಟೋ ಓಡಿಸುವ ವೃತ್ತಿ ಮಾಡುತ್ತಿದ್ದು, ಯುಗಾದಿ ಹಬ್ಬಕ್ಕೆ ಸ್ವಗ್ರಾಮ ಬಳ್ಳೇಕೆರೆಗೆ ಬಂದಿದ್ದರು. ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಹೇಶ್ ಕೈಗೆ ಗ್ರಾಮ ಪಂಚಾಯಿತಿ ಯವರು ಸೀಲ್ ಹಾಕಿ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಆದೇಶ ನೀಡಿದ್ದರು. ಆದರೆ ಸ್ನೇಹಿತರೊಂದಿಗೆ ಚನಕುರಳಿಗೆ ಮೆಡಿಕಲ್‌ಗೆ ಹೋಗಿ ವಾಪಸ್ ಬರುವಾಗ ತೆಂಡೇಕೆರೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಿಡಿದುಕೊಳ್ಳುವ ಭಯದಿಂದ ನಮಗೆ ಕೊರೋನೊ ಇದೆ ಮುಟ್ಟಿದರೆ ನಿಮಗೂ ಕೊರೋನೋ ಬರುತ್ತದೆ ನೋಡಿ ಎಂದು ಕೈಯಲ್ಲಿದ್ದ ಸೀಲ್ ತೋರಿಸಿ ಭಯಹುಟ್ಟಿಸಿ ಯುವಕರು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ 12 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ರಾತ್ರಿ ತೆಂಡೆಕರೆ ಚೆಕ್‌ಪೋಸ್ಟ್‌ ಬಳಿ ಹೋಗಿದ್ದು ನಾವೆ. ಔಷಧಿ ತರಲು ಚಿನಕುರಳಿಗೆ ಹೋಗಿದ್ದೇವು. ಪೊಲೀಸ್‌ ಭಯದಿಂದ ಅಲ್ಲಿಂದ ತಪ್ಪಿಸಿಕೊಂಡಿದ್ದೆವು ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಇಂದು ಬೆಳಿಗ್ಗೆಯಿಂದಲೇ ಕೆ.ಆರ್‌ ಪೇಟೆ ಮತ್ತು ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತ ಮುಸ್ಲಿಮರು ಕೆ.ಆರ್‌ ಪೇಟೆ ಸುತ್ತುತ್ತಾ ಇತರರಿಗೂ ಹರಡುತ್ತಿದ್ದಾರೆ ಹುಷಾರಾಗಿರಿ ಎಂಬ ಸುಳ್ಳುಗಳನ್ನು ವೈರಲ್‌ ಮಾಡಲಾಗಿತ್ತು. ಆದರೆ ಆರೋಪಿಗಳು ಮುಸ್ಲಿಮರಲ್ಲ ಎಂಬುದು ಬಂಧನದ ನಂತರ ಸ್ಪಷ್ಟವಾಗಿದೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಎರಡು ದಿನಗಳ ಕೆಳಗೆ ತಾನೇ ಮುಖ್ಯಮಂತ್ರಿ ಯಡಿಯೂರಪ್ಪನವರು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹರಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದೆರು. ಆದರೂ ಸಹ ಅಧಿಕಾರಿಗಳು ಸೇರಿದಂತೆ ಈ ಸುಳ್ಳು ಸುದ್ದಿ ಹರಡುವ, ಕೋಮುದ್ವೇಷ ಹರಡುವ ಕೆಲಸಗಳು ನಿಂತಿಲ್ಲ. ಈ ಕುರಿತು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...