Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...