Homeಮುಖಪುಟನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

- Advertisement -
- Advertisement -

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವೀಟ್‌ ಮಾಡಿದ್ದಕ್ಕಾಗಿ ’ನ್ಯೂಸ್ ನೇಷನ್‌’ನ ಸಲಹಾ ಸಂಪಾದಕ ದೀಪಕ್ ಚೌರಸಿಯಾ ಅವರಿಗೆ ಲೀಗಲ್‌ ನೋಟಿಸ್ ನೀಡಲಾಗಿದೆ.

ಡಾ.ಫರುಖ್ ಖಾನ್ ಎಂಬುವವರು ಲೀಗಲ್ ನೋಟಿಸ್ ನೀಡಿದ್ದು, ಚೌರಾಸಿಯ ಅವರ ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಭಾವನೆ ಮೂಡಿಸುವ ಪಿತೂರಿಯಾಗಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ಕೇರಳದ ಗರ್ಭಿಣಿ ಆನೆಯ ಕೊಲೆ ಪ್ರಕರಣದಲ್ಲಿ ಅಮ್ಜತ್‌ ಅಲಿ ಮತ್ತು ತಮೀಮ್ ಸೈಖ್ ಎಂಬುವವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” ಎಂದು ದೀಪಕ್‌ ಚೌರಾಸಿಯ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದರು. ಟ್ವಿಟ್ಟರ್‌ನಲ್ಲಿ 50 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಅವರ ಈ ಟ್ವೀಟ್‌ ಅನ್ನು ಸಾವಿರಾರು ಸಂಖ್ಯೆಯಲ್ಲಿ ಜನ ಹಂಚಿಕೊಂಡಿದ್ದರು. ಕೆಲವು ಗಂಟೆಗಳ ಬಳಿಕ ಅವರು ಆ ಟ್ವೀಟ್‌ ಅನ್ನು ಅಳಿಸಿದ್ದಾರೆ.

ಈಗಾಗಲೇ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಚೌರಾಸಿಯ ಅವರ ಈ ಟ್ವೀಟ್‌ ಹೇಗೆ ಕೋಮುಬಣ್ಣವನ್ನು ಪಡೆದುಕೊಂಡಿದೆ ಎಂದು ಡಾ.ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ “ಗರ್ಭಿಣಿ ಆನೆಯನ್ನು ಮುಸ್ಲಿಂಮರು ಹತ್ಯೆ ಮಾಡಿದ್ದಾರೆಂದು ಹಲವು ಜನ ನಂಬಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷಿಸಲು ಕಾರಣವಾಗುತ್ತದೆ ಎಂದು ಡಾ.ಖಾನ್‌ ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದೀಪಕ್ ಚೌರಾಸಿಯಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಡಾ.ಖಾನ್ ಆರೋಪಿಸಿದ್ದಾರೆ. ಅವರು ಮುಸ್ಲಿಂ ಸಮುದಾಯವನ್ನು ಕೆಣಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅವರ ಹಲವಾರು ಟ್ವೀಟ್‌ಗಳು ಈ ದೇಶದ ಎಲ್ಲಾ ಸಮಸ್ಯೆಗಳಿಗೂ ಮುಸ್ಲಿಂಮರೆ ಕಾರಣ ಎಂದು ಬಿಂಬಿಸುತ್ತವೆ ಎಂದು ಆರೋಪಿಸಿದ್ದಾರೆ.

 

ಕೇರಳದಲ್ಲಿ ಗರ್ಭಿಣಿ ಆನೆಯ ಸಾವಿಗೆ ಸಂಬಂಧಿಸಿದಂತೆ ವಿಲ್ಸನ್ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಜೂನ್ 5 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಹೊರತುಪಡಿಸಿ, ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಅಥವಾ ಬಂಧಿಸಲಾಗಿಲ್ಲ ಎಂದು ಪಾಲಕ್ಕಾಡ್ ಎಸ್ಪಿ ಜಿ ಶಿವ ವಿಕ್ರಮ್ ಹೇಳಿದ್ದಾರೆ. ಮೊಹಮ್ಮದ್ ಅಮ್ಜತ್ ಅಲಿ ಮತ್ತು ತಮೀಮ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳ ಬಂಧನದ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ವಿಕ್ರಮ್ ಇದನ್ನು “ನಕಲಿ ಸುದ್ದಿ” ಎಂದು ಕರೆದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...