Homeಕರ್ನಾಟಕಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ಸುವರ್ಣ ನ್ಯೂಸ್‌ನ ವರದಿಗಾರ, ಕ್ಯಾಮರಾ ಮ್ಯಾನ್‌ ವಿರುದ್ದವೂ ಪ್ರಕರಣ ದಾಖಲಾಗಿದೆ, ಧರ್ಮಸ್ಥಳ, ಬೆಳ್ತಂಗಡಿ ಠಾಣೆಗಳ ಪೊಲೀಸರು ಒಟ್ಟು 7 ಎಫ್‌ಐಆರ್ ದಾಖಲಿಸಿದ್ದಾರೆ

- Advertisement -
- Advertisement -

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಬುಧವಾರ (ಆ.6) ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಇತರ ಘಟನೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ.

1. ಕುಡ್ಲ ರ್‍ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಮಾಲೀಕ ಅಜಯ್ ಅಂಚನ್ ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.

ಬುಧವಾರ (ಆ.6) ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರ ವಿಡಿಯೊ ಬೈಟ್ ಪಡೆಯುತ್ತಿದ್ದಾಗ ಸ್ಥಳಕ್ಕೆ ಬಂದ ಸುಮಾರು 15 ರಿಂದ 50 ಜನರ ತಂಡ ತನ್ನ ಕ್ಯಾಮರಾಮ್ಯಾನ್ ಸುಹಾಸ್, ಸಂಚಾರಿ ಸ್ಟುಡಿಯೋ ಚಾನೆಲ್‌ನ  ಸಂತೋಷ್ ಮತ್ತು ಯುನೈಟೆಡ್ ಮೀಡಿಯಾ ಚಾನೆಲ್‌ನ ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ತಮ್ಮ ಕ್ಯಾಮರಾವನ್ನು ರಸ್ತೆಗೆಸೆದು ಹಾನಿಗೊಳಿಸಿದ್ದಾರೆ. ಅದರಲ್ಲಿದ್ದ ಮೆಮೋರಿ ಕಾರ್ಡ್ ಕಳವು ಮಾಡಿದ್ದಾರೆ. ಅಲ್ಲದೆ, ಬಳಿಕ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಅಜಯ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 189(2), 191(2), 115(2), 324(5) , 352, 307 ಮತ್ತು 190 ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

2. ಧರ್ಮಸ್ಥಳ ಠಾಣೆಯಲ್ಲಿ ಎರಡೇ ಎಫ್‌ಐಆರ್ ಅನ್ನು ಪೊಲೀಸರು ಸ್ವಯಂ (ಸುಮೋಟೋ) ದಾಖಲಿಸಿಕೊಂಡಿದ್ದಾರೆ.

ಬುಧವಾರ ಸಂಜೆ ಪಾಂಗಳ ಕ್ರಾಸ್ ಬಳಿ ಸುಮಾರು 25 ರಿಂದ 50 ಜನರು ಎರಡು ಪ್ರತ್ಯೇಕ ಗುಂಪುಗಳಾಗಿ ಅಪರಾಧ ಕೃತ್ಯ ನಡೆಸಲು ಅಕ್ರಮ ಕೂಟ ಸೇರಿದ್ದು, ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳ ಪೊಲೀಸ್‌ ಠಾಣಾ ಉಪನಿರೀಕ್ಷಕರು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಯಾವುದೇ ಅಹಿತಕರ ಘಟನೆಗೆ ನಡೆಸದೇ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡ್ಡಿಪಡಿಸಿ, ಸೇರಿದ್ದ ಗುಂಪುಗಳು ಪರಸ್ಪರ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 189(2), 191(2), 132, 324(6) ಮತ್ತು 190ರ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

3. ಧರ್ಮಸ್ಥಳ ಠಾಣೆಯಲ್ಲಿ ಮೂರನೇ ಎಫ್‌ಐಆರ್ ಕೂಡ ಪೊಲೀಸರು ಸ್ವಯಂ ದಾಖಲಿಸಿಕೊಂಡಿದ್ದಾರೆ. ಇದೂ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಬುಧವಾರ (ಆ.6) ಸಂಜೆ ನಡೆದ ಅಹಿತಕರ ಘಟನೆಗೆ  ಸಂಬಂಧಿಸಿದೆ.

