Homeಮುಖಪುಟನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

- Advertisement -
- Advertisement -

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವೀಟ್‌ ಮಾಡಿದ್ದಕ್ಕಾಗಿ ’ನ್ಯೂಸ್ ನೇಷನ್‌’ನ ಸಲಹಾ ಸಂಪಾದಕ ದೀಪಕ್ ಚೌರಸಿಯಾ ಅವರಿಗೆ ಲೀಗಲ್‌ ನೋಟಿಸ್ ನೀಡಲಾಗಿದೆ.

ಡಾ.ಫರುಖ್ ಖಾನ್ ಎಂಬುವವರು ಲೀಗಲ್ ನೋಟಿಸ್ ನೀಡಿದ್ದು, ಚೌರಾಸಿಯ ಅವರ ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಭಾವನೆ ಮೂಡಿಸುವ ಪಿತೂರಿಯಾಗಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ಕೇರಳದ ಗರ್ಭಿಣಿ ಆನೆಯ ಕೊಲೆ ಪ್ರಕರಣದಲ್ಲಿ ಅಮ್ಜತ್‌ ಅಲಿ ಮತ್ತು ತಮೀಮ್ ಸೈಖ್ ಎಂಬುವವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” ಎಂದು ದೀಪಕ್‌ ಚೌರಾಸಿಯ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದರು. ಟ್ವಿಟ್ಟರ್‌ನಲ್ಲಿ 50 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಅವರ ಈ ಟ್ವೀಟ್‌ ಅನ್ನು ಸಾವಿರಾರು ಸಂಖ್ಯೆಯಲ್ಲಿ ಜನ ಹಂಚಿಕೊಂಡಿದ್ದರು. ಕೆಲವು ಗಂಟೆಗಳ ಬಳಿಕ ಅವರು ಆ ಟ್ವೀಟ್‌ ಅನ್ನು ಅಳಿಸಿದ್ದಾರೆ.

ಈಗಾಗಲೇ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಚೌರಾಸಿಯ ಅವರ ಈ ಟ್ವೀಟ್‌ ಹೇಗೆ ಕೋಮುಬಣ್ಣವನ್ನು ಪಡೆದುಕೊಂಡಿದೆ ಎಂದು ಡಾ.ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ “ಗರ್ಭಿಣಿ ಆನೆಯನ್ನು ಮುಸ್ಲಿಂಮರು ಹತ್ಯೆ ಮಾಡಿದ್ದಾರೆಂದು ಹಲವು ಜನ ನಂಬಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷಿಸಲು ಕಾರಣವಾಗುತ್ತದೆ ಎಂದು ಡಾ.ಖಾನ್‌ ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದೀಪಕ್ ಚೌರಾಸಿಯಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಡಾ.ಖಾನ್ ಆರೋಪಿಸಿದ್ದಾರೆ. ಅವರು ಮುಸ್ಲಿಂ ಸಮುದಾಯವನ್ನು ಕೆಣಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅವರ ಹಲವಾರು ಟ್ವೀಟ್‌ಗಳು ಈ ದೇಶದ ಎಲ್ಲಾ ಸಮಸ್ಯೆಗಳಿಗೂ ಮುಸ್ಲಿಂಮರೆ ಕಾರಣ ಎಂದು ಬಿಂಬಿಸುತ್ತವೆ ಎಂದು ಆರೋಪಿಸಿದ್ದಾರೆ.

 

ಕೇರಳದಲ್ಲಿ ಗರ್ಭಿಣಿ ಆನೆಯ ಸಾವಿಗೆ ಸಂಬಂಧಿಸಿದಂತೆ ವಿಲ್ಸನ್ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಜೂನ್ 5 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಹೊರತುಪಡಿಸಿ, ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಅಥವಾ ಬಂಧಿಸಲಾಗಿಲ್ಲ ಎಂದು ಪಾಲಕ್ಕಾಡ್ ಎಸ್ಪಿ ಜಿ ಶಿವ ವಿಕ್ರಮ್ ಹೇಳಿದ್ದಾರೆ. ಮೊಹಮ್ಮದ್ ಅಮ್ಜತ್ ಅಲಿ ಮತ್ತು ತಮೀಮ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳ ಬಂಧನದ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ವಿಕ್ರಮ್ ಇದನ್ನು “ನಕಲಿ ಸುದ್ದಿ” ಎಂದು ಕರೆದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...