Homeಮುಖಪುಟನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

- Advertisement -
- Advertisement -

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವೀಟ್‌ ಮಾಡಿದ್ದಕ್ಕಾಗಿ ’ನ್ಯೂಸ್ ನೇಷನ್‌’ನ ಸಲಹಾ ಸಂಪಾದಕ ದೀಪಕ್ ಚೌರಸಿಯಾ ಅವರಿಗೆ ಲೀಗಲ್‌ ನೋಟಿಸ್ ನೀಡಲಾಗಿದೆ.

ಡಾ.ಫರುಖ್ ಖಾನ್ ಎಂಬುವವರು ಲೀಗಲ್ ನೋಟಿಸ್ ನೀಡಿದ್ದು, ಚೌರಾಸಿಯ ಅವರ ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಭಾವನೆ ಮೂಡಿಸುವ ಪಿತೂರಿಯಾಗಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ಕೇರಳದ ಗರ್ಭಿಣಿ ಆನೆಯ ಕೊಲೆ ಪ್ರಕರಣದಲ್ಲಿ ಅಮ್ಜತ್‌ ಅಲಿ ಮತ್ತು ತಮೀಮ್ ಸೈಖ್ ಎಂಬುವವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” ಎಂದು ದೀಪಕ್‌ ಚೌರಾಸಿಯ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದರು. ಟ್ವಿಟ್ಟರ್‌ನಲ್ಲಿ 50 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಅವರ ಈ ಟ್ವೀಟ್‌ ಅನ್ನು ಸಾವಿರಾರು ಸಂಖ್ಯೆಯಲ್ಲಿ ಜನ ಹಂಚಿಕೊಂಡಿದ್ದರು. ಕೆಲವು ಗಂಟೆಗಳ ಬಳಿಕ ಅವರು ಆ ಟ್ವೀಟ್‌ ಅನ್ನು ಅಳಿಸಿದ್ದಾರೆ.

ಈಗಾಗಲೇ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಚೌರಾಸಿಯ ಅವರ ಈ ಟ್ವೀಟ್‌ ಹೇಗೆ ಕೋಮುಬಣ್ಣವನ್ನು ಪಡೆದುಕೊಂಡಿದೆ ಎಂದು ಡಾ.ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ “ಗರ್ಭಿಣಿ ಆನೆಯನ್ನು ಮುಸ್ಲಿಂಮರು ಹತ್ಯೆ ಮಾಡಿದ್ದಾರೆಂದು ಹಲವು ಜನ ನಂಬಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷಿಸಲು ಕಾರಣವಾಗುತ್ತದೆ ಎಂದು ಡಾ.ಖಾನ್‌ ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದೀಪಕ್ ಚೌರಾಸಿಯಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಡಾ.ಖಾನ್ ಆರೋಪಿಸಿದ್ದಾರೆ. ಅವರು ಮುಸ್ಲಿಂ ಸಮುದಾಯವನ್ನು ಕೆಣಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅವರ ಹಲವಾರು ಟ್ವೀಟ್‌ಗಳು ಈ ದೇಶದ ಎಲ್ಲಾ ಸಮಸ್ಯೆಗಳಿಗೂ ಮುಸ್ಲಿಂಮರೆ ಕಾರಣ ಎಂದು ಬಿಂಬಿಸುತ್ತವೆ ಎಂದು ಆರೋಪಿಸಿದ್ದಾರೆ.

 

ಕೇರಳದಲ್ಲಿ ಗರ್ಭಿಣಿ ಆನೆಯ ಸಾವಿಗೆ ಸಂಬಂಧಿಸಿದಂತೆ ವಿಲ್ಸನ್ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಜೂನ್ 5 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಹೊರತುಪಡಿಸಿ, ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಅಥವಾ ಬಂಧಿಸಲಾಗಿಲ್ಲ ಎಂದು ಪಾಲಕ್ಕಾಡ್ ಎಸ್ಪಿ ಜಿ ಶಿವ ವಿಕ್ರಮ್ ಹೇಳಿದ್ದಾರೆ. ಮೊಹಮ್ಮದ್ ಅಮ್ಜತ್ ಅಲಿ ಮತ್ತು ತಮೀಮ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳ ಬಂಧನದ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ವಿಕ್ರಮ್ ಇದನ್ನು “ನಕಲಿ ಸುದ್ದಿ” ಎಂದು ಕರೆದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...