Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...