Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...