ಸುಮಾರು 50 ರಿಂದ 100 ಮಂದಿ ಧರ್ಮಸ್ಥಳ ಠಾಣಾ ಆವರಣ ಮುಂದೆ ಯಾವುದೇ ಪೂರ್ವಾನುಮತಿಯಿಲ್ಲದೇ, ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿದ್ದಾರೆ ಎಂದು ಆರೋಪಿಸಿರುವ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 189(2) ಮತ್ತು 190ರ ಅಡಿ ಕ್ರಮ ಕೈಗೊಂಡಿದ್ದಾರೆ.

4. ಇನ್ನು ಧರ್ಮಸ್ಥಳ ಠಾಣೆಯಲ್ಲಿ ನಾಲ್ಕನೇ ಪ್ರಕರಣ ಬೆಳ್ತಂಗಡಿ ನಿವಾಸಿ ಪ್ರಮೋದ್‌ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ದಾಖಲಾಗಿದೆ. ಪಾಂಗಳ ಕ್ರಾಸ್‌ನಲ್ಲಿ ಸುಮಾರು 30 ರಿಂದ 40 ಜನರ ಗುಂಪು ಅವ್ಯಾಚವಾಗಿ‌ ಬೈದು, ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಎರಡು ವಾಹನಗಳಿಗೆ ಹಾಗೂ ಕ್ಯಾಮರಾಕ್ಕೆ ಹಾನಿ ಮಾಡಿದ್ದಾರೆ ಎಂದು ಪ್ರಮೋದ್ ಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 189(2), 191(2), 115(2), 110, 324(3),  352, 351(2) ಮತ್ತು 190 ಅಡಿ ಎಫ್‌ಐಆರ್ ದಾಖಲಾಗಿದೆ.

5. ಬೆಳ್ತಂಗಡಿ ಠಾಣೆಯಲ್ಲಿ ಮೊದಲ ಎಫ್‌ಐಆರ್ ಎಷ್ಯಾನೆಟ್ ಸುವರ್ಣ ನ್ಯೂಸ್‌ನ ಕ್ರೈ ರಿಪೋರ್ಟರ್, ಬೆಂಗಳೂರು ನಿವಾಸಿ ಹರೀಶ್ ಆರ್ ನೀಡಿದ ದೂರು ಆಧರಿಸಿ ದಾಖಲಾಗಿದೆ.

ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ನಡೆದ ಹಲ್ಲೆ ಘಟನೆಯ ಗಾಯಾಳುಗಳ ಬಗ್ಗೆ ವರದಿ ಮಾಡಲು ಉಜಿರೆ ಬೆನಕ ಆಸ್ಪತ್ರೆಯ ಬಳಿ ತೆರಳಿದ್ದೆ. ಅಲ್ಲಿ ಗಿರೀಶ್ ಮಟ್ಟಣ್ಣನವರ್ ಅವರೊಂದಿಗೆ ವಿಡಿಯೋ ಬೈಟ್ ಕೊಡುವಂತೆ ಕೇಳಿದ್ದೆ. ಈ ವೇಳೆ ಅವರು ನನಗೆ ಬೈದರು, ಸ್ಥಳದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರೊಂದಿಗಿದ್ದ ಇತರರು ಹಲ್ಲೆ ನಡೆಸಿ ಅವ್ಯಾಚವಾಗಿ ಬೈದರು. ಆಗ ಸ್ಥಳಕ್ಕೆ ಬಂದ ಯೂಟ್ಯೂಬರ್ ಸಮೀರ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹರೀಶ್ ಅರೋಪಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 189(2), 191(1) (2), 115(2), 351(2), 352 ಮತ್ತು 190 ಅಡಿ ಎಫ್‌ಐಆರ್ ದಾಖಲಾಗಿದೆ.

