Homeಕರ್ನಾಟಕಪೋಲಿಯೋ ಲಸಿಕೆಯಲ್ಲಿ ಯಾವುದೇ ತೊಂದರೆಗಳಿಲ್ಲ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಪೋಲಿಯೋ ಲಸಿಕೆಯಲ್ಲಿ ಯಾವುದೇ ತೊಂದರೆಗಳಿಲ್ಲ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

- Advertisement -
- Advertisement -

ಪಲ್ಸ್ ಪೋಲಿಯೋ ಲಸಿಕೆಯನ್ನು 5 ವರ್ಷದೊಳಗಿನ ಹಾಕಿಸುವುದರಿಂದ ಒಂದು ದೊಡ್ಡ ಪಿಡುಗನ್ನು ನಾವು ತಡೆಗಟ್ಟಿದ್ದೇವೆ. ಅಷ್ಟರಮಟ್ಟಿಗೆ ಪೋಲೀಯೋ ಲಸಿಕೆ ಬಹಳಷ್ಟು ಜನರ ಬದುಕನ್ನು ಸುಧಾರಿಸಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿನ ಕೆಲವು ವಿಕೃತ ಮನಸ್ಸಿನವರು ‘ದಯಮಾಡಿ ಬೇಗ ಶೇರ್ ಮಾಡಿ ನಾಳೆ ಐದು ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಹಾಕಿಸಬೇಡಿ, ಅದರಲ್ಲಿ ವೈರಸ್ ಬೆರೆಸಿರುತ್ತದೆ. ಅದಕ್ಕಾಗಿ ಪೋಲಿಯೋ ತಯಾರು ಮಾಡಿದ  ಆ ಕಂಪನಿಯ ಮಾಲೀಕರನ್ನು ಅರೆಸ್ಟ್ ಮಾಡಿದ್ದಾರೆ. ದಯಮಾಡಿ ಎಲ್ಲರಿಗೂ ತುರ್ತು ಶೇರ್ ಮಾಡಿ, ಇದು ಸತ್ಯ ಸತ್ಯ’ ಎಂಬ ಸುಳ್ಳು ಸುದ್ಧಿಯನ್ನು ಹರಡಿ ಆತಂಕ ಸೃಷ್ಟಿಸುತ್ತಿದ್ದಾರೆ.

ಆದರೆ ಅದು ಸತ್ಯಕ್ಕೆ ದೂರವಾದ ಸಂದೇಶವಾಗಿದ್ದು ಇಂತಹ ವದಂತಿಗಳಿಗೆ ಪೋಷಕರು ಕಿವಿಕೊಡಬಾರದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ. ಹಾಗೂ ಪೋಲಿಯೋ ಮಾಹಿತಿಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ  ಅಂಗನವಾಡಿ ಫಲಾನಭವಿಗಳಿಗೆ/ಫೋಷಕರಿಗೆ ತಿಳಿಸಲು ಸೂಕ್ತ ಕ್ರಮವಹಿಸಲು ಎಲ್ಲಾ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ, ಮೇಲ್ವಿಚಾರಕಿಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿಗೆ ಸೂಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಕರು  ತುರ್ತು ಪತ್ರ ಬರೆದಿದ್ದಾರೆ.

ಪೋಲಿಯೋ ನಿವಾರಣೆ ಮಾಡಲೆಂದು ಇರುವ ಒಂದು ಒಳ್ಳೆಯ ಯೋಜನೆಯ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕಿದೆ. ಪ್ರಜ್ಞಾವಂತ ಜನರು ಎಲ್ಲರಿಗೂ ಸತ್ಯವನ್ನು ತಿಳಿಸಿ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗುವಂತೆ ಮಾಡುವ ಮೂಲಕ ಮಕ್ಕಳಿಗೆ ಪೋಲಿಯೋ ತಗುಲದಂತೆ ನೋಡಿಕೊಳ್ಳಬೇಕಿದೆ.

ಸುಳ್ಳು ಸುದ್ದಿ ಹರಡುವವರಿಗೆ ಏನು ಸಿಗುತ್ತದೆ? ಯಾಕೀಗೆ ಮಾಡುತ್ತಾರೆ? ಜಾತಿ ಧರ್ಮಗಳ ವಿಷಯದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ ನಂತರ ಇವರು ಮಕ್ಕಳ ಆರೋಗ್ಯದ ಮೇಲೆ ಪ್ರಭಾವ ಬೀರುವ ವಿಷಯಗಳಲ್ಲಿಯೂ ಕೂಡ ಸುಳ್ಳು ಸುದ್ದಿ ಹಬ್ಬಿಸುತ್ತಾರೆಂದರೆ ಇವರೆಂಥ ನೀಚರಿರಬೇಕು?

ಇನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ಯಾವುದು ಸತ್ಯ ಯಾವುದು ಮತ್ತು ಯಾವುದು ಸುಳ್ಳು ಯಾವುದು ಎಂಬ ವಿಷಯಗಳನ್ನು  ಮೊದಲು ತಿಳಿದು ನಂತರ ಶೇರ್ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳದೆ ಹೋದರೆ ಇಂತಹ ಬೇಜಾವಾಬ್ದಾರಿ ಘಟನೆಗಳು ನಡೆಯುತ್ತಲೇ ಇರುತ್ತವೆ. ಹಾಗಾಗಿ ಯಾವುದೇ ಸುದ್ದಿಯ ಫ್ಯಾಕ್ಟ್ ಚೆಕ್ ಮಾಡದೇ ಫಾರ್ವಾಡ್ ಮಾಡುವುದು ಸಹ ತಪ್ಪಾಗುತ್ತದೆ. ಸುಳ್ಳು ಸುದ್ದಿಗಳಿಂದ ಗುಂಪು ಹಲ್ಲೆಗಳಾಗಿ ಕೆಲವು ಸಾವುಗಳೇ ಸಂಭವಿಸಿದರೂ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದೆ ಇರುವುದು ವಿಷಾಧನೀಯ. ಯುವಜನತೆ ದಾರಿ ತಪ್ಪದಂತೆ ಸರ್ಕಾರ ಎಚ್ಚರ ವಹಿಸಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...