Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...