Homeಮುಖಪುಟನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

ನಕಲಿ ಸುದ್ದಿ ಪ್ರಸಾರ: ಪತ್ರಕರ್ತ ದೀಪಕ್‌ ಚೌರಾಸಿಯಾಗೆ ಲೀಗಲ್‌ ನೋಟಿಸ್‌

- Advertisement -
- Advertisement -

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಟ್ವೀಟ್‌ ಮಾಡಿದ್ದಕ್ಕಾಗಿ ’ನ್ಯೂಸ್ ನೇಷನ್‌’ನ ಸಲಹಾ ಸಂಪಾದಕ ದೀಪಕ್ ಚೌರಸಿಯಾ ಅವರಿಗೆ ಲೀಗಲ್‌ ನೋಟಿಸ್ ನೀಡಲಾಗಿದೆ.

ಡಾ.ಫರುಖ್ ಖಾನ್ ಎಂಬುವವರು ಲೀಗಲ್ ನೋಟಿಸ್ ನೀಡಿದ್ದು, ಚೌರಾಸಿಯ ಅವರ ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಭಾವನೆ ಮೂಡಿಸುವ ಪಿತೂರಿಯಾಗಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ಕೇರಳದ ಗರ್ಭಿಣಿ ಆನೆಯ ಕೊಲೆ ಪ್ರಕರಣದಲ್ಲಿ ಅಮ್ಜತ್‌ ಅಲಿ ಮತ್ತು ತಮೀಮ್ ಸೈಖ್ ಎಂಬುವವರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.” ಎಂದು ದೀಪಕ್‌ ಚೌರಾಸಿಯ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದರು. ಟ್ವಿಟ್ಟರ್‌ನಲ್ಲಿ 50 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಅವರ ಈ ಟ್ವೀಟ್‌ ಅನ್ನು ಸಾವಿರಾರು ಸಂಖ್ಯೆಯಲ್ಲಿ ಜನ ಹಂಚಿಕೊಂಡಿದ್ದರು. ಕೆಲವು ಗಂಟೆಗಳ ಬಳಿಕ ಅವರು ಆ ಟ್ವೀಟ್‌ ಅನ್ನು ಅಳಿಸಿದ್ದಾರೆ.

ಈಗಾಗಲೇ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟ ಅಭಿಯಾನ ನಡೆಯುತ್ತಿರುವ ಸಂದರ್ಭದಲ್ಲಿ ಚೌರಾಸಿಯ ಅವರ ಈ ಟ್ವೀಟ್‌ ಹೇಗೆ ಕೋಮುಬಣ್ಣವನ್ನು ಪಡೆದುಕೊಂಡಿದೆ ಎಂದು ಡಾ.ಖಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ “ಗರ್ಭಿಣಿ ಆನೆಯನ್ನು ಮುಸ್ಲಿಂಮರು ಹತ್ಯೆ ಮಾಡಿದ್ದಾರೆಂದು ಹಲವು ಜನ ನಂಬಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷಿಸಲು ಕಾರಣವಾಗುತ್ತದೆ ಎಂದು ಡಾ.ಖಾನ್‌ ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ದೀಪಕ್ ಚೌರಾಸಿಯಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯ ಮೂಲಕ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಡಾ.ಖಾನ್ ಆರೋಪಿಸಿದ್ದಾರೆ. ಅವರು ಮುಸ್ಲಿಂ ಸಮುದಾಯವನ್ನು ಕೆಣಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಅವರ ಹಲವಾರು ಟ್ವೀಟ್‌ಗಳು ಈ ದೇಶದ ಎಲ್ಲಾ ಸಮಸ್ಯೆಗಳಿಗೂ ಮುಸ್ಲಿಂಮರೆ ಕಾರಣ ಎಂದು ಬಿಂಬಿಸುತ್ತವೆ ಎಂದು ಆರೋಪಿಸಿದ್ದಾರೆ.

 

ಕೇರಳದಲ್ಲಿ ಗರ್ಭಿಣಿ ಆನೆಯ ಸಾವಿಗೆ ಸಂಬಂಧಿಸಿದಂತೆ ವಿಲ್ಸನ್ ಎಂದು ಗುರುತಿಸಲ್ಪಟ್ಟ ಒಬ್ಬ ವ್ಯಕ್ತಿಯನ್ನು ಜೂನ್ 5 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಹೊರತುಪಡಿಸಿ, ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ ಅಥವಾ ಬಂಧಿಸಲಾಗಿಲ್ಲ ಎಂದು ಪಾಲಕ್ಕಾಡ್ ಎಸ್ಪಿ ಜಿ ಶಿವ ವಿಕ್ರಮ್ ಹೇಳಿದ್ದಾರೆ. ಮೊಹಮ್ಮದ್ ಅಮ್ಜತ್ ಅಲಿ ಮತ್ತು ತಮೀಮ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳ ಬಂಧನದ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ವಿಕ್ರಮ್ ಇದನ್ನು “ನಕಲಿ ಸುದ್ದಿ” ಎಂದು ಕರೆದಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...