Homeಕರ್ನಾಟಕಪೋಲಿಯೋ ಲಸಿಕೆಯಲ್ಲಿ ಯಾವುದೇ ತೊಂದರೆಗಳಿಲ್ಲ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಪೋಲಿಯೋ ಲಸಿಕೆಯಲ್ಲಿ ಯಾವುದೇ ತೊಂದರೆಗಳಿಲ್ಲ. ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

- Advertisement -
- Advertisement -

ಪಲ್ಸ್ ಪೋಲಿಯೋ ಲಸಿಕೆಯನ್ನು 5 ವರ್ಷದೊಳಗಿನ ಹಾಕಿಸುವುದರಿಂದ ಒಂದು ದೊಡ್ಡ ಪಿಡುಗನ್ನು ನಾವು ತಡೆಗಟ್ಟಿದ್ದೇವೆ. ಅಷ್ಟರಮಟ್ಟಿಗೆ ಪೋಲೀಯೋ ಲಸಿಕೆ ಬಹಳಷ್ಟು ಜನರ ಬದುಕನ್ನು ಸುಧಾರಿಸಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿನ ಕೆಲವು ವಿಕೃತ ಮನಸ್ಸಿನವರು ‘ದಯಮಾಡಿ ಬೇಗ ಶೇರ್ ಮಾಡಿ ನಾಳೆ ಐದು ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಹಾಕಿಸಬೇಡಿ, ಅದರಲ್ಲಿ ವೈರಸ್ ಬೆರೆಸಿರುತ್ತದೆ. ಅದಕ್ಕಾಗಿ ಪೋಲಿಯೋ ತಯಾರು ಮಾಡಿದ  ಆ ಕಂಪನಿಯ ಮಾಲೀಕರನ್ನು ಅರೆಸ್ಟ್ ಮಾಡಿದ್ದಾರೆ. ದಯಮಾಡಿ ಎಲ್ಲರಿಗೂ ತುರ್ತು ಶೇರ್ ಮಾಡಿ, ಇದು ಸತ್ಯ ಸತ್ಯ’ ಎಂಬ ಸುಳ್ಳು ಸುದ್ಧಿಯನ್ನು ಹರಡಿ ಆತಂಕ ಸೃಷ್ಟಿಸುತ್ತಿದ್ದಾರೆ.

ಆದರೆ ಅದು ಸತ್ಯಕ್ಕೆ ದೂರವಾದ ಸಂದೇಶವಾಗಿದ್ದು ಇಂತಹ ವದಂತಿಗಳಿಗೆ ಪೋಷಕರು ಕಿವಿಕೊಡಬಾರದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ. ಹಾಗೂ ಪೋಲಿಯೋ ಮಾಹಿತಿಯ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ  ಅಂಗನವಾಡಿ ಫಲಾನಭವಿಗಳಿಗೆ/ಫೋಷಕರಿಗೆ ತಿಳಿಸಲು ಸೂಕ್ತ ಕ್ರಮವಹಿಸಲು ಎಲ್ಲಾ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ, ಮೇಲ್ವಿಚಾರಕಿಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿಗೆ ಸೂಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಕರು  ತುರ್ತು ಪತ್ರ ಬರೆದಿದ್ದಾರೆ.

ಪೋಲಿಯೋ ನಿವಾರಣೆ ಮಾಡಲೆಂದು ಇರುವ ಒಂದು ಒಳ್ಳೆಯ ಯೋಜನೆಯ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕಿದೆ. ಪ್ರಜ್ಞಾವಂತ ಜನರು ಎಲ್ಲರಿಗೂ ಸತ್ಯವನ್ನು ತಿಳಿಸಿ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗುವಂತೆ ಮಾಡುವ ಮೂಲಕ ಮಕ್ಕಳಿಗೆ ಪೋಲಿಯೋ ತಗುಲದಂತೆ ನೋಡಿಕೊಳ್ಳಬೇಕಿದೆ.

ಸುಳ್ಳು ಸುದ್ದಿ ಹರಡುವವರಿಗೆ ಏನು ಸಿಗುತ್ತದೆ? ಯಾಕೀಗೆ ಮಾಡುತ್ತಾರೆ? ಜಾತಿ ಧರ್ಮಗಳ ವಿಷಯದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ ನಂತರ ಇವರು ಮಕ್ಕಳ ಆರೋಗ್ಯದ ಮೇಲೆ ಪ್ರಭಾವ ಬೀರುವ ವಿಷಯಗಳಲ್ಲಿಯೂ ಕೂಡ ಸುಳ್ಳು ಸುದ್ದಿ ಹಬ್ಬಿಸುತ್ತಾರೆಂದರೆ ಇವರೆಂಥ ನೀಚರಿರಬೇಕು?

ಇನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ಯಾವುದು ಸತ್ಯ ಯಾವುದು ಮತ್ತು ಯಾವುದು ಸುಳ್ಳು ಯಾವುದು ಎಂಬ ವಿಷಯಗಳನ್ನು  ಮೊದಲು ತಿಳಿದು ನಂತರ ಶೇರ್ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳದೆ ಹೋದರೆ ಇಂತಹ ಬೇಜಾವಾಬ್ದಾರಿ ಘಟನೆಗಳು ನಡೆಯುತ್ತಲೇ ಇರುತ್ತವೆ. ಹಾಗಾಗಿ ಯಾವುದೇ ಸುದ್ದಿಯ ಫ್ಯಾಕ್ಟ್ ಚೆಕ್ ಮಾಡದೇ ಫಾರ್ವಾಡ್ ಮಾಡುವುದು ಸಹ ತಪ್ಪಾಗುತ್ತದೆ. ಸುಳ್ಳು ಸುದ್ದಿಗಳಿಂದ ಗುಂಪು ಹಲ್ಲೆಗಳಾಗಿ ಕೆಲವು ಸಾವುಗಳೇ ಸಂಭವಿಸಿದರೂ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದೆ ಇರುವುದು ವಿಷಾಧನೀಯ. ಯುವಜನತೆ ದಾರಿ ತಪ್ಪದಂತೆ ಸರ್ಕಾರ ಎಚ್ಚರ ವಹಿಸಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...