Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...