Homeಮುಖಪುಟಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ.

ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ ಭಯೋತ್ಪಾದಕ” ಎಂದು ತಪ್ಪಾಗಿ ಹೇಳಿವೆ ಎಂದು ಆರೋಪಿಸಿ ವಕೀಲ ಶೇಖ್ ಮೊಹಮ್ಮದ್ ಸಲೀಮ್ ಸಲ್ಲಿಸಿದ ದೂರಿನ ಮೇರೆಗೆ ಸಬ್-ನ್ಯಾಯಾಧೀಶ/ವಿಶೇಷ ಮೊಬೈಲ್ ಮ್ಯಾಜಿಸ್ಟ್ರೇಟ್ ಪೂಂಚ್ ಶಫೀಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಮೃತ ಖಾರಿ ಇಕ್ಬಾಲ್ ಅವರು ಪೂಂಚ್‌ನ ಜಾಮಿಯಾ ಝಿಯಾ-ಉಲ್-ಉಲೂಮ್‌ನಲ್ಲಿ ಧಾರ್ಮಿಕ ಶಿಕ್ಷಕರಾಗಿದ್ದರು ಮತ್ತು ಪಾಕಿಸ್ತಾನದ ಶೆಲ್ ದಾಳಿಗೆ ಬಲಿಯಾದ ಭಾರತ ನಾಗರಿಕ ಎಂದು ವಕೀಲ ಸಲೀಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ಆಪರೇಷನ್ ಸಿಂಧೂರ್‌ ಕುರಿತು ನೇರ ಪ್ರಸಾರ ವರದಿಗಳನ್ನು ಮಾಡುವಾಗ ಖಾರಿ ಇಕ್ಬಾಲ್ ಅವರನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ‘ಕುಖ್ಯಾತ ಕಮಾಂಡರ್’ ಎಂದು ಬ್ರಾಂಡ್ ಮಾಡುವ ಕಥೆಗಳನ್ನು ಪ್ರಸಾರ ಮಾಡಿದೆ. ಯಾವುದೇ ಅಧಿಕೃತ ಮೂಲಗಳ ಮಾಹಿತಿ ಪಡೆಯದೆ ಖಾರಿ ಇಕ್ಬಾಲ್ ಅವರಿಗೆ ಭಯೋತ್ಪಾದನೆಯೊಂದಿಗೆ ಸಂಬಂಧ ಕಲ್ಪಿಸಿವೆ ಎಂದಿದ್ದಾರೆ.

ಖಾರಿ ಇಕ್ಬಾಲ್ ಅವರ ಹೆಸರು ಮತ್ತು ಫೋಟೋಗಳು ಇರುವ ವರದಿಯನ್ನು ನಂತರ ಹಿಂಪಡೆಯಲಾಗಿದೆ. ಆದರೆ, ಅವರ ಕುರಿತ ಸುಳ್ಳು ಸುದ್ದಿಯು ಅವರ ಕುಟುಂಬದ ಹೆಸರಿಗೆ ಕಳಂಕ ತಂದಿದೆ ಎಂದು ವಕೀಲ ಸಲೀಮ್ ಹೇಳಿದ್ದಾರೆ.

ವಿಚಾರಣೆ ವೇಳೆ, ವರದಿಯು ದೆಹಲಿಯಿಂದ ಪ್ರಸಾರಗೊಂಡಿರುವ ಕಾರಣ, ಈ ವಿಷಯ ಪೂಂಚ್ ನ್ಯಾಯಾಲಯದ ಪ್ರಾದೇಶಿಕ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ವಾದಿಸಿದ್ದರು.

