Homeಮುಖಪುಟಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

ಮುಸ್ಕಾನ್‌ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ: ಕ್ರಮ ಜರುಗಿಸಲು ವಿಚಾರ ಮಾಡಲಾಗುವುದು- ಮಂಡ್ಯ ಎಸ್‌ಪಿ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಾದ್ಯಂತ ಹಿಜಾಬ್‌ ವಿಚಾರವಾಗಿ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸಂಘಟನೆಯ ದುಷ್ಕರ್ಮಿಗಳಿಂದ ಸುತ್ತುವರೆಯಲ್ಪಟ್ಟಾಗ, ‘ಅಲ್ಲಾಹು ಅಕ್ಬರ್‌’ ಎಂದು ಘೋಷಣೆ ಕೂಗಿದ್ದ ಮಂಡ್ಯದ ಪಿಇಎಸ್‌‌‌ ವಿದ್ಯಾರ್ಥಿನಿ ಮುಸ್ಕಾನ್ ವಿಚಾರವಾಗಿ, ರಾಜ್ಯದ ಹಲವಾರು ಸುದ್ದಿ ಮಾಧ್ಯಮಗಳು ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಓದುಗರನ್ನು ದಾರಿತಪ್ಪಿಸಿವೆ.

ಮುಖ್ಯವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌‌, ವಿಜಯವಾಣಿ, ಪಬ್ಲಿಕ್ ಟಿವಿ, ಪವರ್‌ ಟಿವಿ, ಸಂಜೆವಾಣಿ ಸೇರಿದಂತೆ ಹಲವಾರು ಪತ್ರಿಕೆಗಳು ಮತ್ತು ಮಾಧ್ಯಮಗಳು ತಮ್ಮ ವೆಬ್‌ಸೈಟ್‌ನಲ್ಲಿ, “ವಿದ್ಯಾರ್ಥಿನಿ ಮುಸ್ಕಾನ್ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ” ಎಂದು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌, “ಮುಸ್ಕಾನ್‌ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಪ್ರಕರಣವಿಲ್ಲ. ಅವರು ಹೋಗಿದ್ದಾರಷ್ಟೇ. ಇದರ ಬಗ್ಗೆ ಅಭಿಪ್ರಾಯ ಕೇಳುವ ಪ್ರಶ್ನೆಯೇ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೌಖಿಕ ಆದೇಶವನ್ನು ಪೊಲೀಸರು ನೀಡಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿರುವ ಕುರಿತು ತಿಳಿಸಿದ ಅವರು, “ಆ ರೀತಿ ಏನೂ ಇಲ್ಲ” ಎಂದರು.

“ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಮಾಧ್ಯಮಗಳ ವಿರುದ್ಧ ಯಾವುದಾದರೂ ಕ್ರಮ ಜರುಗಿಸುವಿರಾ?” ಎಂದು ಪ್ರಶ್ನಿಸಿದಾಗ, “ಈ ಕುರಿತು ವಿಚಾರ ಮಾಡಲಾಗುವುದು” ಎಂದು ಸೂಚನೆ ನೀಡಿದ್ದಾರೆ.

ಮಾಧ್ಯಮಗಳು ವರದಿ ಮಾಡಿದ್ದೇನು?

ಸುವರ್ಣ ನ್ಯೂಸ್‌ ತನ್ನ ವರದಿಯಲ್ಲಿ, “ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಕ್ಕೆ ಹಾರಿದ ಹಿಜಾಬ್ ಹುಡುಗಿ ಮುಸ್ಕಾನ್” ಎಂದು ಸುಳ್ಳು ಸುದ್ದಿಯನ್ನು ವರದಿ ಮಾಡಿದೆ. ಅದು ತನ್ನ ವರದಿಯಲ್ಲಿ ಯಾವುದೇ ಪೊಲೀಸರ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿಲ್ಲ. ಕೇವಲ ಕಪೋಲ ಕಲ್ಪಿತವಾಗಿ ಸುದ್ದಿಯನ್ನು ವರದಿ ಮಾಡಿದೆ. ಸುವರ್ಣ ನ್ಯೂಸ್‌ನ ಈ ವರದಿಯನ್ನು ನಂದನ್ ರಾಮಕೃಷ್ಣ, ಮಂಡ್ಯ ಎಂಬವರು ಮಾಡಿದ್ದಾರೆ.

ಇದನ್ನೂ ಓದಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌ ಟಿವಿ ತನ್ನ ವೆಬ್‌ಸೈಟ್‌ನಲ್ಲಿ, “ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್‌ ಕೂಗಿದ ವಿದ್ಯಾರ್ಥಿನಿ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ. ಈ ವರದಿಯಲ್ಲಿ ಕೂಡಾ ಪತ್ರಿಕೆ ಯಾವುದೇ ಖಚಿತ ಮಾಹಿತಿಯನ್ನು ನೀಡದೆ ಸುಳ್ಳು ಮಾಹಿತಿಯನ್ನು ಬರೆಯಲಾಗಿದೆ.

ಪವರ್‌ ಟಿವಿಯ ವೆಬ್‌ಸೈಟ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಸುಳ್ಳು ಸುದ್ದಿಯನ್ನು ಪ್ರಶ್ನಾರ್ಥಕವಾಗಿ ಬರೆದು ಓದುಗರನ್ನು ದಾರಿ ತಪ್ಪಿಸಿದೆ. ಜೊತೆಗೆ ವರದಿಯಲ್ಲಿ, ಮುಸ್ಕಾನ್ ಪೊಲೀಸರನ್ನು ಯಾಮಾರಿಸಿ ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರತಿಪಾದಿಸಿದೆ.

ವಿಜಯವಾಣಿ ಕೂಡಾ ತಮ್ಮ ವೆಬ್‌ಸೈಟ್‌ನಲ್ಲಿ ಪೊಲೀಸರನ್ನು ಯಾಮಾರಿಸಿ ಮುಸ್ಕಾನ್ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿ ಮಾಡಿದೆ. ಸಂಜೆವಾಣಿ ಪತ್ರಿಕೆಯ ವೆಬ್‌ಸೈಟ್‌ನಲ್ಲಿ, “ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್‌ ಕುಟುಂಬ” ಎಂಬ ಹೆಡ್‌ಲೈನ್ ನೀಡಿ ವರದಿ ಪ್ರಕಟಿಸಿದೆ.

ಇನ್ನೂ ಕೆಲವು ಮಾಧ್ಯಮಗಳು, ಯಾವುದೇ ಸುದ್ದಿ ಮೌಲ್ಯವಿಲ್ಲದ, ಕುಟುಂಬವೊಂದರ ವೈಯಕ್ತಿಕ ಪ್ರವಾಸವನ್ನು ವರದಿ ಮಾಡಿದ್ದು, ಜನರನ್ನು ದಾರಿ ತಪ್ಪಿಸಿವೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಮುಸ್ಕಾನ್‌ ಮತ್ತು ಅವರ ಕುಟುಂಬ ಪೊಲೀಸರನ್ನು ಯಾಮಾರಿಸಿ ಹೋಗಿದ್ದರೆ? ಪೊಲೀಸರು ಹೇಳಿದ್ದೇನು?

ವಾಸ್ತವದಲ್ಲಿ ಮುಸ್ಕಾನ್ ಮತ್ತು ಅವರ ಕುಟುಂಬ ರಂಜಾನ್ ಸಮಯದಲ್ಲೇ ಮುಸ್ಲಿಮರ ಪವಿತ್ರ ಸ್ಥಳವಾದ ಸೌದಿ ಅರೇಬಿಯಾದ ಮಕ್ಕಾಗೆ ತೀರ್ಥ ಯಾತ್ರೆಗೆ ಹೋಗಿರುವುದು ವರದಿಯಾಗಿದೆ. ಆದರೆ ಅವರು ಪೊಲೀಸರನ್ನು ಯಾಮಾರಿಸಿ ಹೋಗಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಂಡ್ಯ ಪೂರ್ವ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿ, “ಹೊರ ದೇಶಕ್ಕೆ ಹೋಗುವ ನಿಯಮದಂತೆ, ಕಾನೂನು ಬದ್ದವಾಗಿಯೇ ಮುಸ್ಕಾನ್ ಅವರ ಕುಟುಂಬ ವಿದೇಶಕ್ಕೆ ಹೋಗಿದೆ. ಪೊಲೀಸರಿಗೆ ಯಾಮಾರಿಸಿ, ಹೇಳದೆ ಕೇಳದೆ, ಯಾರದೇ ಕಣ್ಣು ತಪ್ಪಿಸಿ ಹೋಗಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಎಲ್ಲಿಗಾದರೂ ತೆರಳಬೇಕಾದರೆ ಪೊಲೀಸರಿಗೆ ತಿಳಿಸಬೇಕು ಎಂದು ಪೊಲೀಸರು ಮೌಖಿಕವಾಗಿ ತಿಳಿಸಿದ್ದಾರೆ” ಎಂಬ ಸುವರ್ಣ ಟಿವಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಇವೆಲ್ಲಾ ಸುಳ್ಳು ಸುದ್ದಿ, ಅವರ ಮೇಲಾಗಲಿ ಅವರ ಕುಟುಂಬದ ಮೇಲಾಗಲಿ ಯಾವುದೇ ಪ್ರಕರಣ ಇಲ್ಲ. ಅವರಿಗೆ ಕ್ರಿಮಿನಲ್ ಹಿನ್ನಲೆಯೂ ಇಲ್ಲ. ಹೀಗಾಗಿ ಅವರನ್ನು ಮಾನಿಟರ್‌ ಮಾಡುವ ಅವಶ್ಯಕತೆಯೂ ಇಲ್ಲ. ಅವರನ್ನು ತನಿಖೆ ಮಾಡಬೇಕು ಎನ್ನುತ್ತಾರೆ, ಆದರೆ ಅವರು ಯಾವ ತಪ್ಪು ಮಾಡಿದ್ದಾರೆ ಎಂದು ತನಿಖೆ ಮಾಡಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

“ಮಾಧ್ಯಮಗಳಿಗೆ ಯಾವುದೇ ಸುದ್ದಿ ಇಲ್ಲದೆ ಇರುವುದಕ್ಕೆ ಏನೋ ಒಂದನ್ನು ಬರೆದಿದ್ದಾರೆ. ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮಗೆ ಬೇಜಾರಾಗುತ್ತದೆ. ಪೊಲೀಸರ ಹೆಸರು ಬಳಸಿಕೊಂಡು ಮಾಧ್ಯಮಗಳು ಸುಳ್ಳು ಹರಡುತ್ತಿರುವುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದೆ. ಅಂತಹ ಮಾಧ್ಯಮಗಳ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...