6. ಬೆಳ್ತಂಗಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಬೆಳ್ತಂಗಡಿ ನಿವಾಸಿ ಗಣೇಶ್ ಶೆಟ್ಟಿ ಅವರು ಸುವರ್ಣ ನ್ಯೂಸ್ ಸಂಪಾದಕ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ದ ನೀಡಿರುವ ದೂರು ಆಧರಿಸಿ ದಾಖಲಾಗಿದೆ.

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಹಲ್ಲೆಗೊಳಗಾದವರನ್ನು ಚಿಕಿತ್ಸೆಗಾಗಿ ಉಜಿರೆ ಬೆನಕಾ ಆಸ್ಪತ್ರೆಗೆ  ವಾಹನವೊಂದರಲ್ಲಿ ಕರೆತಂದಿದ್ದೆ. ಗಾಯಾಳುಗಳನ್ನು ನೋಡಲು ಬಂದ ಮಹೇಶ್‌ ಶೆಟ್ಟಿ ತಿಮರೋಡಿ  ಹಾಗೂ ಗಿರೀಶ್‌ ಮಟ್ಟಣ್ಣನವರ್‌ ಅವರನ್ನು ಬೈಟ್‌ ಕೊಡುವಂತೆ ಸುವರ್ಣ ನ್ಯೂಸ್‌ ನ ವರದಿಗಾರ ಹಾಗೂ ಕ್ಯಾಮರಾಮ್ಯಾನ್ ತಡೆದು ನಿಲ್ಲಿಸಿದ್ದರು. ಮಹೇಶ್ ಶೆಟ್ಟಿ ಮತ್ತು ಮಟ್ಟಣ್ಣವರ್ ಬೈಟ್ ಕೊಡಲು ನಿರಾಕರಿಸಿದಾಗ ಬೈಟ್ ಕೊಡಲು ನಿರಾಕರಿಸಿದಾಗ ಸುವರ್ಣ ನ್ಯೂಸ್ ವರದಿಗಾರ ಮತ್ತು ಕ್ಯಾಮರಾ ಮ್ಯಾನ್ ಅವಾಚ್ಯ  ಶಬ್ದಗಳಿಂದ ನಿಂದಿಸಿ ತಳ್ಳಾಟ ನಡೆಸಿದ್ದರು. ಈ ಘಟನೆ ನಡೆದು ಕೆಲಹೊತ್ತಿನಲ್ಲಿ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಅಜಿತ್‌ ಹನುಮಕ್ಕನವರ್‌ “ಸುವರ್ಣ ನ್ಯೂಸ್‌  ವರದಿಗಾರರ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್‌) ಸೆಕ್ಷನ್ 126(2), 296, 351 ಮತ್ತು 3(5) ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

7. ಬೆಳ್ತಂಗಡಿ ಠಾಣೆಯಲ್ಲಿ ಮೂರನೇ ಎಫ್‌ಐಆರ್ ಪೊಲೀಸರು ಸ್ವಯಂ ದಾಖಲಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದೆ.

ಬುಧವಾರ (ಆ.6) ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ನಡೆದ ಹಲ್ಲೆಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಉಜಿರೆಯ ಬೆನಕ ಆಸ್ಪತ್ರೆಯ ಬಳಿ ಸಾರ್ವಜನಿಕರು ಜಮಾವಣೆಗೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು.ಈ ವೇಳೆ ಸ್ಥಳದಲ್ಲಿ ಸುಮಾರು 50 ರಿಂದ 100 ಜನರು ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಘೋಷಣೆಗಳನ್ನು ಕೂಗುತ್ತಿದ್ದರು. ಯಾವುದೇ ಅಹಿತಕರ ಘಟನೆ ನಡೆಸದಂತೆ ಹಾಗೂ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೂರ್ವಾನುಮತಿ ಪಡೆಯದೇ ಅಕ್ರಮಕೂಟ ಸೇರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 189(2)r/ w 190 ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

4 ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ಧರ್ಮಸ್ಥಳದ ಧರ್ಮಾಧಿಕಾರಿಯ ಸರ್ವಾಧಿಕಾರಕ್ಕೆ ಅಂತಿಮ ಮೊಳೆ – ಕೆ.ಎಲ್. ಅಶೋಕ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...