ಆದರೆ, ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ನ ಸೆಕ್ಷನ್ 199ರ ಅಡಿಯಲ್ಲಿ, ಮಾನನಷ್ಟದಂತಹ ಕೃತ್ಯದ ಪರಿಣಾಮವು ಬೇರೆ ಸ್ಥಳದಲ್ಲಿ ಸಂಭವಿಸಿದಾಗ, ನ್ಯಾಯವ್ಯಾಪ್ತಿಯು ಎರಡೂ ಸ್ಥಳಗಳಲ್ಲಿ ಮಾನ್ಯವಾಗಿರುತ್ತದೆ ಎಂದು ಹೇಳಿ ಪೊಲೀಸರ ಆಕ್ಷೇಪಣೆಯನ್ನು ತಿರಸ್ಕರಿಸಿದೆ. ಮೃತರು ವಾಸಿಸುತ್ತಿದ್ದ, ಕೆಲಸ ಮಾಡುತ್ತಿದ್ದ ಮತ್ತು ಹುತಾತ್ಮರಾದ ಪೂಂಚ್‌ನಲ್ಲಿ ಹಾನಿ ಸಂಭವಿಸಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮಾಧ್ಯಮಗಳ ಜವಾಬ್ದಾರಿಯ ಬಗ್ಗೆಯೂ ನ್ಯಾಯಾಲಯ ಅವಲೋಕನಗಳನ್ನು ಮಾಡಿದೆ. ಸಂವಿಧಾನದ 19(1)(a)ವಿಧಿಯ ಅಡಿಯಲ್ಲಿ ಪತ್ರಿಕಾ ರಕ್ಷಣೆ ಇದೆಯಾದರೂ, ಈ ಹಕ್ಕು 19(2) ವಿಧಿಯ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ವಿಶೇಷವಾಗಿ ಮಾನನಷ್ಟ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಭ್ಯತೆಯನ್ನು ಒಳಗೊಂಡ ಪ್ರಕರಣಗಳಲ್ಲಿ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಪರಿಶೀಲನೆ ಇಲ್ಲದೆ” ಮೃತ ನಾಗರಿಕ ಶಿಕ್ಷಕನನ್ನು ಭಯೋತ್ಪಾದಕ ಎಂದು ಬ್ರಾಂಡ್ ಮಾಡುವುದನ್ನು ನ್ಯಾಯಾಧೀಶರು ಪತ್ರಿಕೋದ್ಯಮ ಗಂಭೀರ ದುಷ್ಕೃತ್ಯ ಎಂದು ಕರೆದಿದ್ದು, ಇದು ಸಾರ್ವಜನಿಕ ಅಶಾಂತಿಗೆ ಉತ್ತೇಜನ ನೀಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದ್ದಿ ವಾಹಿನಿಗಳು ನಂತರ ಕ್ಷಮೆಯಾಚಿಸಿದ್ದರೂ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯೊಂದಿಗೆ ಖಾರಿ ಇಕ್ಬಾಲ್ ಅವರಿಗೆ ಸಂಬಂಧ ಕಲ್ಪಿಸಿದ ಅವರ ಆರಂಭಿಕ ಪ್ರಸಾರವು ವಾಸ್ತವಿಕ ಪರಿಶೀಲನೆಯಿಲ್ಲದೆ ಮಾಡಲಾಗಿದೆ. ಇದು ಮಾನನಷ್ಟ ಉಂಟು ಮಾಡಿದೆ. ಸಾರ್ವಜನಿಕ ಅಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ ಎಂದು ನ್ಯಾಯಾಲಯವು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 353(2),356, ಮತ್ತು 196 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 66 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದಿದೆ.

ಸುಳ್ಳು ಸುದ್ದಿ ಪ್ರಸಾರಕ್ಕೆ ಕ್ಷಮೆಯಾಚನೆ ಸಾಕಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗುರುತಿಸಬಹುದಾದ ಅಪರಾಧ ಬಹಿರಂಗವಾದ ನಂತರ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದು ಒತ್ತಿ ಹೇಳಿದೆ.

ಅದರಂತೆ, ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ಏಳು ದಿನಗಳಲ್ಲಿ ಎಫ್‌ಐಆರ್ ದಾಖಲಿಸಿ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...