Homeಮುಖಪುಟನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

- Advertisement -
- Advertisement -

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವೀಟ್‌ ಮಾಡಿದ್ದಕ್ಕಾಗಿ ’ನ್ಯೂಸ್ ನೇಷನ್‌’ನ ಸಲಹಾ ಸಂಪಾದಕ ದೀಪಕ್ ಚೌರಸಿಯಾ ಅವರಿಗೆ ಲೀಗಲ್‌ ನೋಟಿಸ್ ನೀಡಲಾಗಿದೆ.

ಡಾ.ಫರುಖ್ ಖಾನ್ ಎಂಬುವವರು ಲೀಗಲ್ ನೋಟಿಸ್ ನೀಡಿದ್ದು, ಚೌರಾಸಿಯ ಅವರ ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಭಾವನೆ ಮೂಡಿಸುವ ಪಿತೂರಿಯಾಗಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ಕೇರಳದ ಗರ್ಭಿಣಿ ಆನೆಯ ಕೊಲೆ ಪ್ರಕರಣದಲ್ಲಿ ಅಮ್ಜತ್‌ ಅಲಿ ಮತ್ತು ತಮೀಮ್ ಸೈಖ್ ಎಂಬುವವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” ಎಂದು ದೀಪಕ್‌ ಚೌರಾಸಿಯ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದರು. ಟ್ವಿಟ್ಟರ್‌ನಲ್ಲಿ 50 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಅವರ ಈ ಟ್ವೀಟ್‌ ಅನ್ನು ಸಾವಿರಾರು ಸಂಖ್ಯೆಯಲ್ಲಿ ಜನ ಹಂಚಿಕೊಂಡಿದ್ದರು. ಕೆಲವು ಗಂಟೆಗಳ ಬಳಿಕ ಅವರು ಆ ಟ್ವೀಟ್‌ ಅನ್ನು ಅಳಿಸಿದ್ದಾರೆ.

ಈಗಾಗಲೇ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಚೌರಾಸಿಯ ಅವರ ಈ ಟ್ವೀಟ್‌ ಹೇಗೆ ಕೋಮುಬಣ್ಣವನ್ನು ಪಡೆದುಕೊಂಡಿದೆ ಎಂದು ಡಾ.ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ “ಗರ್ಭಿಣಿ ಆನೆಯನ್ನು ಮುಸ್ಲಿಂಮರು ಹತ್ಯೆ ಮಾಡಿದ್ದಾರೆಂದು ಹಲವು ಜನ ನಂಬಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷಿಸಲು ಕಾರಣವಾಗುತ್ತದೆ ಎಂದು ಡಾ.ಖಾನ್‌ ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದೀಪಕ್ ಚೌರಾಸಿಯಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಡಾ.ಖಾನ್ ಆರೋಪಿಸಿದ್ದಾರೆ. ಅವರು ಮುಸ್ಲಿಂ ಸಮುದಾಯವನ್ನು ಕೆಣಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅವರ ಹಲವಾರು ಟ್ವೀಟ್‌ಗಳು ಈ ದೇಶದ ಎಲ್ಲಾ ಸಮಸ್ಯೆಗಳಿಗೂ ಮುಸ್ಲಿಂಮರೆ ಕಾರಣ ಎಂದು ಬಿಂಬಿಸುತ್ತವೆ ಎಂದು ಆರೋಪಿಸಿದ್ದಾರೆ.

 

ಕೇರಳದಲ್ಲಿ ಗರ್ಭಿಣಿ ಆನೆಯ ಸಾವಿಗೆ ಸಂಬಂಧಿಸಿದಂತೆ ವಿಲ್ಸನ್ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಜೂನ್ 5 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಹೊರತುಪಡಿಸಿ, ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಅಥವಾ ಬಂಧಿಸಲಾಗಿಲ್ಲ ಎಂದು ಪಾಲಕ್ಕಾಡ್ ಎಸ್ಪಿ ಜಿ ಶಿವ ವಿಕ್ರಮ್ ಹೇಳಿದ್ದಾರೆ. ಮೊಹಮ್ಮದ್ ಅಮ್ಜತ್ ಅಲಿ ಮತ್ತು ತಮೀಮ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳ ಬಂಧನದ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ವಿಕ್ರಮ್ ಇದನ್ನು “ನಕಲಿ ಸುದ್ದಿ” ಎಂದು ಕರೆದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...